ಪಟ್ನಾ: ಬಿಹಾರದಲ್ಲಿ ಎನ್ಡಿಎ ಮೈತ್ರಿಕೂಟ 40 ಲೋಕಸಭಾ ಸ್ಥಾನಗಳ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದ್ದು ಬಿಜೆಪಿಯಿಂದ ನಟ ಶತ್ರುಘ್ನ ಸಿನ್ಹಾ ಬದಲಿಗೆ ಕೇಂದ್ರ ಸಚಿವ ರವಿಶಂಕರ್ ಪ್ರಸಾದ್ ಅವರಿಗೆ ಟಿಕೆಟ್ ನೀಡಲಾಗಿದೆ.
ಪಟ್ನಾ ಸಾಹಿಬ್ ಲೋಕಸಭಾ ಕ್ಷೇತ್ರವನ್ನು ಶತ್ರುಘ್ನ ಸಿನ್ಹಾ ಎರಡು ಬಾರಿ ಪ್ರತಿನಿಧಿಸಿದ್ದರು. ಬಿಜೆಪಿಯಿಂದ ಆಯ್ಕೆಯಾಗಿದ್ದರೂ ಮೋದಿ ಸರ್ಕಾರವನ್ನು ಟೀಕೆ ಮಾಡುತ್ತಲೇ ಬಂದಿದ್ದರು. ರಫೇಲ್ ಪ್ರಕರಣ, ಜಿಎಸ್ಟಿ, ನೋಟು ರದ್ದತಿ ಕುರಿತಂತೆ ಕಟುವಾಗಿ ಟೀಕೆ ಮಾಡಿದ್ದರು. ಹಾಗಾಗಿ ಬಿಜೆಪಿ ಈ ಬಾರಿ ಸಿನ್ಹಾಗೆ ಟಿಕೆಟ್ ನಿರಾಕರಿಸಿದೆ. ಪಟ್ನಾ ಸಾಹಿಬ್ ಕ್ಷೇತ್ರಕ್ಕೆ ರವಿಶಂಕರ್ ಪ್ರಸಾದ್ ಅವರಿಗೆ ಟಿಕೆಟ್ ನೀಡಲಾಗಿದೆ.
ಕೇಂದ್ರ ಸಚಿವರಾದ ಗಿರಿರಾಜ್ ಸಿಂಗ್, ರಾಧ ಮೋಹನ್ ಸಿಂಗ್, ಪ್ರತಾಪ್ ಸಿಂಗ್ ರೂಡಿ ಅವರಿಗೂ ಟಿಕೇಟ್ ನೀಡಲಾಗಿದೆ. ಎನ್ಡಿಎ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಸಂದರ್ಭದಲ್ಲಿ ಬಿಹಾರ ಬಿಜೆಪಿ ಮುಖ್ಯಸ್ಥ ನಿತ್ಯಾನಂದ ರೈ, ಜೆಡಿಯು ಅಧ್ಯಕ್ಷ ವಶಿಷ್ಠ ನಾರಾಯಣ ಸಿಂಗ್, ಎಲ್ಜೆಪಿ ವರಿಷ್ಠ ಪಶುಪತಿ ಪರಾಸ್ ಇದ್ದರು.
ಬಿಜೆಪಿ ಮತ್ತು ಜೆಡಿಯು ತಲಾ 17 ಸ್ಥಾನಗಳಲ್ಲಿ ಸ್ಪರ್ಧೆ ಮಾಡಲಿದೆ. ಎನ್ಡಿಎ ಅಂಗಪಕ್ಷವಾದ ಎಲ್ಜೆಪಿ 6 ಸ್ಥಾನಗಳಲ್ಲಿ ಅಭ್ಯರ್ಥಿಗಳನ್ನು ಕಣಕ್ಕೆ ಇಳಿಸಲಿದೆ.
ಉಡುಪಿ : ವ್ಯಕ್ತಿ ನಾಪತ್ತೆ ಉಡುಪಿ : ಹೆಬ್ರಿ ಪೊಲೀಸ್ ಠಾಣಾ ವ್ಯಾಪ್ತಿಯ ನಿವಾಸಿ ವಿಶ್ವನಾಥ ಶೆಟ್ಟಿ (38) ಎಂಬ…
ಬೈಂದೂರು: ಅಲೆಗಳ ಹೊಡೆತಕ್ಕೆ ಮಗುಚಿ ಬಿದ್ದ ಮೀನುಗಾರಿಕಾ ದೋಣಿ ; ಐವರು ಮೀನುಗಾರರು ಪಾರು ಬೈಂದೂರು : ಪ್ರಬಲ ಅಲೆಗಳ…
ಬಂಟ್ವಾಳ: ಆಕಸ್ಮಿಕ ಬೆಂಕಿ ಅವಘಡ; ಬಚ್ಚಲು ಮನೆ ಮತ್ತು ಹಸುವಿನ ಕೊಟ್ಟಿಗೆ ಭಸ್ಮ ; ಅದೃಷ್ಟವಶಾತ್ ಜಾನುವಾರುಗಳು ಅಪಾಯದಿಂದ ಪಾರು …
ಉಡುಪಿ : ಪರ್ಕಳದಲ್ಲಿ ಮತ್ತೆ ಬೀಡಾಡಿ ಗೋವುಗಳಿಗೆ ಚರ್ಮ ಗಂಟು ರೋಗದ ಭೀತಿ; ಮುನ್ನೆಚ್ಚರಿಕೆ ಕ್ರಮಕ್ಕೆ ಒತ್ತಾಯ ಉಡುಪಿ: ಪರ್ಕಳದಲ್ಲಿ…
ಜಲಪಾತಗಳಲ್ಲಿ ಪ್ರವಾಸಿಗರ ಹುಚ್ಚಾಟ ; ಅಪಾಯಕಾರಿ ಸಾಹಸ , ಸೆಲ್ಫಿ, ಈಜಾಟ : ಸ್ಥಳೀಯರ ಆಕ್ರೋಶ ಮಡಿಕೇರಿ: ಮಳೆಗಾಲದಲ್ಲಿ ಮೈದುಂಬಿ…
ಆಸ್ಪತ್ರೆ, ಶಾಲಾ ಆವರಣ ಕ್ಯಾಂಟೀನ್ಗಳಲ್ಲಿ ಜಂಕ್ ಫುಡ್ ನಿಷೇಧ: ಆರೋಗ್ಯ ಸಚಿವ ಯುಟಿ ಖಾದರ್ ಮಂಗಳೂರು: ರಾಜ್ಯದ ಎಲ್ಲ ಆಸ್ಪತ್ರೆ…