Featured

ಮೋದಿ ಸರಕಾರದ ಈ ಕ್ರಮಕ್ಕೆ ‘ಬಾಂಗ್ಲಾ’ ದೀದಿ ಮತ್ತು ಕಾಂಗ್ರೆಸ್ ಕಂಗಾಲು.. ..

ನವದೆಹಲಿ : ಉತ್ತರ ಭಾರತ ಮಾತ್ರವಲ್ಲದೆ ದಕ್ಷಿಣ ಭಾರತದ ಕೆಲ ರಾಜ್ಯಗಳಲ್ಲೂ ಅಕ್ರಮವಾಗಿ ವಲಸೆ ಬಂದು ಆಶ್ರಯ ಪಡೆಯುತ್ತಿರುವ ಬಾಂಗ್ಲಾ ದೇಶದ ನಿವಾಸಿಗಳನ್ನು ದೇಶದಿಂದ ಓಡಿಸಬೇಕು ಎಂಬ ಕೂಗು ಈ ಹಿಂದಿನಿಂದಲೂ ಕೇಳಿ ಬರುತ್ತಲೇ ಇತ್ತು. ಆದರೆ ಈ ಹಿಂದಿನ ಕಾಂಗ್ರೆಸ್ ಸರಕಾರ ತಮ್ಮ ರಾಜಕೀಯ ಲಾಭವನ್ನೇ ಗಮನದಲ್ಲಿಟ್ಟುಕೊಂಡು ಯಾವುದನ್ನೂ ತಡೆಯುವ ಪ್ರಯತ್ನ ಮಾಡಿರಲಿಲ್ಲ, ಆದರೆ ಇದೀಗ ಮೋದಿ ಸರಕಾರ ಅಕ್ರಮ ವಲಸಿಗರಿಗೆ ಬ್ರೇಕ್ ಹಾಕುವ ಸಲುವಾಗಿ ಸುಮಾರು ೪೦ ಲಕ್ಷ ಬಾಂಗ್ಲಾ ವಲಸಿಗರನ್ನು ದೇಶದಿಂದ ಕಿಕ್ ಔಟ್ ಮಾಡಲು ನಿರ್ಧರಿಸಿದೆ..

ದೇಶದಲ್ಲಿ ಸುಮಾರು ೪೦ ಲಕ್ಷ ಜನರು ಭಾರತದ ಪೌರತ್ವವನ್ನು ಅಕ್ರಮವಾಗಿ ಪಡೆದಿದ್ದಾರೆ ಎಂಬ ಅಂಕಿ ಅಂಶವನ್ನು ಗಂಭೀರವಾಗಿ ಪರಿಗಣಿಸಿದ ಕೇಂದ್ರ ಸರಕಾರ ಈ ಜಾಲವನ್ನು ತಡೆಯಲೆಂದೇ ಒಂದು ಹೆಜ್ಜೆ ಮುಂದೆ ಬಂದು ಎಲ್ಲಾ ವಿರೋಧಿಗಳಿಗೂ ಬಿಗ್ ಶಾಕ್ ನೀಡಿದ್ದಾರೆ. ಏಕೆಂದರೆ ಕಾಂಗ್ರೆಸ್ ಸೇರಿದಂತೆ ಪಶ್ಚಿಮ ಬಂಗಾಳದ ದೀದಿ ಸರಕಾರ (ತೃಣಮೂಲ ಕಾಂಗ್ರೆಸ್) ಆಡಳಿತದಲ್ಲಿ ಇದೆ ಎಂದರೆ ಅದಕ್ಕೆ ಕಾರಣ ಈ ಅಕ್ರಮ ವಲಸಿಗರು. ಬಂಗಾಲಿ ಭಾಷೆ ಮಾತನಾಡುವುದರಿಂದ ಯಾರಿಗೂ ಸಂಶಯ ಕೂಡ ಬರುವುದಿಲ್ಲ, ಆದ್ದರಿಂದ ಇದನ್ನೇ ಬಂಡವಾಳವನ್ನಾಗಿ ಇಟ್ಟುಕೊಂಡ ದೀದಿ ಸರಕಾರ ಭಾರೀ ಸಂಖ್ಯೆಯಲ್ಲಿ ಅಕ್ರಮ ಬಾಂಗ್ಲಾ ವಲಸಿಗರಿಗೆ ಭಾರತದ ಪೌರತ್ವ ನೀಡಿತ್ತು. ಈ ವಿಚಾರ ಇದೀಗ ಬಯಲಾಗಿರುವುದರಿಂದ ಈ ಎಲ್ಲಾ ವಲಸಿಗರನ್ನೂ ಭಾರತದಿಂದ ಓಡಿಸಲು ಕೇಂದ್ರ ಸರಕಾರ ನಿರ್ಧರಿಸಿದೆ. ಮೋದಿ ಸರಕಾರದ ಈ ಕ್ರಮವನ್ನು ನಿಜವಾದ ದೇಶಭಕ್ತರಾದರೆ ಬೆಂಬಲಿಸಬೇಕಿತ್ತು, ಆದರೆ ಕಾಂಗ್ರೆಸ್ ಸೇರಿದಂತೆ ತೃಣಮೂಲ ಕಾಂಗ್ರೆಸ್ ವಿರೋಧಿಸಲು ಆರಂಭಿಸಿದೆ.

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿಯವರು ಕೇಂದ್ರ ಸರಕಾರದ ಈ ಕ್ರಮವನ್ನು ಖಂಡಿಸಿದ್ದು, ಕೇಂದ್ರದ ಬಿಜೆಪಿ ಸರಕಾರ ಭಾರತೀಯರನ್ನು ದೇಶದಿಂದ ಹೊರದಬ್ಬಲು ಪ್ರಯತ್ನಿಸುತ್ತಿದೆ, ಹಾಗಾದರೆ ಈ ೪೦ ಲಕ್ಷ ಜನ ಎಲ್ಲಿಗೆ ಹೋಗಬೇಕು? ಮತ್ತು ಅವರಿಗೆ ಕೇಂದ್ರ ಸರಕಾರ ಪುನರ್ವಸತಿ ಕಲ್ಪಿಸುತ್ತದೆಯೇ? ಎಂದು ಪ್ರಶ್ನಿಸಿದ್ದಾರೆ. ಅದೇ ರೀತಿ ಕಾಂಗ್ರೆಸ್ ಮುಖಂಡ ರಿಫುನ್ ಬೋರಾ ಅವರು , ಈ ನಿರ್ಧಾರದ ಹಿಂದೆ ಬಿಜೆಪಿಯ ರಾಜಕೀಯ ಉದ್ದೇಶವಿದೆ, ಇದನ್ನು ಯಾವುದೇ ಕಾರಣಕ್ಕೂ ಒಪ್ಪಿಕೊಳ್ಳಲು ಸಾಧ್ಯವಿಲ್ಲ ಎಂದಿದ್ದಾರೆ.

ಅಷ್ಟಕ್ಕೂ ಅಕ್ರಮ ವಲಸಿಗರ ಬಗ್ಗೆ ಕ್ರಮ ಕೈಗೊಳ್ಳಲು ಕೇಂದ್ರ ಸರಕಾರ ಮುಂದಾದರೆ ಈ ಕೆಲ ರಾಜಕೀಯ ಪಕ್ಷಗಳು ಯಾಕೆ ವಿರೋಧಿಸುತ್ತಿದೆ ಎಂಬುದನ್ನು ವಿವರವಾಗಿ ಹೇಳಬೇಕಾಗಿಲ್ಲ. ಏಕೆಂದರೆ ತಮ್ಮ ಅಧಿಕಾರದ ಕುರ್ಚಿ ಗಟ್ಟಿಯಾಗಿ ಉಳಿಯಬೇಕಾದರೆ ಕೇವಲ ಅಕ್ರಮ ವಿದೇಶಿ ವಲಸಿಗರಿಂದ ಮಾತ್ರ ಸಾಧ್ಯ, ನೈಜ ಭಾರತೀಯರು ಇಂತಹ ದೇಶದ್ರೋಹಿಗಳ ಪರವಾಗಿ ಎಂದಿಗೂ ನಿಲ್ಲುವುದಿಲ್ಲ ಎಂಬುದು ಸ್ಪಷ್ಟವಾಗಿ ಗೊತ್ತಿರುವ ಕಾರಣದಿಂದಲೇ ಮೋದಿ ಸರಕಾರದ ಈ ಕ್ರಮವನ್ನು ವಿರೋಧಿಸುತ್ತಿದ್ದಾರೆ..

 

ಜಾಹಿರಾತು: vyshali Bar& Family Restaurant kaup: 

prop: NAYESH P SHETTY: 9620427036

Vishwa News 24

Recent Posts

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ -vishwanews24

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…

4 days ago

ದೋಣಿ ಮುಗುಚಿ ಇಬ್ಬರು ಯುವಕರು ನೀರುಪಾಲು : ಓರ್ವನ ಮೃತದೇಹ ಪತ್ತೆ, ಇನ್ನೋರ್ವನಿಗಾಗಿ ಶೋಧ – vishwanews24

ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು  ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…

5 days ago

ಬಿಜೆಪಿ ಬೆಂಬಲಿಸುವವರೂ ನಮ್ಮ ಗ್ಯಾರಂಟಿಗಳ ಫಲಾನುಭವಿಗಳು : ಸಿದ್ದರಾಮಯ್ಯ – vishwanews24

 ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…

5 days ago

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ – vishwanews24

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…

5 days ago

ರೈಲು ಪ್ರಯಾಣಿಕರ ಗಮನಕ್ಕೆ: ಇಂದಿನಿಂದ ಬುಕ್ಕಿಂಗ್ ಮತ್ತು ರದ್ದತಿ  ನಿಯಮದಲ್ಲಿ ಭಾರಿ ಬದಲಾವಣೆ ; ಇಲ್ಲಿದೆ ಪೂರ್ಣ ಮಾಹಿತಿ – vishwanews24

ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…

5 days ago

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ – vishwanews24

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…

5 days ago