Featured

ಮೋದಿ ಸುಭದ್ರ ಅಡಿಪಾಯ ಹಾಕಿದ್ದಾರೆ: ಉಡುಪಿಯಲ್ಲಿ ಸ್ವಾಮಿ ಗ್ಯಾನಾನಂದ್ ಮಹಾರಾಜ್

ಪ್ರಧಾನಿ ನರೇಂದ್ರ ಮೋದಿ ಆಡಳಿತಾತ್ಮಕವಾಗಿ ಸುಭದ್ರ ಅಡಿಪಾಯ ಹಾಕಿದ್ದಾರೆ. ಅವರು ಕಟ್ಟುವ ಭಾರತವೂ ಬಲಿಷ್ಟವಾಗಿ ಹೊರ ಹೊಮ್ಮಲಿದೆ ಅಂತ ಉಜ್ಜಯಿನಿಯ ಸ್ವಾಮೀ ಗ್ಯಾನಾನಂದ್ ಮಹಾರಾಜ್ ಹೇಳಿದ್ದಾರೆ.

ಶ್ರೀಕೃಷ್ಣ ಮಠಕ್ಕೆ ಭೇಟಿಕೊಟ್ಟು ದೇವರ ದರ್ಶನ ಮಾಡಿದ ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಕೃಷ್ಣನ ದರ್ಶನದಿಂದ ಮನಸ್ಸಿಗೆ ಬಹಳ ಖುಷಿಯಾಗಿದೆ. ಶ್ರೀಕೃಷ್ಣ ದ್ವಾರಕೆಯಿಂದ ಉಡುಪಿಗೆ ಬಂದಿದ್ದಾನೆ. ಮಧ್ವಾಚಾರ್ಯರಿಗೆ ಒಲಿದ ಶ್ರೀಕೃಷ್ಣ ಈತ, ನಾಲ್ಕೂ ದಿಕ್ಕುಗಳಿಂದ ಭಗವಂತ ದೇಶವನ್ನು ರಕ್ಷಣೆ ಮಾಡುತ್ತಿದ್ದಾನೆ ಎಂದು ಗ್ಯಾನಾನಂದ್ ಮಹಾರಾಜ್ ಹೇಳಿದರು.

vishwanews24.com

 

ಕುರುಕ್ಷೇತ್ರದ ಗೀತ ಮಾನಿಷಿ ಆಶ್ರಮದ ಮಹಾಮಂಡಳೇಶ್ವರ್ ಆಗಿರುವ ಗ್ಯಾನಾನಂದ ಮಹಾರಾಜ್, ಉಡುಪಿ ಪ್ರವಾಸದಲ್ಲಿದ್ದಾರೆ. ಉಡುಪಿ ಕೃಷ್ಣಮಠಕ್ಕೆ ಆಗಮಿಸಿದ ಅವರು, ಕನಕನ ಕಿಂಡಿಯ ಮೂಲಕ ಮತ್ತು ಕನಕ ನವಗ್ರಹ ಕಿಂಡಿಯ ಮೂಲಕ ಕಡೆಗೋಲು ಕೃಷ್ಣನ ದರ್ಶನ ಮಾಡಿದರು. ಅಷ್ಟೇ ಅಲ್ಲದೇ ಮುಖ್ಯಪ್ರಾಣ ದೇವರ ದರ್ಶನ ಮಾಡಿ ವಿಶೇಷ ಪೂಜೆ ಸಲ್ಲಿಸಿದರು.

ಪ್ರಧಾನಿ ನರೇಂದ್ರ ಮೋದಿ ಭಾರತ ದೇಶಕ್ಕಾಗಿ ಹಗಲಿರುಳು ದುಡಿಯುತ್ತಿದ್ದಾರೆ. ಭಾರತ ಎಂಬ ಕಟ್ಟಡದ ಅಡಿಪಾಯ ಚೆನ್ನಾಗಿದ್ದರೆ ದೇಶದ ನಿರ್ಮಾಣ ಚೆನ್ನಾಗಿಯಾಗುತ್ತದೆ. ಮೋದಿ ಆ ಕೆಲಸವನ್ನು ಮಾಡಿದ್ದಾರೆ. ಹಾಗಾಗಿ ಯಾವುದೇ ಸಮಸ್ಯೆಗಳು ಬರಲಾರವು ಎಂದು ಅವರು ಹೇಳಿದರು.

Vishwa News 24

Recent Posts

ಸೆ.25ರಂದು ಉಚ್ಚಿಲದಲ್ಲಿ ಮೊಗವೀರ ಕುಲಗುರು ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ – vishwanews24

ಸೆ.25ರಂದು ಉಚ್ಚಿಲದಲ್ಲಿ ಮೊಗವೀರ ಕುಲಗುರು ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಡುಪಿ: ದಕ್ಷಿಣ ಕನ್ನಡ ಮೊಗವೀರ ಮಹಾಜನ…

2 days ago

ಕಾಲೇಜು ಶೈಕ್ಷಣಿಕ ಪ್ರವಾಸದಲ್ಲಿ ಸೆಲ್ಫಿ, ರೀಲ್ಸ್‌ಗೆ ಸಂಪೂರ್ಣ ನಿಷೇಧ : ಶಿಕ್ಷಣ ಇಲಾಖೆಯಿಂದ ಕಟ್ಟುನಿಟ್ಟಿನ ಮಾರ್ಗಸೂಚಿ! vishwanews24

ಕಾಲೇಜು ಶೈಕ್ಷಣಿಕ ಪ್ರವಾಸದಲ್ಲಿ ಸೆಲ್ಫಿ, ರೀಲ್ಸ್‌ಗೆ ಸಂಪೂರ್ಣ ನಿಷೇಧ - ಶಿಕ್ಷಣ ಇಲಾಖೆಯಿಂದ ಕಟ್ಟುನಿಟ್ಟಿನ ಮಾರ್ಗಸೂಚಿ! ಬೆಂಗಳೂರು : ವಿದ್ಯಾರ್ಥಿಗಳ…

2 days ago

ಕರ್ನಾಟಕದಲ್ಲಿ ಸೆ.30ರಿಂದ ಸಿನೆಮಾ ಟಿಕೆಟ್ ದರ ಏರಿಕೆ  – vishwanews24

ಕರ್ನಾಟಕದಲ್ಲಿ ಸೆ.30ರಿಂದ ಸಿನೆಮಾ ಟಿಕೆಟ್ ದರ ಏರಿಕೆ  ಬೆಂಗಳೂರು: ಕರ್ನಾಟಕ ಸಿನಿ ಮತ್ತು ಸಾಂಸ್ಕೃತಿಕ ಕಾರ್ಯಕರ್ತರ (ಕ್ಷೇಮಾಭಿವೃದ್ಧಿ) ಕಾಯ್ದೆ ಜಾರಿಗೊಂಡಿರುವ…

2 days ago

ಶೃಂಗೇರಿ: ತುಂಗಾ ನದಿಯಲ್ಲಿ ಈಜಲು ತೆರಳಿದ್ದ ಇಂಜಿನಿಯರಿಂಗ್ ವಿದ್ಯಾರ್ಥಿ ನೀರುಪಾಲು – vishwanews24

ಶೃಂಗೇರಿ: ತುಂಗಾ ನದಿಯಲ್ಲಿ ಈಜಲು ತೆರಳಿದ್ದ ಇಂಜಿನಿಯರಿಂಗ್ ವಿದ್ಯಾರ್ಥಿ ನೀರುಪಾಲು ಬೆಂಗಳೂರಿನಿಂದ ಆಗಮಿಸಿದ್ದ ನಾಲ್ವರು ಸ್ನೇಹಿತರು ಚಿಕ್ಕಮಗಳೂರು: ತುಂಗಾ ನದಿಯಲ್ಲಿ…

2 days ago

ಡಿಕೆಶಿ ಮನಸ್ಸು ಮಾಡಿದ್ರೆ ಸ್ವಂತ ಹಣದಲ್ಲೇ ರೈತರ ಸಾಲ ಮನ್ನಾ ಮಾಡಬಹುದು: ಹೆಚ್‌ಡಿಕೆ – vishwanews24

 ಸಂಪಾದನೆ ಮಾಡಿರೋ ಹಣವನ್ನ ಜನರಿಗೆ ಕೊಟ್ರೆ 2028ಕ್ಕೂ ಡಿಕೆ ಶಿ ಸಿಎಂ ಆಗಬಹುದು : ಹೆಚ್‌.ಡಿ ಕುಮಾರಸ್ವಾಮಿ ಬೆಂಗಳೂರು: ಡಿಕೆ…

2 days ago

ಉಡುಪಿ: ತುಳುನಾಡಿನ, ತುಳು ಜನರ ಭಾವನೆಗೆ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಬೆಲೆ ಕೊಟ್ಟಿದ್ದಾರೆ : ರಮೇಶ್ ಕಾಂಚನ್ – vishwanews24

ತುಳು ಭಾಷೆಗೆ ಅಧಿಕೃತ ಮಾನ್ಯತೆ: ದಶಕಗಳ ಹೋರಾಟಕ್ಕೆ ಡಿ.ಕೆ. ಶಿವಕುಮಾರ್ ಅವರಿಂದ ಫಲ ಸಿಕ್ಕಿದೆ : ರಮೇಶ್ ಕಾಂಚನ್ ಉಡುಪಿ:…

2 days ago