Featured

ಮೋದಿ ಸರಕಾರದ ಬೆನ್ನಿಗೆ ನಿಂತು ಭದ್ರತಾ ಸಂವಹನ ಒಪ್ಪಂದಕ್ಕೆ ಸಹಿ ಹಾಕಿದ ಅಮೇರಿಕಾ ; ಪಾಕಿಸ್ತಾನಕ್ಕೆ ಬಿಗ್ ಶಾಕ್ ನೀಡಿದ ಭಾರತ ಹಾಗೂ ಯುಸ್ಎ

ನವದೆಹಲಿ: ಪಾಕಿಸ್ತಾನವು ತಾವು ಅಫಘಾನಿಸ್ತಾನದಲ್ಲಿ ಹೊಡೆದುರುಳಿಸುತ್ತಿರುವ ಉಗ್ರರಿಗೆ ಆಶ್ರಯ ನೀಡುತ್ತಾ ಇದೆ ಎಂಬ ಆರೋಪದಲ್ಲಿ ಅದಕ್ಕೆ ನೀಡುತ್ತಿದ್ದ 300 ಮಿಲಿಯನ್ ಡಾಲರ್ ಧನ ಸಹಾಯವನ್ನು ಹಿಂಪಡೆದಿದೆ. ದಿನೇ ದಿನೇ ಸಂಬಂಧವು ಹಳಸುತ್ತಾ ಇದ್ದರೂ ಕೂಡಾ ಬುಧವಾರ ಭೇಟಿಗಾಗಿ ಸೆಕ್ರೆಟರಿ ಮೈಕ್ ಪಾಂಪ್ ಅವರು ತೆರಳಿದ್ದರು.

ಭಾರತ ಮತ್ತು ಅಮೆರಿಕ ಇದೇ ಮೊದಲ ಬಾರಿಗೆ ನಡೆಸಿದ 2+2 ಮಾತುಕತೆಯಲ್ಲಿ ಪಾಕಿಸ್ತಾನಕ್ಕೆ ಉಗ್ರರನ್ನು ಮಟ್ಟಹಾಕುವಂತೆ ಎಚ್ಚರಿಕೆ ನೀಡಲಾಗಿದೆ. 2008ರ ಮುಂಬೈ ದಾಳಿ ನಡೆದು 10 ವರ್ಷಗಳಾಗಿರುವ ಹಿನ್ನೆಲೆಯಲ್ಲಿ, ಪಠಾಣ್‍ಕೋಟ್, ಉರಿಯಲ್ಲಿ ಆತ್ಮಹತ್ಯಾ ದಾಳಿ ಹಾಗೂ ಇತರ ಗಡಿಯಾಚೆಗಿನ ಉಗ್ರ ದಾಳಿಯ ಸಂಚುಕೋರರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ತಾಕೀತು ಮಾಡಲಾಗಿದೆ. ಭಯೋತ್ಪಾದನೆಗೆ ಪ್ರಚೋದನೆ ನೀಡುತ್ತಿರುವ ಪಾಕಿಸ್ತಾನಕ್ಕೆ ಭಾರತ, ಅಮೆರಿಕ ಚಾಟಿ ಬೀಸಿದೆ!! ಇತರ ದೇಶಗಳ ಮೇಲೆ ದಾಳಿ ನಡೆಸುತ್ತಿರುವ ಉಗ್ರರಿಗೆ ಪಾಕಿಸ್ತಾನ ತನ್ನ ನೆಲದಲ್ಲಿ ಅವಕಾಶ ನೀಡಬಾರದು ಎಂದು ಉಭಯ ದೇಶಗಳು ಆಗ್ರಹಿಸಿವೆ. ಪಾಕಿಸ್ತಾನದಲ್ಲಿ ತಲೆಮರೆಸಿಕೊಂಡಿರುವ ಉಗ್ರ ದಾವೂದ್ ಇಬ್ರಾಹಿಂನ ಡಿ ಕಂಪನಿ ವಿರುದ್ಧ ಕ್ರಮ ಕೈಗೊಳ್ಳುವುದಾಗಿ ಈ ಸಂದರ್ಭದಲ್ಲಿ ಅಮೆರಿಕ ಭರವಸೆ ನೀಡಿದೆ. ದಾವೂದ್ ವಿವಿಧ ದೇಶಗಳಲ್ಲಿ ಜಾಲ ಹೊಂದಿದ್ದಾನೆ. ಇದನ್ನು ಪಾಕಿಸ್ತಾನದಿಂದ ನಿಯಂತ್ರಿಸುತ್ತಿದ್ದಾನೆ. ಡಿ ಕಂಪನಿ ಹಾಗೂ ಆತನ ಸಹಚರರ ವಿರುದ್ಧ ಕ್ರಮ ಜರುಗಿಸುವುದಾಗಿ ಸಭೆ ವೇಳೆ ಅಮೆರಿಕ ಭಾರತಕ್ಕೆ ಆಶ್ವಾಸನೆ ನೀಡಿದೆ..

ಇದರಂತೆ ಅಮೇರಿಕಾದ ವಿಶೇಷ ಸೇನಾ ಮಾಹಿತಿಗಳನ್ನು ಭಾರತ ಪಡೆದುಕೊಂಡಿದೆ, ಮಾತ್ರವಲ್ಲದೆ  ಸೇನಾ ತಂತ್ರಜ್ಞಾನವನ್ನು ಕೂಡಾ ಅದು ಪಡೆದುಕೊಳ್ಳಲು ಅನುಮತಿ ಸಿಕ್ಕಿದೆ. ಭಾರತ ಮತ್ತು ಅಮೇರಿಕಾವು ಹಲವಾರು ಸೂಕ್ಷ್ಮ ವಿಷಯಗಳಲ್ಲಿ ಒಟ್ಟಿಗೆ ಕೆಲಸ ಮಾಡಲು ಒಪ್ಪಂದ ಮಾಡಿಕೊಂಡಿವೆ. ಚೀನಾದ ಸಮಸ್ಯೆ, ಇಂಡೋ-ಪ್ಯಾಸಿಫಿಕ್, ಉಗ್ರವಾದ ಸೇರಿದಂತೆ ಹಲವಾರು ವಿಷಯಗಳಲ್ಲಿ ಒಪ್ಪಂದ ಮಾಡಿಕೊಂಡಿವೆ.

ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಹಾಗು ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಅಮೇರಿಕಾದ ಕಾರ್ಯದರ್ಶಿ ಮೈಕ್ ಪಾಂಪ್ ಹಾಗು ರಕ್ಷಣಾ ಕಾರ್ಯದರ್ಶಿ ಜೇಮ್ಸ್ ಮ್ಯಾಟಿಸ್ ಅವರನ್ನು ಬುಧವಾರ ವಿಮಾನ ನಿಲ್ದಾಣದಲ್ಲಿ ಕುದ್ದು ಸ್ವಾಗತಿಸಿದ್ದರು. ನಾಲ್ಕು ನಾಯಕರು ತಮ್ಮ ಮಾತುಕತೆಯನ್ನು ಸಕಾರಾತ್ಮಕವಾಗಿತ್ತು ಎಂದು ಹೇಳಿದರು.

ಅದಲ್ಲದೆ ಭದ್ರತೆ ಮತ್ತು ಸಂವಹನ ಹೊಂದಾಣಿಕೆ ಒಪ್ಪಂದಕ್ಕೆ ಉಭಯ ದೇಶಗಳು ಸಹಿ ಹಾಕಿದ್ದು ಇದರಿಂದ ಅಮೆರಿಕದ ಅತ್ಯಾಧುನಿಕ ಭದ್ರತಾ ತಂತ್ರಜ್ಞಾನ ಭಾರತಕ್ಕೆ ಸಿಗಲಿದೆ. ಭಾರತ ಹಾಗೂ ಅಮೆರಿಕ ನಡುವಿನ ರಕ್ಷಣಾ ಒಪ್ಪಂದದಿಂದ ಚೀನಾ ಮೇಲೆ ನಿಗಾ ಇಡಬಹುದಾಗಿದೆ. ಅಣ್ವಸ್ತ್ರ ಪೂರೈಕೆದಾರರ ಗುಂಪು (ಎನ್‍ಎಸ್‍ಜಿ)ಗೆ ಭಾರತ ಸೇರ್ಪಡೆಯಾಗುವ ನಿಟ್ಟಿನಲ್ಲಿ ಕೆಲಸ ಮಾಡಲು ಅಮೆರಿಕ ಒಪ್ಪಿಗೆ ನೀಡಿದೆ ಎಂದು ಸಭೆಯ ಬಳಿಕ ನಡೆದ ಜಂಟಿ ಪತ್ರಿಕಾಗೋಷ್ಠಿಯಲ್ಲಿ ವಿದೇಶಾಂಗ ಸಚಿವೆ ಸುಷ್ಮಾಸ್ವರಾಜ್ ತಿಳಿಸಿದ್ದಾರೆ. ಮತ್ತೊಂದು ವಿಚಾರವೆಂದರೆ ಭಾರತೀಯ ತಂತ್ರಜ್ಞರ ಎಚ್ 1ಬಿ ವೀಸಾ ನೀತಿ ವಿಚಾರದಲ್ಲಿ ಭಾರತದ ಹಿತಾಸಕ್ತಿಯ ವಿರುದ್ಧ ಅಮೆರಿಕ ನಡೆದುಕೊಳ್ಳುವುದಿಲ್ಲ ಎಂಬ ನಂಬಿಕೆ ನಮಗಿದೆ ಎಂದು ಸಚಿವೆ ಸುಷ್ಮಾ ಸ್ವರಾಜ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

Vishwa News 24

Recent Posts

ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡ ಟೆನಿಸ್ ಆಟಗಾರ ಲಿಯಾಂಡರ್ ಪೇಸ್ – vishwanews24

ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡ ಟೆನಿಸ್ ಆಟಗಾರ ಲಿಯಾಂಡರ್ ಪೇಸ್ ಹೊಸದಿಲ್ಲಿ: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಗೆ ಮುನ್ನ ಟೆನಿಸ್ ಆಟಗಾರ…

6 hours ago

ಬೀದರ್ : ಮಳೆ ಆರ್ಭಟ ; ಸಿಡಿಲು ಬಡಿದು ಯುವಕ ಸಾವು – vishwanews24

ಬೀದರ್ : ಮಳೆ ಆರ್ಭಟ - ಸಿಡಿಲು ಬಡಿದು ಯುವಕ ಸಾವು ಬೀದರ್: ಸಿಡಿಲು ಬಡಿದು ಯುವಕನೊಬ್ಬ ಮೃತಪಟ್ಟ ಘಟನೆ ಔರಾದ್…

7 hours ago

ಬೆಳ್ತಂಗಡಿ:  ಚಲಿಸುತ್ತಿದ್ದ ಕೆಎಸ್ಸಾರ್ಟಿಸಿ ಬಸ್ಸಿನಿಂದ ಎಸೆಯಲ್ಪಟ್ಟು ಇಬ್ಬರು ವಿದ್ಯಾರ್ಥಿನಿಯರಿಗೆ ಗಾಯ – vishwanews24

ಬೆಳ್ತಂಗಡಿ:  ಏಕಾಏಕಿ ತೆರೆಯಲ್ಪಟ್ಟ ಬಸ್ಸಿನ ಬಾಗಿಲು ; ನಿಯಂತ್ರಣ ತಪ್ಪಿ ರಸ್ತೆಗೆ ಎಸೆಯಲ್ಪಟ್ಟು ಇಬ್ಬರು ವಿದ್ಯಾರ್ಥಿನಿಯರಿಗೆ ಗಾಯ ಬೆಳ್ತಂಗಡಿ: ಚಲಿಸುತ್ತಿದ್ದ ಬಸ್ಸಿನಿಂದ…

7 hours ago

ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿಯಲು ಯತ್ನ; ಯುವಕನ ರಕ್ಷಣೆ – vishwanews24

ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿಯಲು ಯತ್ನ; ಯುವಕನ ರಕ್ಷಣೆ ಉಡುಪಿ: ಟಿಕೆಟ್ ಇಲ್ಲದೆ ಪ್ರಯಾಣಿಸುತ್ತಿದ್ದ ಯುವಕನೊಬ್ಬ ರೈಲಿನಿಂದ ಜಿಗಿಯಲು ಯತ್ನಿಸುತ್ತಿದ್ದ…

7 hours ago

ಕಾಸರಗೋಡು :  ಕೆಟ್ಟು ನಿಂತಿದ್ದ ಪಿಕಪ್ ವ್ಯಾನ್ ಗೆ ಬೈಕ್ ಢಿಕ್ಕಿ: ಸವಾರ ಮೃತ್ಯು – vishwanews24

ಕಾಸರಗೋಡು :  ಕೆಟ್ಟು ನಿಂತಿದ್ದ ಪಿಕಪ್ ವ್ಯಾನ್ ಗೆ ಬೈಕ್ ಢಿಕ್ಕಿ: ಸವಾರ ಮೃತ್ಯು ಕಾಸರಗೋಡು : ರಾಷ್ಟ್ರೀಯ ಹೆದ್ದಾರಿಯ ಬದಿಯಲ್ಲಿ…

8 hours ago

ಪ್ರಥಮ ಪಿಯುಸಿ ಫಲಿತಾಂಶ ಪ್ರಕಟ ; ಆನ್‌ಲೈನ್‌ನಲ್ಲಿ ವೀಕ್ಷಿಸುವುದು ಹೇಗೆ? – vishwanews24

ಪ್ರಥಮ ಪಿಯುಸಿ ಫಲಿತಾಂಶ ಪ್ರಕಟ ; ಆನ್‌ಲೈನ್‌ನಲ್ಲಿ ವೀಕ್ಷಿಸುವುದು ಹೇಗೆ? ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯು…

8 hours ago