ನವದೆಹಲಿ: ಪ್ರಧಾನಿ ಮೋದಿ ಅವರು ಆರ್ಎಸ್ಎಸ್ನ ಪ್ರಚಾರಕ್ ಸಂಸ್ಕಾರಕ್ಕೆ ಬದ್ಧರಾಗಿ 75ನೇ ವರ್ಷಕ್ಕೆ ನಿವೃತ್ತಿ ಘೋಷಿಸಬೇಕು ಇಲ್ಲವಾದಲ್ಲಿ ಅವರು ತಮ್ಮ ಕುರ್ಚಿಯನ್ನು ಕಳೆದುಕೊಳ್ಳಲಿದ್ದಾರೆ ಎಂದು ಮಾಜಿ ಕೇಂದ್ರ ಸಚಿವ, ಹಿರಿಯ ಬಿಜೆಪಿ ನಾಯಕ ಸುಬ್ರಮಣಿಯನ್ ಸ್ವಾಮಿ ಎಚ್ಚರಿಸಿದ್ದಾರೆ.
ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿರುವ ಅವರು, ಮೋದಿ ಅವರು RSS ಪ್ರಚಾರಕ್ ಸಂಸ್ಕಾರಕ್ಕೆ ಬದ್ಧರಾಗಿ, ಸೆಪ್ಟೆಂಬರ್ 17 ರಂದು ತಮ್ಮ 75 ನೇ ವರ್ಷದ ಹುಟ್ಟುಹಬ್ಬದ ನಂತರ ಮಾರ್ಗದರ್ಶನ ಮಂಡಲಕ್ಕೆ ನಿವೃತ್ತಿ ಘೋಷಿಸದಿದ್ದರೆ, ಅವರು ಇತರ ವಿಧಾನಗಳಿಂದ ತಮ್ಮ ಪ್ರಧಾನಿ ಕುರ್ಚಿಯನ್ನು ಕಳೆದುಕೊಳ್ಳುತ್ತಾರೆ ಎಂದು ಬರೆದುಕೊಂಡಿದ್ದಾರೆ.
ಪ್ರಧಾನಿ ಮೋದಿ ವಿರುದ್ಧದ ಟೀಕೆಗೆ ಹೆಸರುವಾಗಿಯಾಗಿರುವ ಹಿರಿಯ ಬಿಜೆಪಿ ನಾಯಕ ಸುಬ್ರಮಣಿಯನ್ ಸ್ವಾಮಿ, ಮೋದಿ ಸರ್ಕಾರದ GDP ಬೆಳವಣಿಗೆಯ ಹಕ್ಕು ಸಾರ್ವಜನಿಕರಿಗೆ ದೊಡ್ಡ ವಂಚನೆಯಾಗಿದೆ. ಕೆಳಗಿನ ಅಂಕಿಅಂಶಗಳು 2014 ರಿಂದ ಸರಾಸರಿ GDP ಬೆಳವಣಿಗೆಯನ್ನು ವರ್ಷಕ್ಕೆ ಕೇವಲ 5 % ಮತ್ತು 2016 ರಿಂದ ವರ್ಷಕ್ಕೆ 3.7 %ಗೆ ಇಳಿದಿದೆ ಎಂದು ಟ್ವೀಟ್ ಮಾಡಿ ಮೋದಿ ಸರ್ಕಾರ ಹಾಗೂ ಅದರ ನೀತಿಗಳ ವಿರುದ್ಧ ಗುಡುಗಿದ್ದರು. ಇದೀಗ ಮತ್ತೊಮ್ಮೆ ಪ್ರಧಾನಿ ಮೋದಿ ವಿರುದ್ಧ ಮಾತನಾಡುವ ಮೂಲಕ ಸುದ್ದಿಯಾಗಿದ್ದಾರೆ.
ಕೆಲ ದಿನಗಳ ಹಿಂದೆ ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ ಅವರ ಪೌರತ್ವ ಪ್ರಶ್ನಿಸಿ ಸುಬ್ರಮಣಿಯನ್ ಸ್ವಾಮಿ ದೆಹಲಿ ಹೈಕೋರ್ಟ್ ಮೆಟ್ಟಿಲೇರಿದ್ದರು. ನಾನು ಕೋರ್ಟ್ ಮೆಟ್ಟಿಲೇರಿರುವುದು ವೈಯಕ್ತಿಕ ಲಾಭಕ್ಕಾಗಿ ಅಲ್ಲ, ರಾಷ್ಟ್ರೀಯ ಕಾಳಜಿಯ ವಿಷಯ ಎಂದು ಹಿರಿಯ ಬಿಜೆಪಿ ನಾಯಕ ಹೇಳಿದ್ದರು.
80ನೇ ಸ್ವಾತಂತ್ರ್ಯ ದಿನಾಚರಣೆ : ಮುಖ್ಯಮಂತ್ರಿಯಾಗಿ ಮೊದಲ ಬಾರಿಗೆ ಧ್ವಜಾರೋಹಣ ನೆರವೇರಿಸಿದ ಡಿಕೆಶಿ ಬೆಂಗಳೂರು: ಇಡೀ ದೇಶವೇ ಇಂದು 80ನೇ…
80ನೇ ಸ್ವಾತಂತ್ರ್ಯೋತ್ಸವದ ಸಂಭ್ರಮ : ಕೆಂಪುಕೋಟೆಯಲ್ಲಿ ಧ್ವಜಾರೋಹಣ ನೆರವೇರಿಸಿದ ಪ್ರಧಾನಿ ಮೋದಿ ಬೆಂಗಳೂರು: ಇಡೀ ದೇಶವೇ ಇಂದು 80ನೇ ಸ್ವಾತಂತ್ರ್ಯ…
ಉಡುಪಿ: 80ನೇ ಸ್ವಾತಂತ್ರ್ಯೋತ್ಸವ; ಧ್ವಜಾರೋಹಣ ನೆರವೇರಿಸಿದ ಉಸ್ತುವಾರಿ ಸಚಿವ ರಿಝ್ವಾನ್ ಅರ್ಷದ್ ಉಡುಪಿ: ಉಡುಪಿ ಜಿಲ್ಲಾಡಳಿತದ ವತಿಯಿಂದ ಅಜ್ಜರಕಾಡು ಮಹಾತ್ಮಾಗಾಂಧಿ…
ಸರ್ವೇಶ್ವರ ಫ್ರೆಂಡ್ಸ್ ಚಾರಿಟೇಬಲ್ ಟ್ರಸ್ಟ್ ( ರಿ) ಮೂಳೂರು ವತಿಯಿಂದ 80ನೇ ಸ್ವಾತಂತ್ರ್ಯ ದಿನಾಚರಣೆ ಸರ್ವೇಶ್ವರ ಫ್ರೆಂಡ್ಸ್ ಚಾರಿಟೇಬಲ್ ಟ್ರಸ್ಟ್…
ಜಿಲ್ಲಾ ಉಸ್ತುವಾರಿ ಸಚಿವರ ನೇಮಕ: ದಕ ಜಿಲ್ಲೆಗೆ ಯುಟಿ ಖಾದರ್, ಉಡುಪಿಗೆ ರಿಜ್ವಾನ್ ಅರ್ಷದ್ ಉಡುಪಿ/ಮಂಗಳೂರು: ರಾಜ್ಯದ ಎಲ್ಲಾ ಜಿಲ್ಲೆಗಳಿಗೆ…
ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ವತಿಯಿಂದ 80 ನೇ ಸ್ವಾತಂತ್ರ್ಯ ದಿನಾಚರಣೆ ಉಡುಪಿ: ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ವತಿಯಿಂದ…