ಕಾರ್ಕಳ:ಯಕ್ಷಗಾನದಲ್ಲಿ ಸಲಿಂಗ ಕಾಮ ಇದೆ ಎಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಪುರುಷೋತ್ತಮ ಬಿಳಿಮಲೆಯವರು ಪ್ರತಿಪಾದಿಸಿರುವುದು ಕನ್ನಡದ ಶ್ರೀಮಂತ ಕಲಾಪ್ರಕಾರಕ್ಕೆ ಮಾಡಿದ ಅಪಮಾನ ಮಾಡಿದ್ದು, ಅವರನ್ನು ತಕ್ಷಣ ಹುದ್ದೆಯಿಂದ ವಜಾಗೊಳಿಸಬೇಕೆಂದು ಕನ್ನಡ ಸಂಸ್ಕ್ರತಿ ಇಲಾಖೆ ಮಾಜಿ ಸಚಿವ ವಿ.ಸುನೀಲ್ ಕುಮಾರ್ ಆಗ್ರಹಿಸಿದ್ದಾರೆ.
ಯಕ್ಷಗಾನ ಒಂದು ದೈವಿಕ ಕಲೆ. ದಕ್ಷಿಣೋತ್ತರ ಕನ್ನಡದ ಸಾವಿರಾರು ಕಲಾವಿದರು ವ್ಯವಸಾಯಿ ಮೇಳ ಹಾಗೂ ಹವ್ಯಾಸಿ ಕಲಾವಿದರಾಗಿ ತಮ್ಮನ್ನು ತೊಡಗಿಸಿಕೊಂಡಿದ್ದು, ತಮ್ಮ ಬಿಡುಬೀಸು ಹೇಳಿಕೆಯಿಂದ ಒಂದು ಕಲಾಪ್ರಕಾರವನ್ನೇ ಅಸಹ್ಯವಾಗಿಸುವ ಪ್ರಯತ್ನವನ್ನು ಬಿಳಿಮಲೆ ನಡೆಸಿದ್ದಾರೆ ಎಂದು ಅವರು ಆಕ್ಷೇಪ ವ್ಯಕ್ತಪಡಿಸಿದ್ದಾರೆ.
ಈ ಹಿಂದೆ ಹುತಾತ್ಮ ಸೈನಿಕರ ಜಾತಿ ಹುಡುಕಿ ವಿವಾದ ಸೃಷ್ಟಿಸಿದ್ದ ಬಿಳಿಮಲೆಯವರು ಈಗ ಯಕ್ಷಗಾನ ಕಲಾವಿದರ ಬಗ್ಗೆ ಅದೇ ಅಪಸವ್ಯವನ್ನು ವ್ಯಕ್ತಪಡಿಸಿದ್ದಾರೆ. ಇದನ್ನು ಯಾವುದೇ ಕಾರಣಕ್ಕೂ ಸಹಿಸುವುದಕ್ಕೆ ಸಾಧ್ಯವಿಲ್ಲ. ಇದು ಇಡಿ ಕಲಾ ಪ್ರಕಾರವನ್ನು ಮುಜುಗರಕ್ಕೆ ದೂಡುವ ಕೃತ್ಯ ಎಂದು ಟೀಕಿಸಿದ್ದಾರೆ.
ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾಗಿ ಇಂಥ ಹೇಳಿಕೆ ನೀಡುವಾಗ ಸಮಷ್ಠಿ ಜವಾಬ್ದಾರಿ ಪ್ರದರ್ಶಿಸಬೇಕಿತ್ತು. ಸ್ಥಾನ ಗೌರವವನ್ನು ಅರಿಯಬೇಕಿತ್ತು. ಆದರೆ ಬಿಳಿಮಲೆಯವರು ತಮ್ಮ ಎಂದಿನ ಮಾತಿನ ಚಪಲ ಪ್ರದರ್ಶಿಸಿದ್ದಾರೆ. ಈ ಬೇಜವಾಬ್ದಾರಿ ವರ್ತನೆಗಾಗಿ ಸರ್ಕಾರ ಅವರನ್ನು ತಕ್ಷಣ ಪ್ರಾಧಿಕಾರದ ಜವಾಬ್ದಾರಿಯಿಂದ ವಜಾಗೊಳಿಸಬೇಕು ಎಂದು ಒತ್ತಾಯಿಸಿದ್ದಾರೆ.
ಬೆಳ್ತಂಗಡಿ: ಕೆಎಸ್ಸಾರ್ಟಿಸಿ ಬಸ್ ಹಾಗೂ ಬೈಕ್ ಢಿಕ್ಕಿ; ಸವಾರ ಮೃತ್ಯು, ಸಹ ಸವಾರ ಗಂಭೀರ ಬೆಳ್ತಂಗಡಿ: ನೀರಚಿಲುಮೆಯ ತಿರುವಿನಲ್ಲಿ ಕೆಎಸ್ಸಾರ್ಟಿಸಿ…
ಮೂಡುಬಿದಿರೆ: ಮನೆಯಲ್ಲಿ ಸಿಲಿಂಡರ್ ಸ್ಫೋಟ; ಮೂವರಿಗೆ ಗಾಯ, ಓರ್ವನ ಸ್ಥಿತಿ ಗಂಭೀರ ಮೂಡುಬಿದಿರೆ : ಮನೆಯಲ್ಲಿನ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ…
ಉಡುಪಿ : ಮರಕ್ಕೆ ಬೈಕ್ ಢಿಕ್ಕಿ ; ಯುವಕ ಮೃತ್ಯು ಉಡುಪಿ: ಮಣಿಪಾಲದಿಂದ ಪರ್ಕಳ ಕಡೆಗೆ ತೆರಳುತ್ತಿದ್ದ ಬುಲೆಟ್ ಬೈಕ್…
ಉಡುಪಿ: ಸಾಯಿರಾಜ್ ಸೊಸೈಟಿ ಸಿಇಒ ಆತ್ಮಹತ್ಯೆ ಪ್ರಕರಣ.. ಕ್ರಿಕೆಟ್ ಬೆಟ್ಟಿಂಗ್ನಲ್ಲಿ ಕೋಟ್ಯಂತರ ರೂಪಾಯಿ ನಷ್ಟ ; ಡೆತ್ ನೋಟ್ ನಲ್ಲಿ…
ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ ಉಡುಪಿ: ಕೇಂದ್ರ…
ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ ಕಾಪು,: ಎಲ್ಲೂರಿನ ರೇವತಿ ಕುಂದರ್…