ಪಟ್ನಾ: ಬಿಹಾರದಲ್ಲಿ ಎನ್ಡಿಎ ಮೈತ್ರಿಕೂಟ 40 ಲೋಕಸಭಾ ಸ್ಥಾನಗಳ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದ್ದು ಬಿಜೆಪಿಯಿಂದ ನಟ ಶತ್ರುಘ್ನ ಸಿನ್ಹಾ ಬದಲಿಗೆ ಕೇಂದ್ರ ಸಚಿವ ರವಿಶಂಕರ್ ಪ್ರಸಾದ್ ಅವರಿಗೆ ಟಿಕೆಟ್ ನೀಡಲಾಗಿದೆ.
ಪಟ್ನಾ ಸಾಹಿಬ್ ಲೋಕಸಭಾ ಕ್ಷೇತ್ರವನ್ನು ಶತ್ರುಘ್ನ ಸಿನ್ಹಾ ಎರಡು ಬಾರಿ ಪ್ರತಿನಿಧಿಸಿದ್ದರು. ಬಿಜೆಪಿಯಿಂದ ಆಯ್ಕೆಯಾಗಿದ್ದರೂ ಮೋದಿ ಸರ್ಕಾರವನ್ನು ಟೀಕೆ ಮಾಡುತ್ತಲೇ ಬಂದಿದ್ದರು. ರಫೇಲ್ ಪ್ರಕರಣ, ಜಿಎಸ್ಟಿ, ನೋಟು ರದ್ದತಿ ಕುರಿತಂತೆ ಕಟುವಾಗಿ ಟೀಕೆ ಮಾಡಿದ್ದರು. ಹಾಗಾಗಿ ಬಿಜೆಪಿ ಈ ಬಾರಿ ಸಿನ್ಹಾಗೆ ಟಿಕೆಟ್ ನಿರಾಕರಿಸಿದೆ. ಪಟ್ನಾ ಸಾಹಿಬ್ ಕ್ಷೇತ್ರಕ್ಕೆ ರವಿಶಂಕರ್ ಪ್ರಸಾದ್ ಅವರಿಗೆ ಟಿಕೆಟ್ ನೀಡಲಾಗಿದೆ.
ಕೇಂದ್ರ ಸಚಿವರಾದ ಗಿರಿರಾಜ್ ಸಿಂಗ್, ರಾಧ ಮೋಹನ್ ಸಿಂಗ್, ಪ್ರತಾಪ್ ಸಿಂಗ್ ರೂಡಿ ಅವರಿಗೂ ಟಿಕೇಟ್ ನೀಡಲಾಗಿದೆ. ಎನ್ಡಿಎ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಸಂದರ್ಭದಲ್ಲಿ ಬಿಹಾರ ಬಿಜೆಪಿ ಮುಖ್ಯಸ್ಥ ನಿತ್ಯಾನಂದ ರೈ, ಜೆಡಿಯು ಅಧ್ಯಕ್ಷ ವಶಿಷ್ಠ ನಾರಾಯಣ ಸಿಂಗ್, ಎಲ್ಜೆಪಿ ವರಿಷ್ಠ ಪಶುಪತಿ ಪರಾಸ್ ಇದ್ದರು.
ಬಿಜೆಪಿ ಮತ್ತು ಜೆಡಿಯು ತಲಾ 17 ಸ್ಥಾನಗಳಲ್ಲಿ ಸ್ಪರ್ಧೆ ಮಾಡಲಿದೆ. ಎನ್ಡಿಎ ಅಂಗಪಕ್ಷವಾದ ಎಲ್ಜೆಪಿ 6 ಸ್ಥಾನಗಳಲ್ಲಿ ಅಭ್ಯರ್ಥಿಗಳನ್ನು ಕಣಕ್ಕೆ ಇಳಿಸಲಿದೆ.
ಸೆ.25ರಂದು ಉಚ್ಚಿಲದಲ್ಲಿ ಮೊಗವೀರ ಕುಲಗುರು ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಡುಪಿ: ದಕ್ಷಿಣ ಕನ್ನಡ ಮೊಗವೀರ ಮಹಾಜನ…
ಕಾಲೇಜು ಶೈಕ್ಷಣಿಕ ಪ್ರವಾಸದಲ್ಲಿ ಸೆಲ್ಫಿ, ರೀಲ್ಸ್ಗೆ ಸಂಪೂರ್ಣ ನಿಷೇಧ - ಶಿಕ್ಷಣ ಇಲಾಖೆಯಿಂದ ಕಟ್ಟುನಿಟ್ಟಿನ ಮಾರ್ಗಸೂಚಿ! ಬೆಂಗಳೂರು : ವಿದ್ಯಾರ್ಥಿಗಳ…
ಕರ್ನಾಟಕದಲ್ಲಿ ಸೆ.30ರಿಂದ ಸಿನೆಮಾ ಟಿಕೆಟ್ ದರ ಏರಿಕೆ ಬೆಂಗಳೂರು: ಕರ್ನಾಟಕ ಸಿನಿ ಮತ್ತು ಸಾಂಸ್ಕೃತಿಕ ಕಾರ್ಯಕರ್ತರ (ಕ್ಷೇಮಾಭಿವೃದ್ಧಿ) ಕಾಯ್ದೆ ಜಾರಿಗೊಂಡಿರುವ…
ಶೃಂಗೇರಿ: ತುಂಗಾ ನದಿಯಲ್ಲಿ ಈಜಲು ತೆರಳಿದ್ದ ಇಂಜಿನಿಯರಿಂಗ್ ವಿದ್ಯಾರ್ಥಿ ನೀರುಪಾಲು ಬೆಂಗಳೂರಿನಿಂದ ಆಗಮಿಸಿದ್ದ ನಾಲ್ವರು ಸ್ನೇಹಿತರು ಚಿಕ್ಕಮಗಳೂರು: ತುಂಗಾ ನದಿಯಲ್ಲಿ…
ಸಂಪಾದನೆ ಮಾಡಿರೋ ಹಣವನ್ನ ಜನರಿಗೆ ಕೊಟ್ರೆ 2028ಕ್ಕೂ ಡಿಕೆ ಶಿ ಸಿಎಂ ಆಗಬಹುದು : ಹೆಚ್.ಡಿ ಕುಮಾರಸ್ವಾಮಿ ಬೆಂಗಳೂರು: ಡಿಕೆ…
ತುಳು ಭಾಷೆಗೆ ಅಧಿಕೃತ ಮಾನ್ಯತೆ: ದಶಕಗಳ ಹೋರಾಟಕ್ಕೆ ಡಿ.ಕೆ. ಶಿವಕುಮಾರ್ ಅವರಿಂದ ಫಲ ಸಿಕ್ಕಿದೆ : ರಮೇಶ್ ಕಾಂಚನ್ ಉಡುಪಿ:…