ನವದೆಹಲಿ:ಲೋಕಸಭಾ ಚುನಾವಣೆ ಸಮೀಪಿಸುತ್ತಿರುವ ಬೆನ್ನಲ್ಲೇ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಆರ್ಥಿಕವಾಗಿ ಹಿಂದುಳಿದ ಮೇಲ್ವರ್ಗದವರಿಗೆ ಉದ್ಯೋಗ ಮತ್ತು ಶಿಕ್ಷಣದಲ್ಲಿ ಶೇ.10ರಷ್ಟು ಮೀಸಲಾತಿ ನೀಡುವ ಮಹತ್ವದ ನಿರ್ಧಾರವನ್ನು ಕೇಂದ್ರ ಸಚಿವ ಸಂಪುಟ ಕೈಗೊಂಡಿದೆ.
ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ನಿರ್ಣಯ ಕೈಗೊಳ್ಳಲಾಗಿದೆ. ಈ ನಿರ್ಣಯದಿಂದ ಮೋದಿ ಸರ್ಕಾರ ಮುಂದಿನ ದಿನಗಳಲ್ಲಿ ಮೇಲ್ವರ್ಗದ ಜನತೆಗೆ ಸರ್ಕಾರಿ ಉದ್ಯೋಗಗಳಲ್ಲಿ ಶೇ.10 ರಷ್ಟು ಮೀಸಲಾತಿ ನೀಡಲು ಕಾನೂನಿಗೆ ತಿದ್ದುಪಡಿ ತರಲಿದೆ.
ಶೇ.50ರಿಂದ ಶೇ.60ಕ್ಕೆ ಮೀಸಲಾತಿ ಪ್ರಮಾಣ ಏರಿಕೆಯಾಗಬೇಕಾಗಿದ್ದರಿಂದ ಸಂವಿಧಾನ ತಿದ್ದುಪಡಿ ಅಗತ್ಯವಿದೆ. ಈ ನಿಟ್ಟಿನಲ್ಲಿ ವಿಧೇಯಕ ಲೋಕಸಭೆಯಲ್ಲಿ ಹಾಗೂ ರಾಜ್ಯಸಭೆಯಲ್ಲಿ ಮಂಡನೆಯಾಗಿ ಪಾಸ್ ಆಗಬೇಕಾಗಿದೆ. ಬಳಿಕ ರಾಷ್ಟ್ರಪತಿ ಅಂಕಿತ ಬಿದ್ದ ಮೇಲೆ ತಿದ್ದುಪಡಿ ವಿಧೇಯಕ ಜಾರಿಯಾಗಲು ಸಾಧ್ಯ. ಆದರೆ ಇನ್ನೂ 2ಎರಡು ದಿನಗಳ ಕಾಲು ಮುಂದೂಡಿಕೆಯಾಗಲಿರುವ ಕಲಾಪದಲ್ಲಿ ತಿದ್ದುಪಡಿ ವಿಧೇಯಕ ಪಾಸ್ ಆಗುತ್ತದೆಯೇ ಎಂಬುದು ಕುತೂಹಲಕ್ಕೆ ಎಡೆಮಾಡಿಕೊಟ್ಟಿದೆ. ಅಲ್ಲದೇ ಮೀಸಲಾತಿ ಪ್ರಮಾಣ ಶೇ.50ಕ್ಕಿಂತ ಹೆಚ್ಚಳವಾಗಬಾರದು ಎಂಬುದಾಗಿ ಸುಪ್ರೀಂಕೋರ್ಟ್ ಕೂಡಾ ತೀರ್ಪು ನೀಡಿದೆ.
ಮೋದಿ ಸರ್ಕಾರದ ಈ ನಿರ್ಣಯದಿಂದ ಇನ್ನು ಮುಂದಿನ ದಿನಗಳಲ್ಲಿ ಎಸ್ ಸಿ, ಎಸ್ ಟಿ ಹೊರತಾಗಿ, ಆರ್ಥಿಕವಾಗಿ ಹಿಂದುಳಿದ ಸಾಮಾನ್ಯ ವರ್ಗವರಿಗೂ ಮೀಸಲಾತಿ ಸಿಗಲಿದೆ.
ಗ್ಯಾರಂಟಿ ಯೋಜನೆಗಳಿಂದ ಮಹಿಳಾ ಸಬಲೀಕರಣ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಬೆಂಗಳೂರು: ಮಹಿಳೆಯರನ್ನು ಸಬಲೀಕರಣ ಮಾಡುವ ಕೆಲಸವನ್ನು ನಮ್ಮ ಸರಕಾರ ಪ್ರಾಮಾಣಿಕವಾಗಿ…
ಒಣಗಿದ ದಾಸವಾಳ ನುಂಗಿ ಆರೂವರೆ ತಿಂಗಳ ಮಗು ಉಸಿರುಗಟ್ಟಿ ಸಾವು ಮೈಸೂರು: ಒಣಗಿದ ದಾಸವಾಳ ಹೂನುಂಗಿ ಮಗು ಉಸಿರುಗಟ್ಟಿ ಸಾವನ್ನಪ್ಪಿದ…
ಏ. 2ರಂದು ಕುಂದಾಪುರ ಭಂಡಾರ್ಕಾರ್ಸ್ ಕಾಲೇಜಿನಲ್ಲಿ ಜಿಲ್ಲಾ ಮಟ್ಟದ ಉದ್ಯೋಗ ಮೇಳ ಉಡುಪಿ : ಜಿಲ್ಲಾಡಳಿತ, ಜಿಪಂ, ಕೌಶಲ್ಯಾಭಿವೃದ್ಧಿ, ಉದ್ಯಮ…
ಅಡುಗೆ ಅನಿಲದ ಅಭಾವ - ತಾತ್ಕಾಲಿಕವಾಗಿ ಸೌದೆ ಒಲೆ ಬಳಸುವಂತೆ ಸಚಿವ ಕೆ.ಹೆಚ್. ಮುನಿಯಪ್ಪ ಮನವಿ ಬೆಂಗಳೂರು : ಗಲ್ಫ್…
ತೊಕ್ಕೊಟ್ಟು : ಆರಿಫ್ ಕೊಲೆ ಪ್ರಕರಣ ; ಆರು ಆರೋಪಿಗಳು ಭಾಗಿ - ಸಿಸಿಬಿ ಎಸಿಪಿ ತಂಡದಿಂದ ಮುಂದಿನ ತನಿಖೆ…
ಕಾಪು : ಇಲಿ ಪಾಷಾಣ ಸೇವಿಸಿ ವ್ಯಕ್ತಿ ಆತ್ಮಹತ್ಯೆ ಕಾಪು: ಉಳಿಯಾರಗೋಳಿ ಗ್ರಾಮದ ನೀಲಾಧರ ಬಂಗೇರ (58) ಇಲಿ ಪಾಷಾಣ…