ನವದೆಹಲಿ : ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್ಡಿಎ ಸರಕಾರದ ವಿರುದ್ಧ ಪ್ರತಿಪಕ್ಷಗಳು ಮಂಡಿಸಿರುವ ಅವಿಶ್ವಾಸ ಗೊತ್ತುವಳಿ ಮನವಿಯನ್ನು ಸ್ಪೀಕರ್ ಸುಮಿತ್ರಾ ಮಹಾಜನ್ ಅವರು ಅಂಗೀಕರಿಸಿದ್ದು, ಬರುವ ಶುಕ್ರವಾರ ಮೋದಿ ಸರಕಾರ ಮತ್ತು ಪ್ರತಿಪಕ್ಷಗಳ ನಡುವಿನ ‘ಮೇಲಾಟ’ಕ್ಕೆ ಲೋಕಸಭೆ ಸಾಕ್ಷಿಯಾದ ಬೆನ್ನಲ್ಲೇ ಶಿವ ಸೇನೆ ಮುಖ್ಯಸ್ಥ ಉದ್ಧವ್ ಠಾಕ್ರೆ ಅವಿಶ್ವಾಸ ಗೊತ್ತುವಳಿಯಲ್ಲಿ ನಾವು ಬಿಜೆಪಿ ನೇತೃತ್ವದ ಸರ್ಕಾರವನ್ನು ಬೆಂಬಲಿಸುತ್ತೆವೆ ಎಂದು ತಿಳಿಸಿದ್ದಾರೆ ಎಂದು ವರದಿ ಆಗಿದೆ.ಈ ಬಗ್ಗೆ ಅಧಿಕೃತವಾದ ಘೋಷಣೆಯನ್ನು ಸಂಜೆವೇಳೆ ಉದ್ಧವ್ ಠಾಕ್ರೆ ಮಾಡುವ ಸಾಧ್ಯತೆ ಇದೆ ಎಂದು ವರದಿಗಳು ತಿಳಿಸಿವೆ.ಬಿಜೆಪಿ ನೇತೃತ್ವದ ಎನ್ ಡಿ ಎ ಒಕ್ಕೂಟವನ್ನು ಬೆಂಬಲಿಸುವ ನಿಟ್ಟಿನಲ್ಲಿ ಶಿವ ಸೇನೆ ತನ್ನ ಸಂಸದರಿಗೆ ವಿಪ್ ಕೂಡ ಜಾರಿ ಮಾಡಿದೆ ಎಂದು ತಿಳಿದು ಬಂದಿದೆ.
ಕಳೆದ 4 ವರ್ಷಗಳಲ್ಲಿ ಕೈಗೊಂಡಿರುವ ಆರ್ಥಿಕ ಸುಧಾರಣೆ, ಉದ್ಯಮ ಸ್ನೇಹಿ ವಾತಾವರಣ ಹಾಗೂ ಜನ ಕಲ್ಯಾಣ ಯೋಜನೆಗಳಿಂದ ಬೀಗುತ್ತಿರುವ ಬಿಜೆಪಿ ಮತ್ತದರ ಮಿತ್ರಪಕ್ಷಗಳು ಅವಿಶ್ವಾಸ ಗೊತ್ತುವಳಿಯಿಂದ ಸರಕಾರಕ್ಕೆ ಧಕ್ಕೆಯಾಗದು ಎಂಬ ವಿಶ್ವಾಸದಲ್ಲಿವೆ. ಮಿತ್ರಪಕ್ಷಗಳ ಬೆಂಬಲದ ಹೊರತಾಗಿ 273 ಸದಸ್ಯಬಲ ಹೊಂದಿರುವ ಬಿಜೆಪಿಗೂ ಇದು ಚೆನ್ನಾಗಿ ಗೊತ್ತಿರುವುದರಿಂದ ಸವಾಲು ಎದುರಿಸಲು ಸಿದ್ಧ ಎಂದು ಘಂಟಾಘೋಷವಾಗಿ ಹೇಳಿದೆ.
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ಹಫೀಝ್ ರೆಹಮಾನ್ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…