Featured

ಮೋದಿ ಸೋಲಿಸಲು ವಿರೋಧ ಪಕ್ಷಗಳು ಒಟ್ಟಾದರೂ ಚಿಂತೆಯಿಲ್ಲ, ನಮಗೆ ಜನಬಲವಿದೆ!: ಬಿಎಸ್‌ವೈ

ಬಿಜೆಪಿಯ ಕೇಂದ್ರ ಕಚೇರಿಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ಸಾಧನೆ ಕುರಿತು ಕಿರುಹೊತ್ತಿಗೆ ಬಿಡುಗಡೆ ಮಾಡಿ ಮಾತನಾಡಿದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್ ಯಡಿಯೂರಪ್ಪ, ಅಂದಿನ ಮಿತಿಮೀರಿದ ಭ್ರಷ್ಟಾಚಾರದ ಯುಪಿಎ ಆಡಳಿತ ಹೇಗಿತ್ತು ಎಂಬುದು ಎಲ್ಲರಿಗೂ ತಿಳಿದಿದೆ. ಇಂದು ನರೇಂದ್ರ ಮೋದಿ ಅವರು ಪ್ರಧಾನಿಯಾದ ನಂತರ ಆಡಳಿತ ನಡೆದಿರುವ ಬಗ್ಗೆಯೂ ತಿಳಿದಿದೆ. ದೇಶದ ಆರ್ಥಿಕತೆಯೂ ಸುಭದ್ರವಾಗಿದೆ. ದೇಶದ ಬೆಳವಣಿಗೆಯಿಂದ ಇಂದು ವಿಶ್ವದಲ್ಲೇ ನಮ್ಮ ರಾಷ್ಟ್ರ ಗೌರವಕ್ಕೆ ಪಾತ್ರವಾಗಿದೆ ಎಂದರು.

ನರೇಂದ್ರ ಮೋದಿ ಅವರ ಅಧಿಕಾರ ತಡೆಯಲು ವಿರೋಧ ಪಕ್ಷಗಳು ಒಗ್ಗೂಡುತ್ತಿವೆ. ಪರಸ್ಪರ ಗಂಭೀರ ಆರೋಪ ಮಾಡಿಕೊಳ್ಳುವ ಪಕ್ಷಗಳೂ ಸಹ ಇಂದು ಮೋದಿ ಅವರ ಭಯದಿಂದಾಗಿ ಒಂದಾಗುತ್ತಿವೆ. ಆದರೆ ನಾವು ಅದಕ್ಕೆಲ್ಲ ಚಿಂತಿಸುವುದಿಲ್ಲ. ನಮಗೆ ಜನಬಲವಿದೆ. ಜತೆಗೆ ದೈವಬಲವೂ ಇದೆ ಎಂದು ಹೇಳಿದರು. 2014ರಲ್ಲಿ ಅಧಿಕಾರಕ್ಕೆ ಬಂದಾಗ ಬಿಜೆಪಿ ದೇಶದ ಆರು ರಾಜ್ಯಗಳಲ್ಲಿ ಆಡಳಿತ ನಡೆಸಿತ್ತು. ಇಂದು 20 ರಾಜ್ಯಗಳಲ್ಲಿ ಬಿಜೆಪಿ ತನ್ನ ಚುಕ್ಕಾಣಿ ಹಿಡಿದಿದೆ, ಇದು ಬಿಜೆಪಿ ಪರ ಜನರ ಒಲವು ತೋರಿಸುತ್ತಿದೆ, ಮುಂದಿನ ದಿನಗಳಲ್ಲಿ ಇನ್ನಷ್ಟು ರಾಜ್ಯಗಳಲ್ಲಿ ಬಿಜೆಪಿ ಆಡಳಿತ ಇರುವ ಸರಕಾರ ನೀವು ಕಾಣಲಿದ್ದೀರಿ ಮತ್ತು ತಮ್ಮ ಅಧಿಕಾರವಧಿಯ ಸಾಧನೆಯ ಕಾರಣದಿಂದಲೇ ಪ್ರಧಾನಿ ನರೇಂದ್ರ ಮೋದಿ ಸರ್ಕಾರವನ್ನು ಜನರು ಮತ್ತೊಮ್ಮೆ ಆಶಿರ್ವಾದಿಸಿ ಆಯ್ಕೆ ಮಾಡುತ್ತಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

Vishwa News 24

Recent Posts

ಉಡುಪಿ : ಹೊಟೇಲ್ ಮುಚ್ಚುವ ಭೀತಿ ; ಜಿಲ್ಲೆಯ ಆರ್ಥಿಕತೆಯ ಮೇಲೆ ಗಂಭೀರ ಪರಿಣಾಮ : ತಲ್ಲೂರು ಶಿವರಾಮ ಶೆಟ್ಟಿ – vishwanews24

ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…

5 days ago

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ – vishwanews24

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…

5 days ago

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ – vishwanews24

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…

5 days ago

ಉಡುಪಿ : ಗ್ಯಾಸ್ ಹೆಸರಿನಲ್ಲಿ ಸೈಬರ್ ವಂಚನೆ: ಅಪರಿಚಿತರಿಂದ ಬರುವ ಲಿಂಕ್‌, ಎಪಿಕೆ ಫೈಲ್‌ ಓಪನ್ ಮಾಡುವ ಮುನ್ನ ಎಚ್ಚರ : ಎಸ್ಪಿ ಮನವಿ – vishwanews24

ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…

5 days ago

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ ‘ಗೀತಾ’ – vishwanews24

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…

5 days ago

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿಯ ಬಂಧನ – vishwanews24

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…

5 days ago