Featured

ಮೋದಿ ಸರಕಾರ ರಾಮ ಮಂದಿರ ನಿರ್ಮಾಣಕ್ಕೆ ಸುಗ್ರೀವಾಜ್ಞೆ ತರುವ ವಿಶ್ವಾಸವಿದೆ : ಪೇಜಾವರ ಶ್ರೀ

ಉಡುಪಿ:  ಬಹುಮತವನ್ನು ಹೊಂದಿದ ಪ್ರಧಾನಿ ಮೋದಿ ಮನಸ್ಸು ಮಾಡಿದರೆ ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣ ನಿಟ್ಟಿನಲ್ಲಿ ಸುಗ್ರೀವಾಜ್ಞೆ ಜಾರಿಗೆ ತರುವುದು ಸಾಧ್ಯ ಎಂದು ಪೇಜಾವರ ಶ್ರೀವಿಶ್ವೇಶತೀರ್ಥ ಶ್ರೀಪಾದರು ಹೇಳಿದ್ದಾರೆ.

ಅವರು ವಿಶ್ವ ಹಿಂದೂ ಪರಿಷತ್ತಿನ ವತಿಯಿಂದ ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣ ನಿಟ್ಟಿನಲ್ಲಿ ಕೇಂದ್ರ ಸರಕಾರ ಕಾನೂನು ಜಾರಿಗೊಳಿಸುವಂತೆ ಆಗ್ರಹಿಸಿ ಡಿ. 2ರಂದು ಉಡುಪಿಯಲ್ಲಿ ನಡೆಯುವ ಜನಾಗ್ರಹ ಸಭೆ ಅಂಗವಾಗಿ ಶ್ರೀಕೃಷ್ಣಮಠದ ಬಳಿಯ ನ್ಯೂ ಯಾತ್ರಿ ನಿವಾಸ್ ಕಾರ್ಯಾಲಯದಲ್ಲಿ ಶುಕ್ರವಾರ ನಡೆದ ಅಯೋಧ್ಯೆ ಕರಸೇವಕರ ಸನ್ಮಾನ ಸಮಾರಂಭದಲ್ಲಿ ಆಶೀರ್ವಚನ ನೀಡಿದರು.

ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣ ಪಕ್ಷಾತೀತವಾಗಿದ್ದು ಇದು ರಾಷ್ಟ್ರ ಹಾಗೂ ಸಮಗ್ರ ಹಿಂದೂ ಜನತೆಗೆ ಸಂಬಂಧಿಸಿದ್ದಾಗಿದೆ. ಉತ್ತರ ಪ್ರದೇಶದಲ್ಲೂ ಬಿಜೆಪಿ ಸರಕಾರವಿದೆ ಎಂದರು.  ರಾಜ್ಯಸಭೆಯಲ್ಲಿ ಬಹುಮತವಿಲ್ಲದಿದ್ದರೂ ಜಂಟಿ ಸದನ ಸಮಿತಿ ಸಭೆ ಕರೆದು ನಿರ್ಣಯ ಕೈಗೊಂಡರೆ ಇದರ ವಿರುದ್ಧ ಅನ್ಯರು ಕೋರ್ಟಿಗೆ ಹೋಗುವುದು ಕಷ್ಟ. ಮುಸಲ್ಮಾನರೂ ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣಕ್ಕೆ ಒಪ್ಪಿದ್ದಾರೆ. ಕೇಂದ್ರ ಸರಕಾರ ದಿಟ್ಟ ಕ್ರಮ ಕೈಗೊಳ್ಳುವ ನಿರೀಕ್ಷೆಯಿದೆ ಎಂದರು.

ನಾಲ್ಕೂವರೆ ವರ್ಷದಿಂದ ಕೇಂದ್ರ ಸರಕಾರ ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣ ನಿಟ್ಟಿನಲ್ಲಿ ಏನೂ ಮಾಡಿಲ್ಲ. ಈಗ ಉತ್ತಮ ಅವಕಾಶ ಒದಗಿಬಂದಿದೆ. ಸಾಧು, ಸಂತರು ಹಾಗೂ ಕೇಂದ್ರ ಸರಕಾರದ ಮುಂದೆ ಸದವಕಾಶವಿದೆ. ಅದನ್ನು ಉಪಯೋಗಿಸಿಕೊಳ್ಳಬೇಕು. ಹಿಂದೆ ಹೆಜ್ಜೆ ಇಡಬಾರದು ಎಂದರು.

ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣ ವಿವಾದ ಕೋರ್ಟಿನ ಹೊರಗೆ ಮಾತುಕತೆ ಮೂಲಕ ಇತ್ಯರ್ಥವಾದರೆ ಸಂತೋಷ. ಇಲ್ಲವಾದರೆ ನ್ಯಾಯಾಲಯ ವಿಳಂಬ ಮಾಡದೆ ಬೇಗ ತೀರ್ಪನ್ನಾದರೂ ಕೊಡಲಿ ಎಂದರು.

ಇವೆರಡೂ ಸಾಧ್ಯವಾಗದಿದ್ದರೆ ಕೇಂದ್ರ ಸರಕಾರ ವಿಧೇಯಕ ಇಲ್ಲಾ ಸುಗ್ರೀವಾಜ್ಞೆಯನ್ನಾದರೂ ತರಬೇಕು. ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಈ ಬಗ್ಗೆ ಸ್ಪಷ್ಟ ನಿರ್ಧಾರ ಕೈಗೊಳ್ಳಬೇಕು. ಇದನ್ನು ಯಾರೂ ವಿರೋಧಿಸುವ ಕಾರ್ಯ ಮಾಡಲಾರರು. ಕಾಂಗ್ರೆಸ್ ವಿರೋಧಿಸಿದರೆ ಪ್ರತಿಕೂಲ ಪರಿಣಾಮದ ಆತಂಕ ಅದಕ್ಕಿದೆ ಎಂದು ಪೇಜಾವರ ಶ್ರೀಗಳು ಹೇಳಿದರು.

ಸಭೆಯಲ್ಲಿ ಹಿರಿಯ ಮುಖಂಡ ಸೋಮಶೇಖರ ಭಟ್, ಬಜರಂಗದಳ ಪ್ರಾಂತ ಸಂಚಾಲಕ ಸುನೀಲ್ ಕೆ.ಆರ್, ಜಿಲ್ಲಾ ಸಂಚಾಲಕ ದಿನೇಶ್ ಮೆಂಡನ್, ವಿಹಿಂಪ ಕಾರ್ಯದರ್ಶಿ ಪ್ರಮೋದ್ ಶೆಟ್ಟಿ, ನಗರಾಧ್ಯಕ್ಷ ಸಂತೋಷ್ ಶೆಟ್ಟಿ ಉಪಸ್ಥಿತರಿದ್ದರು.

Vishwa News 24

Recent Posts

ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್‌ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ – vishwanews24

ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್‌ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…

17 hours ago

ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ – vishwanews24

ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು  :…

17 hours ago

ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ  – vishwanews24

ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…

17 hours ago

ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ – vishwanews24

ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…

17 hours ago

ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ – vishwanews24

ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್‌ಪೋರ್ಟ್…

18 hours ago

ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು – vishwanews24

ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್‌ಜೆಟ್ (Spice Jet) ವಿಮಾನದಲ್ಲಿ…

18 hours ago