Featured

ಮೋದಿ 5 ಸ್ಟಾರ್ ಹೋಟೆಲ್ ಬಳಸಲ್ಲ, ವಿಮಾನ ನಿಲ್ದಾಣದ ಟರ್ಮಿನಲ್‍ನಲ್ಲೇ ಉಳಿಯುತ್ತಾರೆ : ಪ್ರಧಾನಿ ವಿದೇಶ ಪ್ರವಾಸದ ಬಗ್ಗೆ ಅಮಿತ್ ಶಾ ವಿವರಣೆ -Vishwanews24

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ವಿದೇಶ ಪ್ರವಾಸ ವೇಳೆ ಕೆಲವು ನಿಯಮಗಳನ್ನು ಪಾಲಿಸುತ್ತಿದ್ದು, ದೇಶದ ಬೊಕ್ಕಸಕ್ಕೆ ಕೋಟ್ಯಂತರ ರೂಪಾಯಿ ಉಳಿತಾಯವಾಗುತ್ತಿದೆ ಎಂದು ಗೃಹ ಸಚಿವ ಅಮಿತ್ ಷಾ ಹೇಳಿದ್ದಾರೆ.

ವಿದೇಶ ಪ್ರವಾಸ ವೇಳೆ ಇಂಧನ ತುಂಬಿಸಿಕೊಳ್ಳಲು ವಿಮಾನ ಯಾವುದೇ ದೇಶದಲ್ಲಿ ತಾಂತ್ರಿಕವಾಗಿ ತಂಗಿದಾಗ ರಾತ್ರಿ ವೇಳೆ ಹೊಟೇಲ್​ನಲ್ಲಿ ವಾಸ್ತವ್ಯವಿರುವುದು ಹಿಂದಿನಿಂದ ನಡೆದುಕೊಂಡು ಬಂದ ಪದ್ಧತಿ. ಆದರೆ ಇಂಥ ಸಂದರ್ಭದ ಲ್ಲಿ ಮೋದಿ ಹೊಟೇಲ್ ರೂಮ್ ಬುಕ್ ಮಾಡುವುದಿಲ್ಲ. ವಿಮಾನ ನಿಲ್ದಾಣದ ಟರ್ವಿುನಲ್​ನಲ್ಲೇ ಇದ್ದು ವಿಶ್ರಾಂತಿ ಪಡೆಯುತ್ತಾರೆ. ಪ್ರಧಾನಿ ಜೊತೆ ತೆರಳುವ ಅಧಿಕಾರಿಗಳ ಸಂಖ್ಯೆಯನ್ನು ಶೇ. 20ಕ್ಕೆ ಇಳಿಸಲಾಗಿದೆ. ಸಿಬ್ಬಂದಿಗಾಗಿ ಪ್ರತ್ಯೇಕ ವಾಹನ ವ್ಯವಸ್ಥೆ ಇರುತ್ತದೆ. ನಾಲ್ಕರಿಂದ ಐದು ಜನರು ಪ್ರಯಾಣಿಸಬಹುದಾದ ಕಾರ್ ಅಥವಾ ಬಸ್ ವ್ಯವಸ್ಥೆ ಮಾಡಬೇಕೆಂದು ಮೋದಿ ಸೂಚಿಸಿದ್ದಾಗಿ ಷಾ ತಿಳಿಸಿದರು.

ಇತ್ತೀಚೆಗೆ ಪ್ರಧಾನಿ ನರೇಂದ್ರ ಮೋದಿ ವಿದೇಶ ಪ್ರವಾಸದಲ್ಲಿದ್ದರು. ಆಗ ವಿಮಾನಕ್ಕೆ ಇಂಧನ ತುಂಬಿಸುವ ಸಲುವಾಗಿ ರಾತ್ರಿ ಉಳಿದುಕೊಳ್ಳಲು ಹೋಟೆಲ್ ಬುಕ್ ಮಾಡಲಾಗಿತ್ತು. ಆದರೆ ಮೋದಿಯವರು ಹೋಟೆಲ್‍ನಲ್ಲಿ ಉಳಿದುಕೊಳ್ಳಲಿಲ್ಲ, ಬದಲಿಗೆ ವಿಮಾನ ನಿಲ್ದಾಣದ ಟರ್ಮಿನಲ್‍ನಲ್ಲಿಯೇ ಉಳಿದುಕೊಂಡಿದ್ದರು. ಪ್ರಧಾನಿ ಮೋದಿ ಈ ವರೆಗೆ ವಿಮಾನದಲ್ಲಿ ತಾಂತ್ರಿಕ ದೋಷವಾದಾಗ ಹೋಟೆಲ್ ಬುಕ್ ಮಾಡಿಕೊಂಡು ಉಳಿದಿಲ್ಲ ಎಂದು ಶಾ ತಿಳಿಸಿದರು.

ಸ್ವತಃ ಪ್ರಧಾನಿಯವರೇ ಇಂಥ ನಿಯಮಗಳನ್ನು ಪಾಲಿಸುತ್ತಿರುವಾಗ ಇನ್ನೊಂದೆಡೆ ಕೆಲವರು ಭದ್ರತಾ ವ್ಯವಸ್ಥೆಯನ್ನೇ ಪ್ರತಿಷ್ಠೆ ಸಂಕೇತ ಮಾಡಿಕೊಂಡಿದ್ದರು ಎಂದು ಶಾ ತಿಳಿಸಿದರು.

Vishwa News 24

Recent Posts

ರೈಲು ಪ್ರಯಾಣಿಕರಿಗೆ ಭರ್ಜರಿ ಗುಡ್ ನ್ಯೂಸ್ : ಇಂದಿನಿಂದ IRCTC ಹೊಸ ವೆಬ್‌ಸೈಟ್ ಆರಂಭ – vishwanews24

ರೈಲು ಪ್ರಯಾಣಿಕರಿಗೆ ಭರ್ಜರಿ ಗುಡ್ ನ್ಯೂಸ್ ಇಂದಿನಿಂದ IRCTC ಹೊಸ ವೆಬ್‌ಸೈಟ್ ಆರಂಭ: ಇನ್ಮುಂದೆ ಕ್ಷಣಾರ್ಧದಲ್ಲಿ ತತ್ಕಾಲ್ ಟಿಕೆಟ್ ಬುಕಿಂಗ್…

6 hours ago

ಭಟ್ಕಳ: ಬೈಕಿಗೆ  ಲಾರಿ ಢಿಕ್ಕಿ ; ಸವಾರ ಮೃತ್ಯು – vishwanews24

ಭಟ್ಕಳ: ಬೈಕಿಗೆ  ಲಾರಿ ಢಿಕ್ಕಿ ; ಸವಾರ ಮೃತ್ಯು ಭಟ್ಕಳ: ಲಾರಿಯೊಂದು ಬೈಕಿಗೆ ಹಿಂಬದಿಯಿಂದ ಢಿಕ್ಕಿ ಹೊಡೆದ ಪರಿಣಾಮ ಬೈಕ್…

7 hours ago

ರಾಮಮಂದಿರದ ಹುಂಡಿ ಕಳವು ಪ್ರಕರಣ: ಸುಪ್ರೀಂ ಕೋರ್ಟ್ ನ್ಯಾಯಾಧೀಶರ ಮೇಲ್ವಿಚಾರಣೆಯಲ್ಲಿ ಸಿಬಿಐ ತನಿಖೆಯಾಗಬೇಕು : ಸೊರಕೆ ಆಗ್ರಹ – vishwanews24

ರಾಮಮಂದಿರ ಪ್ರಕರಣವನ್ನು ಪ್ರಧಾನಿಯವರು ಮನ್ ಕಿ ಬಾತ್ ನಲ್ಲಿಯೂ ಉಲ್ಲೇಖಿಸುತ್ತಿಲ್ಲ : ವಿನಯ ಕುಮಾರ್ ಸೊರಕೆ ಮಂಗಳೂರು: ರಾಮಮಂದಿರದ ಹುಂಡಿ…

7 hours ago

ಉಡುಪಿ :  ಗೋಹತ್ಯೆ ನಿಷೇಧ ಕಾಯಿದೆ ಜಾರಿಗೆ ಆಗ್ರಹಿಸಿ ಜುಲೈ 27 ರಂದು ಜಿಲ್ಲಾಧಿಕಾರಿಗೆ ಮನವಿ – vishwanews24

ಉಡುಪಿ :  ಗೋಹತ್ಯೆ ನಿಷೇಧ ಕಾಯಿದೆ ಜಾರಿಗೆ ಆಗ್ರಹಿಸಿ ಜುಲೈ 27 ರಂದು ಜಿಲ್ಲಾಧಿಕಾರಿಗೆ ಮನವಿ ಉಡುಪಿ : ಗೋಮಾತೆ…

7 hours ago

ಬೆಂಗಳೂರು: ಪ್ರಯಾಣಿಕರ ಸೋಗಿನಲ್ಲಿ ಬಂದು ಬಸ್ ನಿರ್ವಾಹಕರ ಬ್ಯಾಗನ್ನೇ ಎಗಿರಿಸಿದ ಮಹಿಳೆ – vishwanews24

ಬೆಂಗಳೂರು: ಪ್ರಯಾಣಿಕರ ಸೋಗಿನಲ್ಲಿ ಬಂದು ಬಸ್ ನಿರ್ವಾಹಕರ ಬ್ಯಾಗನ್ನೇ ಎಗಿರಿಸಿದ ಮಹಿಳೆ ಬೆಂಗಳೂರು: ಬಸ್ ಪ್ರಯಾಣಿಕರ ಸೋಗಿನಲ್ಲಿ ಬಂದು ಅತ್ಯಂತ…

8 hours ago

ನವಿ ಮುಂಬೈ ವಿಮಾನ ನಿಲ್ದಾಣದ ಹೊಸ ಅಧ್ಯಾಯ :  ಮೊದಲ ಅಂತಾರಾಷ್ಟ್ರೀಯ ಸೇವೆಗೆ ಚಾಲನೆ – vishwanews24

ನವಿ ಮುಂಬೈ ವಿಮಾನ ನಿಲ್ದಾಣದ ಹೊಸ ಅಧ್ಯಾಯ :  ಮೊದಲ ಅಂತಾರಾಷ್ಟ್ರೀಯ ಸೇವೆಗೆ ಚಾಲನೆ ಮುಂಬೈ: ನವಿ ಮುಂಬೈ ಅಂತರರಾಷ್ಟ್ರೀಯ…

8 hours ago