ಮಂಗಳೂರು : ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಆಡಳಿತ ಪ್ಯಾಸಿಝಂ ಸರಕಾರಕ್ಕೆ ಸಮಾನವಾಗಿದೆ. ಹಿಟ್ಲರ್ ಮಾದರಿಯಲ್ಲಿ ಆಡಳಿತ ನಿರ್ವಹಣೆ ಮಾಡುತ್ತಿದೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದರು.
ಚಿಕ್ಕಮಗಳೂರಿನ ಮೂಡಿಗೆರೆ ತಾಲೂಕಿನ ಕಳಸ ಸಮೀಪದ ಎಸ್.ಕೆ.ಮೇಗಲ್ ಗ್ರಾಮದಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವ ರೈತನ ಮನೆಗೆ ಭೇಟಿ ಕೊಡುವ ಸಲುವಾಗಿ ಮಂಗಳೂರು ವಿಮಾನ ನಿಲ್ದಾಣದಲ್ಲಿ ಬಂದಿಳಿದ ಅವರು ಪತ್ರಕರ್ತರೊಂದಿಗೆ ಮಾತನಾಡಿದರು.
ಕೇಂದ್ರ ಸರಕಾರಕ್ಕೆ ನಾವು ಕನಿಷ್ಠ ಪಕ್ಷ 5 ಸಾವಿರ ಕೋಟಿ ರೂ. ಪರಿಹಾರ ತಾತ್ಕಾಲಿಕವಾಗಿ ನೀಡಿ ಎಂದು ಮನವಿ ಮಾಡಿದ್ದೆವು. ಆದರೆ ಎರಡು ತಿಂಗಳ ಬಳಿಕ ಕೇವಲ 1200 ಕೋಟಿ ರೂ. ನೀಡಿದ್ದಾರೆ ಎಂದು ಕೇಂದ್ರ ಸರಕಾರದ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದರು.
ರಾಜ್ಯ ಸರ್ಕಾರ ತನ್ನ ಬೊಕ್ಕಸದಿಂದ ಹಣವನ್ನು ಖರ್ಚು ಮಾಡಿರಬೇಕು. ಆದರೆ ಇದೀಗ ಖಜಾನೆಯಲ್ಲಿ ಹಣವಿಲ್ಲ ಅಂತಾರೆ. ಸಿಎಂಗೆ ಜ್ಞಾನ ಇದ್ಯಾ ಇಲ್ವಾ ಅಂತಾ ಗೊತ್ತಿಲ್ಲ. ಅವರಿಗೆ ಹಣಕಾಸಿನ ಬಗ್ಗೆ ಜ್ಞಾನ ಇಲ್ಲಾ ಅನ್ನುವುದು ಅವರ ಹೇಳಿಕೆಯಿಂದ ಅರ್ಥವಾಗುತ್ತದೆ. ಖಜಾನೆಯಲ್ಲಿ ಹಣ ಖಾಲಿ ಆಗೋಕೆ ಚಾನ್ಸೇ ಇಲ್ಲ. ಯಾಕೆಂದರೆ ಪ್ರತಿ ತಿಂಗಳು ತೆರಿಗೆ ಸಂಗ್ರಹವಾಗುತ್ತೆ ಎಂದು ಹೇಳಿದರು.
ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ ಚೆನ್ನೈ: ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ,…
ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ ಶಿವಮೊಗ್ಗ: ಅಯೋಧ್ಯೆ ರಾಮಮಂದಿರದ ದೇಣಿಗೆ ಲೂಟಿ ಆಗಿರುವ…
ಕರಾವಳಿ-ಮುಂಬೈ ಪ್ರಯಾಣಿಕರಿಗೆ ಸಿಹಿ ಸುದ್ದಿ.. ಮಂಗಳೂರು-ಬಾಂದ್ರಾ ಟರ್ಮಿನಸ್ಗೆ ಶೀಘ್ರ ಹೊಸ ರೈಲು ಸೇವೆ ! ಮಂಗಳೂರು: ಮಂಗಳೂರಿನಿಂದ ವಸಾಯ್ ರೋಡ್…
ಡಿವೈಡರ್ ದಾಟಿ ಓಮ್ನಿಗೆ ಗೂಡ್ಸ್ ವಾಹನ ಡಿಕ್ಕಿ : ಐವರು ದುರ್ಮರಣ ಕೊಪ್ಪಳ: ಗೂಡ್ಸ್ ವಾಹನವೊಂದು ಡಿವೈಡರ್ ದಾಟಿ ಓಮ್ನಿಗೆ…
ಮಲ್ಪೆ ಪ್ರಕರಣ: ಪ್ರಮೋದ್ ಮಧ್ವರಾಜ್ ವಿರುದ್ಧದ ಕ್ರಿಮಿನಲ್ ಪ್ರಕರಣ ರದ್ದು ಬೆಂಗಳೂರು: ಕಳೆದ ವರ್ಷ ಮಲ್ಪೆ ಬಂದರಿನಲ್ಲಿ ಕಳ್ಳತನ ಮಾಡಿ…
ರಾಮ ಮಂದಿರದಲ್ಲಿ ಅವ್ಯವಹಾರದಂತಹ ಘೋರ ಅಪಚಾರಗಳು ನಡೆಯಬಾರದಿತ್ತು.. ಮಂದಿರದ ಅವ್ಯವಹಾರ ಆರೋಪಗಳು ಸತ್ಯವಾಗಿದ್ದರೆ, ಆರೋಪಿಗಳಿಗೆ ತಕ್ಕ ಶಿಕ್ಷೆಯಾಗಲೇಬೇಕು : ಪೇಜಾವರ…