Featured

ಮೋದಿ ಸರಕಾರದ ಈ ಕ್ರಮಕ್ಕೆ ‘ಬಾಂಗ್ಲಾ’ ದೀದಿ ಮತ್ತು ಕಾಂಗ್ರೆಸ್ ಕಂಗಾಲು.. ..

ನವದೆಹಲಿ : ಉತ್ತರ ಭಾರತ ಮಾತ್ರವಲ್ಲದೆ ದಕ್ಷಿಣ ಭಾರತದ ಕೆಲ ರಾಜ್ಯಗಳಲ್ಲೂ ಅಕ್ರಮವಾಗಿ ವಲಸೆ ಬಂದು ಆಶ್ರಯ ಪಡೆಯುತ್ತಿರುವ ಬಾಂಗ್ಲಾ ದೇಶದ ನಿವಾಸಿಗಳನ್ನು ದೇಶದಿಂದ ಓಡಿಸಬೇಕು ಎಂಬ ಕೂಗು ಈ ಹಿಂದಿನಿಂದಲೂ ಕೇಳಿ ಬರುತ್ತಲೇ ಇತ್ತು. ಆದರೆ ಈ ಹಿಂದಿನ ಕಾಂಗ್ರೆಸ್ ಸರಕಾರ ತಮ್ಮ ರಾಜಕೀಯ ಲಾಭವನ್ನೇ ಗಮನದಲ್ಲಿಟ್ಟುಕೊಂಡು ಯಾವುದನ್ನೂ ತಡೆಯುವ ಪ್ರಯತ್ನ ಮಾಡಿರಲಿಲ್ಲ, ಆದರೆ ಇದೀಗ ಮೋದಿ ಸರಕಾರ ಅಕ್ರಮ ವಲಸಿಗರಿಗೆ ಬ್ರೇಕ್ ಹಾಕುವ ಸಲುವಾಗಿ ಸುಮಾರು ೪೦ ಲಕ್ಷ ಬಾಂಗ್ಲಾ ವಲಸಿಗರನ್ನು ದೇಶದಿಂದ ಕಿಕ್ ಔಟ್ ಮಾಡಲು ನಿರ್ಧರಿಸಿದೆ..

ದೇಶದಲ್ಲಿ ಸುಮಾರು ೪೦ ಲಕ್ಷ ಜನರು ಭಾರತದ ಪೌರತ್ವವನ್ನು ಅಕ್ರಮವಾಗಿ ಪಡೆದಿದ್ದಾರೆ ಎಂಬ ಅಂಕಿ ಅಂಶವನ್ನು ಗಂಭೀರವಾಗಿ ಪರಿಗಣಿಸಿದ ಕೇಂದ್ರ ಸರಕಾರ ಈ ಜಾಲವನ್ನು ತಡೆಯಲೆಂದೇ ಒಂದು ಹೆಜ್ಜೆ ಮುಂದೆ ಬಂದು ಎಲ್ಲಾ ವಿರೋಧಿಗಳಿಗೂ ಬಿಗ್ ಶಾಕ್ ನೀಡಿದ್ದಾರೆ. ಏಕೆಂದರೆ ಕಾಂಗ್ರೆಸ್ ಸೇರಿದಂತೆ ಪಶ್ಚಿಮ ಬಂಗಾಳದ ದೀದಿ ಸರಕಾರ (ತೃಣಮೂಲ ಕಾಂಗ್ರೆಸ್) ಆಡಳಿತದಲ್ಲಿ ಇದೆ ಎಂದರೆ ಅದಕ್ಕೆ ಕಾರಣ ಈ ಅಕ್ರಮ ವಲಸಿಗರು. ಬಂಗಾಲಿ ಭಾಷೆ ಮಾತನಾಡುವುದರಿಂದ ಯಾರಿಗೂ ಸಂಶಯ ಕೂಡ ಬರುವುದಿಲ್ಲ, ಆದ್ದರಿಂದ ಇದನ್ನೇ ಬಂಡವಾಳವನ್ನಾಗಿ ಇಟ್ಟುಕೊಂಡ ದೀದಿ ಸರಕಾರ ಭಾರೀ ಸಂಖ್ಯೆಯಲ್ಲಿ ಅಕ್ರಮ ಬಾಂಗ್ಲಾ ವಲಸಿಗರಿಗೆ ಭಾರತದ ಪೌರತ್ವ ನೀಡಿತ್ತು. ಈ ವಿಚಾರ ಇದೀಗ ಬಯಲಾಗಿರುವುದರಿಂದ ಈ ಎಲ್ಲಾ ವಲಸಿಗರನ್ನೂ ಭಾರತದಿಂದ ಓಡಿಸಲು ಕೇಂದ್ರ ಸರಕಾರ ನಿರ್ಧರಿಸಿದೆ. ಮೋದಿ ಸರಕಾರದ ಈ ಕ್ರಮವನ್ನು ನಿಜವಾದ ದೇಶಭಕ್ತರಾದರೆ ಬೆಂಬಲಿಸಬೇಕಿತ್ತು, ಆದರೆ ಕಾಂಗ್ರೆಸ್ ಸೇರಿದಂತೆ ತೃಣಮೂಲ ಕಾಂಗ್ರೆಸ್ ವಿರೋಧಿಸಲು ಆರಂಭಿಸಿದೆ.

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿಯವರು ಕೇಂದ್ರ ಸರಕಾರದ ಈ ಕ್ರಮವನ್ನು ಖಂಡಿಸಿದ್ದು, ಕೇಂದ್ರದ ಬಿಜೆಪಿ ಸರಕಾರ ಭಾರತೀಯರನ್ನು ದೇಶದಿಂದ ಹೊರದಬ್ಬಲು ಪ್ರಯತ್ನಿಸುತ್ತಿದೆ, ಹಾಗಾದರೆ ಈ ೪೦ ಲಕ್ಷ ಜನ ಎಲ್ಲಿಗೆ ಹೋಗಬೇಕು? ಮತ್ತು ಅವರಿಗೆ ಕೇಂದ್ರ ಸರಕಾರ ಪುನರ್ವಸತಿ ಕಲ್ಪಿಸುತ್ತದೆಯೇ? ಎಂದು ಪ್ರಶ್ನಿಸಿದ್ದಾರೆ. ಅದೇ ರೀತಿ ಕಾಂಗ್ರೆಸ್ ಮುಖಂಡ ರಿಫುನ್ ಬೋರಾ ಅವರು , ಈ ನಿರ್ಧಾರದ ಹಿಂದೆ ಬಿಜೆಪಿಯ ರಾಜಕೀಯ ಉದ್ದೇಶವಿದೆ, ಇದನ್ನು ಯಾವುದೇ ಕಾರಣಕ್ಕೂ ಒಪ್ಪಿಕೊಳ್ಳಲು ಸಾಧ್ಯವಿಲ್ಲ ಎಂದಿದ್ದಾರೆ.

ಅಷ್ಟಕ್ಕೂ ಅಕ್ರಮ ವಲಸಿಗರ ಬಗ್ಗೆ ಕ್ರಮ ಕೈಗೊಳ್ಳಲು ಕೇಂದ್ರ ಸರಕಾರ ಮುಂದಾದರೆ ಈ ಕೆಲ ರಾಜಕೀಯ ಪಕ್ಷಗಳು ಯಾಕೆ ವಿರೋಧಿಸುತ್ತಿದೆ ಎಂಬುದನ್ನು ವಿವರವಾಗಿ ಹೇಳಬೇಕಾಗಿಲ್ಲ. ಏಕೆಂದರೆ ತಮ್ಮ ಅಧಿಕಾರದ ಕುರ್ಚಿ ಗಟ್ಟಿಯಾಗಿ ಉಳಿಯಬೇಕಾದರೆ ಕೇವಲ ಅಕ್ರಮ ವಿದೇಶಿ ವಲಸಿಗರಿಂದ ಮಾತ್ರ ಸಾಧ್ಯ, ನೈಜ ಭಾರತೀಯರು ಇಂತಹ ದೇಶದ್ರೋಹಿಗಳ ಪರವಾಗಿ ಎಂದಿಗೂ ನಿಲ್ಲುವುದಿಲ್ಲ ಎಂಬುದು ಸ್ಪಷ್ಟವಾಗಿ ಗೊತ್ತಿರುವ ಕಾರಣದಿಂದಲೇ ಮೋದಿ ಸರಕಾರದ ಈ ಕ್ರಮವನ್ನು ವಿರೋಧಿಸುತ್ತಿದ್ದಾರೆ..

 

ಜಾಹಿರಾತು: vyshali Bar& Family Restaurant kaup: 

prop: NAYESH P SHETTY: 9620427036

Vishwa News 24

Recent Posts

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ -vishwanews24

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…

9 hours ago

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ -vishwanews24

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…

9 hours ago

ಉಪ್ಪೂರು : ವಯೋವಂದನ ಆತಿಥ್ಯ ಗೃಹ “ಸೈಟ್ ಆಫೀಸ್” ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ -vishwanews24

ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…

2 days ago

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

3 days ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

3 days ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

3 days ago