ಬಿಜೆಪಿಯ ಕೇಂದ್ರ ಕಚೇರಿಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ಸಾಧನೆ ಕುರಿತು ಕಿರುಹೊತ್ತಿಗೆ ಬಿಡುಗಡೆ ಮಾಡಿ ಮಾತನಾಡಿದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್ ಯಡಿಯೂರಪ್ಪ, ಅಂದಿನ ಮಿತಿಮೀರಿದ ಭ್ರಷ್ಟಾಚಾರದ ಯುಪಿಎ ಆಡಳಿತ ಹೇಗಿತ್ತು ಎಂಬುದು ಎಲ್ಲರಿಗೂ ತಿಳಿದಿದೆ. ಇಂದು ನರೇಂದ್ರ ಮೋದಿ ಅವರು ಪ್ರಧಾನಿಯಾದ ನಂತರ ಆಡಳಿತ ನಡೆದಿರುವ ಬಗ್ಗೆಯೂ ತಿಳಿದಿದೆ. ದೇಶದ ಆರ್ಥಿಕತೆಯೂ ಸುಭದ್ರವಾಗಿದೆ. ದೇಶದ ಬೆಳವಣಿಗೆಯಿಂದ ಇಂದು ವಿಶ್ವದಲ್ಲೇ ನಮ್ಮ ರಾಷ್ಟ್ರ ಗೌರವಕ್ಕೆ ಪಾತ್ರವಾಗಿದೆ ಎಂದರು.
ನರೇಂದ್ರ ಮೋದಿ ಅವರ ಅಧಿಕಾರ ತಡೆಯಲು ವಿರೋಧ ಪಕ್ಷಗಳು ಒಗ್ಗೂಡುತ್ತಿವೆ. ಪರಸ್ಪರ ಗಂಭೀರ ಆರೋಪ ಮಾಡಿಕೊಳ್ಳುವ ಪಕ್ಷಗಳೂ ಸಹ ಇಂದು ಮೋದಿ ಅವರ ಭಯದಿಂದಾಗಿ ಒಂದಾಗುತ್ತಿವೆ. ಆದರೆ ನಾವು ಅದಕ್ಕೆಲ್ಲ ಚಿಂತಿಸುವುದಿಲ್ಲ. ನಮಗೆ ಜನಬಲವಿದೆ. ಜತೆಗೆ ದೈವಬಲವೂ ಇದೆ ಎಂದು ಹೇಳಿದರು. 2014ರಲ್ಲಿ ಅಧಿಕಾರಕ್ಕೆ ಬಂದಾಗ ಬಿಜೆಪಿ ದೇಶದ ಆರು ರಾಜ್ಯಗಳಲ್ಲಿ ಆಡಳಿತ ನಡೆಸಿತ್ತು. ಇಂದು 20 ರಾಜ್ಯಗಳಲ್ಲಿ ಬಿಜೆಪಿ ತನ್ನ ಚುಕ್ಕಾಣಿ ಹಿಡಿದಿದೆ, ಇದು ಬಿಜೆಪಿ ಪರ ಜನರ ಒಲವು ತೋರಿಸುತ್ತಿದೆ, ಮುಂದಿನ ದಿನಗಳಲ್ಲಿ ಇನ್ನಷ್ಟು ರಾಜ್ಯಗಳಲ್ಲಿ ಬಿಜೆಪಿ ಆಡಳಿತ ಇರುವ ಸರಕಾರ ನೀವು ಕಾಣಲಿದ್ದೀರಿ ಮತ್ತು ತಮ್ಮ ಅಧಿಕಾರವಧಿಯ ಸಾಧನೆಯ ಕಾರಣದಿಂದಲೇ ಪ್ರಧಾನಿ ನರೇಂದ್ರ ಮೋದಿ ಸರ್ಕಾರವನ್ನು ಜನರು ಮತ್ತೊಮ್ಮೆ ಆಶಿರ್ವಾದಿಸಿ ಆಯ್ಕೆ ಮಾಡುತ್ತಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಮಲ್ಪೆ : ಸೈಂಟ್ಮೇರೀಸ್ ದ್ವೀಪ ಪ್ರವೇಶ ಹಾಗೂ ಜಲ ಕ್ರೀಡೆಗಳಿಗೆ ಮೇ 16ರಿಂದ ಸೆಪ್ಟೆಂಬರ್15ರ ವರೆಗೆ ಸಂಪೂರ್ಣ ನಿಷೇಧ ಮಲ್ಪೆ:…
ಜೂನ್ 21ರಂದು ನೀಟ್ ಯುಜಿ ಮರು ಪರೀಕ್ಷೆ ನವದೆಹಲಿ: ಜೂನ್ 21 ರಂದು ನೀಟ್–ಯುಜಿ ಮರು ಪರೀಕ್ಷೆ ನಡೆಸಲಾಗುವುದು ರಾಷ್ಟ್ರೀಯ…
ಉಡುಪಿ ಜಿಲ್ಲೆಯ ನಿರ್ಲಕ್ಷ್ಯ : ಮೇ 16ರಂದು ಜಿಲ್ಲಾ ಉಸ್ತುವಾರಿ ಸಚಿವರಿಗೆ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ : ಪೃಥ್ವಿರಾಜ್…
ಸಾಂಪ್ರದಾಯಿಕ ಧಾರ್ಮಿಕ ಸಂಕೇತಗಳನ್ನು ಧರಿಸಬಹುದು, ಹೊಸದಾಗಿ ಮಾಡುವಂತಿಲ್ಲ : ಸಿಎಂ ಸ್ಪಷ್ಟನೆ ಮೈಸೂರು : "ಪ್ರಾಥಮಿಕ ತರಗತಿಯಿಂದ 12ನೇ ತರಗತಿಯವರೆಗೆ…
ಮದ್ಯ ಖರೀದಿ, ಮಾರಾಟ ಮಾಡಲು 21 ವರ್ಷ ಕಡ್ಡಾಯ : ಸಿಎಂ ವಿಜಯ್ ಸರ್ಕಾರ ಆದೇಶ ಚೆನ್ನೈ: ಇನ್ನು ಮುಂದೆ…
ಇಂದಿರಾ ಗಾಂಧಿ ನಂತರ ಯಾರಾದ್ರೂ ಮಾಸ್ ಲೀಡರ್ ಇದ್ರೆ, ಅದು ಮೋದಿ ಮಾತ್ರ: ಕೆ.ಎನ್ ರಾಜಣ್ಣ ನಾನು ಮೋದಿಯವರನ್ನು ಹೊಗಳುತ್ತಿಲ್ಲ.…