ನವದೆಹಲಿ:ಲೋಕಸಭಾ ಚುನಾವಣೆ ಸಮೀಪಿಸುತ್ತಿರುವ ಬೆನ್ನಲ್ಲೇ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಆರ್ಥಿಕವಾಗಿ ಹಿಂದುಳಿದ ಮೇಲ್ವರ್ಗದವರಿಗೆ ಉದ್ಯೋಗ ಮತ್ತು ಶಿಕ್ಷಣದಲ್ಲಿ ಶೇ.10ರಷ್ಟು ಮೀಸಲಾತಿ ನೀಡುವ ಮಹತ್ವದ ನಿರ್ಧಾರವನ್ನು ಕೇಂದ್ರ ಸಚಿವ ಸಂಪುಟ ಕೈಗೊಂಡಿದೆ.
ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ನಿರ್ಣಯ ಕೈಗೊಳ್ಳಲಾಗಿದೆ. ಈ ನಿರ್ಣಯದಿಂದ ಮೋದಿ ಸರ್ಕಾರ ಮುಂದಿನ ದಿನಗಳಲ್ಲಿ ಮೇಲ್ವರ್ಗದ ಜನತೆಗೆ ಸರ್ಕಾರಿ ಉದ್ಯೋಗಗಳಲ್ಲಿ ಶೇ.10 ರಷ್ಟು ಮೀಸಲಾತಿ ನೀಡಲು ಕಾನೂನಿಗೆ ತಿದ್ದುಪಡಿ ತರಲಿದೆ.
ಶೇ.50ರಿಂದ ಶೇ.60ಕ್ಕೆ ಮೀಸಲಾತಿ ಪ್ರಮಾಣ ಏರಿಕೆಯಾಗಬೇಕಾಗಿದ್ದರಿಂದ ಸಂವಿಧಾನ ತಿದ್ದುಪಡಿ ಅಗತ್ಯವಿದೆ. ಈ ನಿಟ್ಟಿನಲ್ಲಿ ವಿಧೇಯಕ ಲೋಕಸಭೆಯಲ್ಲಿ ಹಾಗೂ ರಾಜ್ಯಸಭೆಯಲ್ಲಿ ಮಂಡನೆಯಾಗಿ ಪಾಸ್ ಆಗಬೇಕಾಗಿದೆ. ಬಳಿಕ ರಾಷ್ಟ್ರಪತಿ ಅಂಕಿತ ಬಿದ್ದ ಮೇಲೆ ತಿದ್ದುಪಡಿ ವಿಧೇಯಕ ಜಾರಿಯಾಗಲು ಸಾಧ್ಯ. ಆದರೆ ಇನ್ನೂ 2ಎರಡು ದಿನಗಳ ಕಾಲು ಮುಂದೂಡಿಕೆಯಾಗಲಿರುವ ಕಲಾಪದಲ್ಲಿ ತಿದ್ದುಪಡಿ ವಿಧೇಯಕ ಪಾಸ್ ಆಗುತ್ತದೆಯೇ ಎಂಬುದು ಕುತೂಹಲಕ್ಕೆ ಎಡೆಮಾಡಿಕೊಟ್ಟಿದೆ. ಅಲ್ಲದೇ ಮೀಸಲಾತಿ ಪ್ರಮಾಣ ಶೇ.50ಕ್ಕಿಂತ ಹೆಚ್ಚಳವಾಗಬಾರದು ಎಂಬುದಾಗಿ ಸುಪ್ರೀಂಕೋರ್ಟ್ ಕೂಡಾ ತೀರ್ಪು ನೀಡಿದೆ.
ಮೋದಿ ಸರ್ಕಾರದ ಈ ನಿರ್ಣಯದಿಂದ ಇನ್ನು ಮುಂದಿನ ದಿನಗಳಲ್ಲಿ ಎಸ್ ಸಿ, ಎಸ್ ಟಿ ಹೊರತಾಗಿ, ಆರ್ಥಿಕವಾಗಿ ಹಿಂದುಳಿದ ಸಾಮಾನ್ಯ ವರ್ಗವರಿಗೂ ಮೀಸಲಾತಿ ಸಿಗಲಿದೆ.
2028ಕ್ಕೆ ರಾಜ್ಯದಲ್ಲಿ ಇದೇ ಡಿ.ಕೆ. ಶಿವಕುಮಾರ್ ಹಾಗೂ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ : ಡಿ.ಕೆ.ಶಿವಕುಮಾರ್ ವಿಶ್ವಾಸ ಬೆಂಗಳೂರು: '2028ಕ್ಕೆ ರಾಜ್ಯದಲ್ಲಿ…
ಬೆಳ್ತಂಗಡಿ : ಡೋರ್ ಲಾಕ್ ಆಗಿ ಕಾರಿನೊಳಗೆ ಸಿಲುಕಿಕೊಂಡ ಮಗು; ಗ್ಲಾಸ್ ಒಡೆದು ರಕ್ಷಣೆ ಬೆಳ್ತಂಗಡಿ: ಕುವೆಟ್ಟು ಗ್ರಾಮದ ಮದ್ದಡ್ಕದಲ್ಲಿ…
ತೈಲ ದರ ಹೆಚ್ಚಳದಿಂದ ಲಾಭ ಇರೋದು ರಾಜ್ಯಕ್ಕೆ ,ಕೇಂದ್ರಕ್ಕಲ್ಲ: ಆರ್. ಅಶೋಕ್ ಸಮರ್ಥನೆ ಬೆಂಗಳೂರು: ತೈಲ ದರ ಹೆಚ್ಚಳದಿಂದ ಕೇಂದ್ರಕ್ಕೆ…
ಬಕ್ರೀದ್ ಹಬ್ಬದ ವೇಳೆ ಸಾರ್ವಜನಿಕ ಸ್ಥಳಗಳಲ್ಲಿ ಪ್ರಾಣಿ ಬಲಿ, ರಸ್ತೆ ತಡೆದು ನಮಾಝ್ಗೆ ಅವಕಾಶವಿಲ್ಲ: ಯೋಗಿ ಆದಿತ್ಯನಾಥ್ ಲಕ್ನೋ: ಬಕ್ರೀದ್…
ಉಡುಪಿ : ಕೇಂದ್ರ ಮೋದಿ ಸರ್ಕಾರದಿಂದ ಪೆಟ್ರೋಲ್ ದರ ಹೆಚ್ಚಳಕ್ಕೆ ನವೀನ್ ಸಾಲಿಯಾನ್ ಖಂಡನೆ ಉಡುಪಿ: ದೇಶದಲ್ಲಿ ಮತ್ತೆ ಇಂಧನ…
ಕೊಲ್ಲೂರು : ಅಪಘಾತದಿಂದ ಮೃತಪಟ್ಟ ಮಹಿಳೆಯ ಚಿನ್ನಾಭರಣ ಕಳವು ಪ್ರಕರಣ : ಆರೋಪಿ ಬಂಧನ ಉಡುಪಿ: ಬೈಂದೂರು ತಾಲೂಕು ಕೊಲ್ಲೂರು…