Featured

ಮ್ಯಾಟ್ರಿಮೋನಿಯಲ್ಲಿ ಮಹಿಳೆಯರೇ ಟಾರ್ಗೆಟ್ –  ನಕಲಿ ಪ್ರೊಫೈಲ್‌ ಸೃಷ್ಟಿಸಿ ಯುವತಿಯರಿಗೆ ವಂಚನೆ ; ಖತರ್ನಾಕ್ ಆರೋಪಿ ಸೆರೆ – Vishwanews24

ಮ್ಯಾಟ್ರಿಮೋನಿಯಲ್ಲಿ ಮಹಿಳೆಯರೇ ಟಾರ್ಗೆಟ್ –  ನಕಲಿ ಪ್ರೊಫೈಲ್‌ ಸೃಷ್ಟಿಸಿ ಯುವತಿಯರಿಗೆ ವಂಚನೆ ; ಖತರ್ನಾಕ್ ಆರೋಪಿ ಸೆರೆ

ಬೆಂಗಳೂರು: ಮ್ಯಾಟ್ರಿಮೋನಿಯಲ್ಲಿ ವರನನ್ನು ಹುಡುಕುತ್ತಿದ್ದ ಮಹಿಳೆಯರನ್ನ ಟಾರ್ಗೆಟ್ ಮಾಡಿ ವಂಚಿಸುತ್ತಿದ್ದ ಖತರ್ನಾಕ್ ಒಬ್ಬನನ್ನ ಜೆ.ಪಿ.ನಗರ ಪೊಲೀಸರು ಬಂಧಿಸಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಜೆ.ಪಿ ನಗರದ 41 ವರ್ಷದ ಮಹಿಳೆಗೆ ವಂಚಿಸಿದ ಆರೋಪದ ಮೇಲೆ ಆರೋಪಿ ದೀಪಕ್ ಎಂಬಾತನನ್ನ ಬಂಧಿಸಲಾಗಿದೆ.

ಏನಿದು ಮ್ಯಾಟ್ರಿಮೋನಿ ಪ್ರಕರಣ?
ಮ್ಯಾಟ್ರಿಮೋನಿಯಲ್ಲಿ ವರನನ್ನ ಹುಡುಕುವ ಮಹಿಳೆಯರನ್ನೇ  ಟಾರ್ಗೆಟ್ ಮಾಡುತ್ತಿದ್ದ ದೀಪಕ್, ಅವರಿಂದ ಹಣ ಪೀಕಿ ವಂಚಿಸುತ್ತಿದ್ದ. ಅದೇ ರೀತಿ ಮ್ಯಾಟ್ರಿಮೋನಿಯಲ್ಲಿ ವರನನ್ನ ಹುಡುಕುತ್ತಿದ್ದ 41 ವರ್ಷದ ಮಹಿಳೆಗೆ ವಂಚಿಸಿ ಕೊನೆಗೆ ಪೊಲೀಸರಿಗೆ ತಗಲಾಕಿಕೊಂಡಿದ್ದಾನೆ.

ಮಧುರೈನಲ್ಲಿ ತಾನೊಬ್ಬ ಬ್ಯಾಂಕ್ ಉದ್ಯೋಗಿ, ನಿನ್ನನ್ನು ಮದುವೆ ಆಗ್ತೀನಿ ಎಂದು ಹೇಳಿದ್ದ ದೀಪಕ್‌, ಕಾಲಕ್ರಮೇಣ ಪರಸ್ಪರ ಇಬ್ಬರು ಕರೆ‌ ಮಾಡಿ ಮಾತನಾಡುತ್ತಿದ್ದರು. ಈ‌ ಮಧ್ಯೆ ತನ್ನ ವ್ಯಾಲೆಟ್ ಕಳೆದುಕೊಂಡಿದ್ದು ಹಣ ಬೇಕಾಗಿದೆ‌ ಎಂದು ಮಹಿಳೆಯಿಂದ 30 ಸಾವಿರ ರೂ. ಪಡೆದುಕೊಂಡಿದ್ದ. ಅಲ್ಲದೇ ತಾನು ಬಳಸುತ್ತಿರುವ ಸಿಮ್‌ ಬ್ಯಾಂಕ್‌ನವರದ್ದು, ಖಾಸಗಿಯಾಗಿ ಮಾತನಾಡಲು ಆಗುತ್ತಿಲ್ಲ. ಹೀಗಾಗಿ ಸಿಮ್‌ ಖರೀದಿಸುವಂತೆಯೂ ಬೇಡಿಕೆಯಿಟ್ಟಿದ್ದ. ಇದನ್ನು ನಂಬಿ ಮಹಿಳೆ ಸಿಮ್ ಖರೀದಿಸಿದ್ದರು. ಸಿಮ್‌ ತೆಗೆದುಕೊಳ್ಳಲು ಆಫೀಸ್ ಬಾಯ್ ಕಳುಹಿಸುವುದಾಗಿ ನಂಬಿಸಿ ತಾನೇ ಯುವತಿಯಿಂದ ಸಿಮ್ ಪಡೆದಿದ್ದ. ಸಿಮ್‌ ಪಡೆಯುತ್ತಿದ್ದಂತೆ ಮೊಬೈಲ್ ಸ್ವಿಚ್ಡ್​ ಆಫ್ ಮಾಡಿಕೊಂಡಿದ್ದ. ಸ್ನೇಹಿತರ ಬಳಿ ಈ ವಿಚಾರದ ಬಗ್ಗೆ ಹೇಳಿದಾಗ ತಾನು ಮೋಸ ಹೋಗಿರುವುದನ್ನು ಅರಿತ ಮಹಿಳೆ ತನ್ನ ಹೆಸರಿನಲ್ಲಿ ಖರೀದಿಸಿದ ಸಿಮ್ ಬ್ಲಾಕ್ ಮಾಡಿಸಿದ್ದರು. ಆನ್‌ಲೈನ್ ಮೂಲಕ‌ ಪರಿಚಯಿಸಿಕೊಂಡು ತನ್ನನ್ನು ನಂಬಿಸಿ ವಂಚಿಸಿದ ಆರೋಪಿ ವಿರುದ್ಧ ನೀಡಿದ ದೂರಿನ ಮೇರೆಗೆ ವಂಚಕ ದೀಪಕ್‌ನನ್ನು ಬಂಧಿಸಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಎರಡು ದಿನದಲ್ಲಿ 10 ಮೊಬೈಲ್‌ ನಂಬರ್ ಬದಲಾವಣೆ: ವಂಚಿಸುವ ಕಾಯಕವನ್ನು ಸಿದಿಸಿಕೊಂಡಿದ್ದ ದೀಪಕ್, ಬೇರೆ‌ ಬೇರೆ ಹೆಸರಿನಲ್ಲಿ ಅನ್ಯರ ಫೋಟೊಗಳ ಪ್ರೊಫೈಲ್ ಬಳಸಿಕೊಳ್ಳುತ್ತಿದ್ದ. ಮಹಿಳೆಯರನ್ನು ಮೃದುವಾಗಿ ಮಾತನಾಡಿ ನಂಬಿಸಿ ಅವರಿಂದ ಹಣ ಪಡೆಯುತ್ತಿದ್ದ. ನೇರವಾಗಿ ಭೇಟಿಯಾಗದೇ ಆನ್‌ಲೈನ್ ಮೂಲಕವೇ ಹಣ ಪಾವತಿಸಿಕೊಂಡು ವಂಚಿಸುತ್ತಿದ್ದ.‌ ಈ ಸಂಬಂಧ ಪ್ರಕರಣ ದಾಖಲಿಸಿಕೊಂಡು ಶೋಧ ನಡೆಸುತ್ತಿದ್ದಂತೆ ಬಂಧನ ಭೀತಿಯಿಂದ ಎರಡು ದಿನಗಳ ಅಂತರದಲ್ಲಿ 10 ಮೊಬೈಲ್ ನಂಬರ್ ಬದಲಾಯಿಸಿದ್ದ ಎಂದು ಪೊಲೀಸರ​ ತನಿಖೆಯಿಂದ ತಿಳಿದುಬಂದಿದೆ.

Vishwa News 24

Recent Posts

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ -vishwanews24

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…

4 days ago

ದೋಣಿ ಮುಗುಚಿ ಇಬ್ಬರು ಯುವಕರು ನೀರುಪಾಲು : ಓರ್ವನ ಮೃತದೇಹ ಪತ್ತೆ, ಇನ್ನೋರ್ವನಿಗಾಗಿ ಶೋಧ – vishwanews24

ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು  ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…

5 days ago

ಬಿಜೆಪಿ ಬೆಂಬಲಿಸುವವರೂ ನಮ್ಮ ಗ್ಯಾರಂಟಿಗಳ ಫಲಾನುಭವಿಗಳು : ಸಿದ್ದರಾಮಯ್ಯ – vishwanews24

 ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…

5 days ago

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ – vishwanews24

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…

5 days ago

ರೈಲು ಪ್ರಯಾಣಿಕರ ಗಮನಕ್ಕೆ: ಇಂದಿನಿಂದ ಬುಕ್ಕಿಂಗ್ ಮತ್ತು ರದ್ದತಿ  ನಿಯಮದಲ್ಲಿ ಭಾರಿ ಬದಲಾವಣೆ ; ಇಲ್ಲಿದೆ ಪೂರ್ಣ ಮಾಹಿತಿ – vishwanews24

ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…

5 days ago

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ – vishwanews24

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…

5 days ago