Featured

ಮ್ಯಾಟ್ರಿಮೋನಿಯಲ್ಲಿ ಮಹಿಳೆಯರೇ ಟಾರ್ಗೆಟ್ –  ನಕಲಿ ಪ್ರೊಫೈಲ್‌ ಸೃಷ್ಟಿಸಿ ಯುವತಿಯರಿಗೆ ವಂಚನೆ ; ಖತರ್ನಾಕ್ ಆರೋಪಿ ಸೆರೆ – Vishwanews24

ಮ್ಯಾಟ್ರಿಮೋನಿಯಲ್ಲಿ ಮಹಿಳೆಯರೇ ಟಾರ್ಗೆಟ್ –  ನಕಲಿ ಪ್ರೊಫೈಲ್‌ ಸೃಷ್ಟಿಸಿ ಯುವತಿಯರಿಗೆ ವಂಚನೆ ; ಖತರ್ನಾಕ್ ಆರೋಪಿ ಸೆರೆ

ಬೆಂಗಳೂರು: ಮ್ಯಾಟ್ರಿಮೋನಿಯಲ್ಲಿ ವರನನ್ನು ಹುಡುಕುತ್ತಿದ್ದ ಮಹಿಳೆಯರನ್ನ ಟಾರ್ಗೆಟ್ ಮಾಡಿ ವಂಚಿಸುತ್ತಿದ್ದ ಖತರ್ನಾಕ್ ಒಬ್ಬನನ್ನ ಜೆ.ಪಿ.ನಗರ ಪೊಲೀಸರು ಬಂಧಿಸಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಜೆ.ಪಿ ನಗರದ 41 ವರ್ಷದ ಮಹಿಳೆಗೆ ವಂಚಿಸಿದ ಆರೋಪದ ಮೇಲೆ ಆರೋಪಿ ದೀಪಕ್ ಎಂಬಾತನನ್ನ ಬಂಧಿಸಲಾಗಿದೆ.

ಏನಿದು ಮ್ಯಾಟ್ರಿಮೋನಿ ಪ್ರಕರಣ?
ಮ್ಯಾಟ್ರಿಮೋನಿಯಲ್ಲಿ ವರನನ್ನ ಹುಡುಕುವ ಮಹಿಳೆಯರನ್ನೇ  ಟಾರ್ಗೆಟ್ ಮಾಡುತ್ತಿದ್ದ ದೀಪಕ್, ಅವರಿಂದ ಹಣ ಪೀಕಿ ವಂಚಿಸುತ್ತಿದ್ದ. ಅದೇ ರೀತಿ ಮ್ಯಾಟ್ರಿಮೋನಿಯಲ್ಲಿ ವರನನ್ನ ಹುಡುಕುತ್ತಿದ್ದ 41 ವರ್ಷದ ಮಹಿಳೆಗೆ ವಂಚಿಸಿ ಕೊನೆಗೆ ಪೊಲೀಸರಿಗೆ ತಗಲಾಕಿಕೊಂಡಿದ್ದಾನೆ.

ಮಧುರೈನಲ್ಲಿ ತಾನೊಬ್ಬ ಬ್ಯಾಂಕ್ ಉದ್ಯೋಗಿ, ನಿನ್ನನ್ನು ಮದುವೆ ಆಗ್ತೀನಿ ಎಂದು ಹೇಳಿದ್ದ ದೀಪಕ್‌, ಕಾಲಕ್ರಮೇಣ ಪರಸ್ಪರ ಇಬ್ಬರು ಕರೆ‌ ಮಾಡಿ ಮಾತನಾಡುತ್ತಿದ್ದರು. ಈ‌ ಮಧ್ಯೆ ತನ್ನ ವ್ಯಾಲೆಟ್ ಕಳೆದುಕೊಂಡಿದ್ದು ಹಣ ಬೇಕಾಗಿದೆ‌ ಎಂದು ಮಹಿಳೆಯಿಂದ 30 ಸಾವಿರ ರೂ. ಪಡೆದುಕೊಂಡಿದ್ದ. ಅಲ್ಲದೇ ತಾನು ಬಳಸುತ್ತಿರುವ ಸಿಮ್‌ ಬ್ಯಾಂಕ್‌ನವರದ್ದು, ಖಾಸಗಿಯಾಗಿ ಮಾತನಾಡಲು ಆಗುತ್ತಿಲ್ಲ. ಹೀಗಾಗಿ ಸಿಮ್‌ ಖರೀದಿಸುವಂತೆಯೂ ಬೇಡಿಕೆಯಿಟ್ಟಿದ್ದ. ಇದನ್ನು ನಂಬಿ ಮಹಿಳೆ ಸಿಮ್ ಖರೀದಿಸಿದ್ದರು. ಸಿಮ್‌ ತೆಗೆದುಕೊಳ್ಳಲು ಆಫೀಸ್ ಬಾಯ್ ಕಳುಹಿಸುವುದಾಗಿ ನಂಬಿಸಿ ತಾನೇ ಯುವತಿಯಿಂದ ಸಿಮ್ ಪಡೆದಿದ್ದ. ಸಿಮ್‌ ಪಡೆಯುತ್ತಿದ್ದಂತೆ ಮೊಬೈಲ್ ಸ್ವಿಚ್ಡ್​ ಆಫ್ ಮಾಡಿಕೊಂಡಿದ್ದ. ಸ್ನೇಹಿತರ ಬಳಿ ಈ ವಿಚಾರದ ಬಗ್ಗೆ ಹೇಳಿದಾಗ ತಾನು ಮೋಸ ಹೋಗಿರುವುದನ್ನು ಅರಿತ ಮಹಿಳೆ ತನ್ನ ಹೆಸರಿನಲ್ಲಿ ಖರೀದಿಸಿದ ಸಿಮ್ ಬ್ಲಾಕ್ ಮಾಡಿಸಿದ್ದರು. ಆನ್‌ಲೈನ್ ಮೂಲಕ‌ ಪರಿಚಯಿಸಿಕೊಂಡು ತನ್ನನ್ನು ನಂಬಿಸಿ ವಂಚಿಸಿದ ಆರೋಪಿ ವಿರುದ್ಧ ನೀಡಿದ ದೂರಿನ ಮೇರೆಗೆ ವಂಚಕ ದೀಪಕ್‌ನನ್ನು ಬಂಧಿಸಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಎರಡು ದಿನದಲ್ಲಿ 10 ಮೊಬೈಲ್‌ ನಂಬರ್ ಬದಲಾವಣೆ: ವಂಚಿಸುವ ಕಾಯಕವನ್ನು ಸಿದಿಸಿಕೊಂಡಿದ್ದ ದೀಪಕ್, ಬೇರೆ‌ ಬೇರೆ ಹೆಸರಿನಲ್ಲಿ ಅನ್ಯರ ಫೋಟೊಗಳ ಪ್ರೊಫೈಲ್ ಬಳಸಿಕೊಳ್ಳುತ್ತಿದ್ದ. ಮಹಿಳೆಯರನ್ನು ಮೃದುವಾಗಿ ಮಾತನಾಡಿ ನಂಬಿಸಿ ಅವರಿಂದ ಹಣ ಪಡೆಯುತ್ತಿದ್ದ. ನೇರವಾಗಿ ಭೇಟಿಯಾಗದೇ ಆನ್‌ಲೈನ್ ಮೂಲಕವೇ ಹಣ ಪಾವತಿಸಿಕೊಂಡು ವಂಚಿಸುತ್ತಿದ್ದ.‌ ಈ ಸಂಬಂಧ ಪ್ರಕರಣ ದಾಖಲಿಸಿಕೊಂಡು ಶೋಧ ನಡೆಸುತ್ತಿದ್ದಂತೆ ಬಂಧನ ಭೀತಿಯಿಂದ ಎರಡು ದಿನಗಳ ಅಂತರದಲ್ಲಿ 10 ಮೊಬೈಲ್ ನಂಬರ್ ಬದಲಾಯಿಸಿದ್ದ ಎಂದು ಪೊಲೀಸರ​ ತನಿಖೆಯಿಂದ ತಿಳಿದುಬಂದಿದೆ.

Vishwa News 24

Recent Posts

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

20 hours ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

20 hours ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

21 hours ago

ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ ಕಲಿಯಬೇಕಿಲ್ಲ : ವಿಪಕ್ಷಗಳಿಗೆ ಜಮೀರ್ ಅಹ್ಮದ್ ಖಾನ್‌  ತಿರುಗೇಟು – vishwanews24

ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ  ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್‌ ಅಹ್ಮದ್‌ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…

21 hours ago

ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ – vishwanews24

ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…

21 hours ago

2047ರ ವೇಳೆಗೆ ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನು ನಿರ್ಮಿಸುತ್ತೇವೆ : ಪ್ರಧಾನಿ ಮೋದಿ – vishwanews24

2047ರ ವೇಳೆಗೆ ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನು ನಿರ್ಮಿಸುತ್ತೇವೆ : ಪ್ರಧಾನಿ ಮೋದಿ ನವದೆಹಲಿ: 2047ರ ವೇಳೆಗೆ ‘ವಿಕಸಿತ ಭಾರತ’ದ ಕನಸನ್ನು…

21 hours ago