ಪಟ್ನಾ: ಬಿಹಾರದಲ್ಲಿ ಎನ್ಡಿಎ ಮೈತ್ರಿಕೂಟ 40 ಲೋಕಸಭಾ ಸ್ಥಾನಗಳ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದ್ದು ಬಿಜೆಪಿಯಿಂದ ನಟ ಶತ್ರುಘ್ನ ಸಿನ್ಹಾ ಬದಲಿಗೆ ಕೇಂದ್ರ ಸಚಿವ ರವಿಶಂಕರ್ ಪ್ರಸಾದ್ ಅವರಿಗೆ ಟಿಕೆಟ್ ನೀಡಲಾಗಿದೆ.
ಪಟ್ನಾ ಸಾಹಿಬ್ ಲೋಕಸಭಾ ಕ್ಷೇತ್ರವನ್ನು ಶತ್ರುಘ್ನ ಸಿನ್ಹಾ ಎರಡು ಬಾರಿ ಪ್ರತಿನಿಧಿಸಿದ್ದರು. ಬಿಜೆಪಿಯಿಂದ ಆಯ್ಕೆಯಾಗಿದ್ದರೂ ಮೋದಿ ಸರ್ಕಾರವನ್ನು ಟೀಕೆ ಮಾಡುತ್ತಲೇ ಬಂದಿದ್ದರು. ರಫೇಲ್ ಪ್ರಕರಣ, ಜಿಎಸ್ಟಿ, ನೋಟು ರದ್ದತಿ ಕುರಿತಂತೆ ಕಟುವಾಗಿ ಟೀಕೆ ಮಾಡಿದ್ದರು. ಹಾಗಾಗಿ ಬಿಜೆಪಿ ಈ ಬಾರಿ ಸಿನ್ಹಾಗೆ ಟಿಕೆಟ್ ನಿರಾಕರಿಸಿದೆ. ಪಟ್ನಾ ಸಾಹಿಬ್ ಕ್ಷೇತ್ರಕ್ಕೆ ರವಿಶಂಕರ್ ಪ್ರಸಾದ್ ಅವರಿಗೆ ಟಿಕೆಟ್ ನೀಡಲಾಗಿದೆ.
ಕೇಂದ್ರ ಸಚಿವರಾದ ಗಿರಿರಾಜ್ ಸಿಂಗ್, ರಾಧ ಮೋಹನ್ ಸಿಂಗ್, ಪ್ರತಾಪ್ ಸಿಂಗ್ ರೂಡಿ ಅವರಿಗೂ ಟಿಕೇಟ್ ನೀಡಲಾಗಿದೆ. ಎನ್ಡಿಎ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಸಂದರ್ಭದಲ್ಲಿ ಬಿಹಾರ ಬಿಜೆಪಿ ಮುಖ್ಯಸ್ಥ ನಿತ್ಯಾನಂದ ರೈ, ಜೆಡಿಯು ಅಧ್ಯಕ್ಷ ವಶಿಷ್ಠ ನಾರಾಯಣ ಸಿಂಗ್, ಎಲ್ಜೆಪಿ ವರಿಷ್ಠ ಪಶುಪತಿ ಪರಾಸ್ ಇದ್ದರು.
ಬಿಜೆಪಿ ಮತ್ತು ಜೆಡಿಯು ತಲಾ 17 ಸ್ಥಾನಗಳಲ್ಲಿ ಸ್ಪರ್ಧೆ ಮಾಡಲಿದೆ. ಎನ್ಡಿಎ ಅಂಗಪಕ್ಷವಾದ ಎಲ್ಜೆಪಿ 6 ಸ್ಥಾನಗಳಲ್ಲಿ ಅಭ್ಯರ್ಥಿಗಳನ್ನು ಕಣಕ್ಕೆ ಇಳಿಸಲಿದೆ.
ಉಡುಪಿ: ಮಹಾವೀರ ಜಯಂತಿ ಸಾರ್ವತ್ರಿಕ ರಜೆಯಲ್ಲಿ ಬದಲಾವಣೆ ಮಾ.31ರ ಮಂಗಳವಾರ ಬದಲಾಗಿ ಮಾ. 30ರ ಸೋಮವಾರ ರಜೆ ಘೋಷಣೆ ಉಡುಪಿ:…
ಮಾ.30ಕ್ಕೆ ನಡೆಯಬೇಕಿದ್ದ SSLC ಹಿಂದಿ ಪರೀಕ್ಷೆ ಮಾ.31ಕ್ಕೆ ಮುಂದೂಡಿಕೆ ಬೆಂಗಳೂರು: ಮಾ.30ಕ್ಕೆ ನಡೆಯಬೇಕಿದ್ದ ಎಸ್ಎಸ್ಎಲ್ಸಿ ಹಿಂದಿ ಪರೀಕ್ಷೆ ಮಾ.31ಕ್ಕೆ ಮುಂದೂಡಿಕೆ…
1ನೇ ತರಗತಿ ದಾಖಲಾತಿಗೆ 6 ವರ್ಷ ಕಡ್ಡಾಯ ನಿಯಮದಲ್ಲಿಈ ವರ್ಷವೂ 60 ದಿನಗಳ ವಿನಾಯಿತಿ : ಮಧು ಬಂಗಾರಪ್ಪ ಬೆಂಗಳೂರು:…
ಉಡುಪಿ: ಬನ್ನಂಜೆ ಶ್ರೀ ಮಹಾಲಿಂಗೇಶ್ವರ ಬ್ರಹ್ಮಕಲಶೋತ್ಸವಕ್ಕೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ಗೆ ಆಹ್ವಾನ ಉಡುಪಿ: ಬನ್ನಂಜೆ ಶ್ರೀ ಮಹಾಲಿಂಗೇಶ್ವರ ದೇವರ ಸನ್ನಿಧಿಯಲ್ಲಿ…
ಬಂಟ್ವಾಳ: ಯುವತಿ ನಾಪತ್ತೆ; ಪ್ರಕರಣ ದಾಖಲು ಬಂಟ್ವಾಳ: ಕೆಲಸಕ್ಕೆಂದು ಹೊರಟ ಯುವತಿ ಮನೆಗೆ ಮರಳದೇ ನಾಪತ್ತೆಯಾಗಿರುವ ಘಟನೆ ಬಂಟ್ವಾಳ ತಾಲೂಕಿನ…
ಎರಡು ಕ್ಷೇತ್ರಗಳಲ್ಲೂ ಕಾಂಗ್ರೆಸ್ ಅಭ್ಯರ್ಥಿಗಳಿಗೆ ಜಯ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಉಡುಪಿ: ದಾವಣಗೆರೆ ದಕ್ಷಿಣ ಹಾಗೂ ಬಾಗಲಕೋಟೆ ಎರಡೂ…