ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ವಿದೇಶ ಪ್ರವಾಸ ವೇಳೆ ಕೆಲವು ನಿಯಮಗಳನ್ನು ಪಾಲಿಸುತ್ತಿದ್ದು, ದೇಶದ ಬೊಕ್ಕಸಕ್ಕೆ ಕೋಟ್ಯಂತರ ರೂಪಾಯಿ ಉಳಿತಾಯವಾಗುತ್ತಿದೆ ಎಂದು ಗೃಹ ಸಚಿವ ಅಮಿತ್ ಷಾ ಹೇಳಿದ್ದಾರೆ.
ವಿದೇಶ ಪ್ರವಾಸ ವೇಳೆ ಇಂಧನ ತುಂಬಿಸಿಕೊಳ್ಳಲು ವಿಮಾನ ಯಾವುದೇ ದೇಶದಲ್ಲಿ ತಾಂತ್ರಿಕವಾಗಿ ತಂಗಿದಾಗ ರಾತ್ರಿ ವೇಳೆ ಹೊಟೇಲ್ನಲ್ಲಿ ವಾಸ್ತವ್ಯವಿರುವುದು ಹಿಂದಿನಿಂದ ನಡೆದುಕೊಂಡು ಬಂದ ಪದ್ಧತಿ. ಆದರೆ ಇಂಥ ಸಂದರ್ಭದ ಲ್ಲಿ ಮೋದಿ ಹೊಟೇಲ್ ರೂಮ್ ಬುಕ್ ಮಾಡುವುದಿಲ್ಲ. ವಿಮಾನ ನಿಲ್ದಾಣದ ಟರ್ವಿುನಲ್ನಲ್ಲೇ ಇದ್ದು ವಿಶ್ರಾಂತಿ ಪಡೆಯುತ್ತಾರೆ. ಪ್ರಧಾನಿ ಜೊತೆ ತೆರಳುವ ಅಧಿಕಾರಿಗಳ ಸಂಖ್ಯೆಯನ್ನು ಶೇ. 20ಕ್ಕೆ ಇಳಿಸಲಾಗಿದೆ. ಸಿಬ್ಬಂದಿಗಾಗಿ ಪ್ರತ್ಯೇಕ ವಾಹನ ವ್ಯವಸ್ಥೆ ಇರುತ್ತದೆ. ನಾಲ್ಕರಿಂದ ಐದು ಜನರು ಪ್ರಯಾಣಿಸಬಹುದಾದ ಕಾರ್ ಅಥವಾ ಬಸ್ ವ್ಯವಸ್ಥೆ ಮಾಡಬೇಕೆಂದು ಮೋದಿ ಸೂಚಿಸಿದ್ದಾಗಿ ಷಾ ತಿಳಿಸಿದರು.
ಇತ್ತೀಚೆಗೆ ಪ್ರಧಾನಿ ನರೇಂದ್ರ ಮೋದಿ ವಿದೇಶ ಪ್ರವಾಸದಲ್ಲಿದ್ದರು. ಆಗ ವಿಮಾನಕ್ಕೆ ಇಂಧನ ತುಂಬಿಸುವ ಸಲುವಾಗಿ ರಾತ್ರಿ ಉಳಿದುಕೊಳ್ಳಲು ಹೋಟೆಲ್ ಬುಕ್ ಮಾಡಲಾಗಿತ್ತು. ಆದರೆ ಮೋದಿಯವರು ಹೋಟೆಲ್ನಲ್ಲಿ ಉಳಿದುಕೊಳ್ಳಲಿಲ್ಲ, ಬದಲಿಗೆ ವಿಮಾನ ನಿಲ್ದಾಣದ ಟರ್ಮಿನಲ್ನಲ್ಲಿಯೇ ಉಳಿದುಕೊಂಡಿದ್ದರು. ಪ್ರಧಾನಿ ಮೋದಿ ಈ ವರೆಗೆ ವಿಮಾನದಲ್ಲಿ ತಾಂತ್ರಿಕ ದೋಷವಾದಾಗ ಹೋಟೆಲ್ ಬುಕ್ ಮಾಡಿಕೊಂಡು ಉಳಿದಿಲ್ಲ ಎಂದು ಶಾ ತಿಳಿಸಿದರು.
ಸ್ವತಃ ಪ್ರಧಾನಿಯವರೇ ಇಂಥ ನಿಯಮಗಳನ್ನು ಪಾಲಿಸುತ್ತಿರುವಾಗ ಇನ್ನೊಂದೆಡೆ ಕೆಲವರು ಭದ್ರತಾ ವ್ಯವಸ್ಥೆಯನ್ನೇ ಪ್ರತಿಷ್ಠೆ ಸಂಕೇತ ಮಾಡಿಕೊಂಡಿದ್ದರು ಎಂದು ಶಾ ತಿಳಿಸಿದರು.
ಕಾರ್ಕಳ ಮಹಾಮಸ್ತಕಾಭಿಷೇಕ 2027 : ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ 1.59 ಕೋಟಿ ರೂ. ಮಂಜೂರು ಉಡುಪಿ: ಕಾರ್ಕಳದಲ್ಲಿ 2027ರಲ್ಲಿ ನಡೆಯಲಿರುವ…
ಕಾಪು: ಕ್ಷುಲ್ಲಕ ವಿಚಾರಕ್ಕೆ ಪತಿಯೊಂದಿಗೆ ಜಗಳವಾಡಿ ಅಪ್ರಾಪ್ತ ಮಗಳೊಂದಿಗೆ ಮಹಿಳೆ ನಾಪತ್ತೆ ಕಾಪು: ಕ್ಷುಲ್ಲಕ ಕಾರಣಕ್ಕಾಗಿ ಪತಿಯೊಂದಿಗೆ ಜಗಳವಾಡಿ ಬಳಿಕ…
ಖಾಲಿ ಹೊಟ್ಟೆಯಲ್ಲಿ ಎಳನೀರು ಕುಡಿಯುವುದು ಒಳ್ಳೆಯದೋ? ಅಥವಾ ಕೆಟ್ಟದೋ? ಬೆಳಿಗ್ಗೆ ಖಾಲಿ ಹೊಟ್ಟೆಗೆ ಎಳನೀರು ಕುಡಿಯುವುದರಿಂದಾಗುವ ಪ್ರಯೋಜನಗಳೇನು ಗೊತ್ತಾ? ಇದು ನಿಮ್ಮ…
ಕಾಪು: ತಮಿಳುನಾಡು ಮೂಲದ ದೋಣಿ ಡಿಕ್ಕಿ ; ಸ್ಥಳೀಯ ನಾಡದೋಣಿ ಮುಗುಚಿ ಮೀನುಗಾರ ನಾಪತ್ತೆ ಕಾಪು: ಕಾಪು ಕಡಲ ಕಿನಾರೆಯಲ್ಲಿ…
ಭೀಕರ ರಸ್ತೆ ಅಪಘಾತ : ‘ಹಳ್ಳಿ ಹೈದ ಪ್ಯಾಟೆಗೆ ಬಂದ’ ಸೀಸನ್-3ರ ಸ್ಪರ್ಧಿ ಬಾವತೀಶ್ ಸಾವು ಯಲ್ಲಾಪುರ : ಉತ್ತರ ಕನ್ನಡ…
ಕುಂದಾಪುರ: ರಸ್ತೆ ಅಪಘಾತ ; ಗಾಣಿಗ ಸಂಘದ ಮಾಜಿ ಅಧ್ಯಕ್ಷ ಶ್ರೀನಿವಾಸ ಗಾಣಿಗ ಸಾವು ಕುಂದಾಪುರ: ಇಲ್ಲಿನ ರಾಷ್ಟ್ರೀಯ ಹೆದ್ದಾರಿ…