Featured

ಯಕ್ಷಗಾನಕ್ಕೆ  ಅಪಮಾನ : ಪುರುಷೋತ್ತಮ ಬಿಳಿಮಲೆ ಅವರನ್ನು ತಕ್ಷಣ ಹುದ್ದೆಯಿಂದ ವಜಾಗೊಳಿಸಿ : ಸುನೀಲ್‌ ಕುಮಾರ್‌ ಆಗ್ರಹ – vishwanews24

ಯಕ್ಷಗಾನಕ್ಕೆ  ಅಪಮಾನ  : ಪುರುಷೋತ್ತಮ ಬಿಳಿಮಲೆ ಅವರನ್ನು ತಕ್ಷಣ ಹುದ್ದೆಯಿಂದ ವಜಾಗೊಳಿಸಿ : ಸುನೀಲ್‌ ಕುಮಾರ್‌ ಆಗ್ರಹ

ಕಾರ್ಕಳ:ಯಕ್ಷಗಾನದಲ್ಲಿ ಸಲಿಂಗ ಕಾಮ ಇದೆ ಎಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಪುರುಷೋತ್ತಮ ಬಿಳಿಮಲೆಯವರು ಪ್ರತಿಪಾದಿಸಿರುವುದು ಕನ್ನಡದ ಶ್ರೀಮಂತ ಕಲಾಪ್ರಕಾರಕ್ಕೆ ಮಾಡಿದ ಅಪಮಾನ ಮಾಡಿದ್ದು, ಅವರನ್ನು ತಕ್ಷಣ ಹುದ್ದೆಯಿಂದ ವಜಾಗೊಳಿಸಬೇಕೆಂದು ಕನ್ನಡ ಸಂಸ್ಕ್ರತಿ ಇಲಾಖೆ ಮಾಜಿ ಸಚಿವ ವಿ.ಸುನೀಲ್ ಕುಮಾರ್ ಆಗ್ರಹಿಸಿದ್ದಾರೆ.

ಯಕ್ಷಗಾನ ಒಂದು ದೈವಿಕ ಕಲೆ. ದಕ್ಷಿಣೋತ್ತರ ಕನ್ನಡದ ಸಾವಿರಾರು ಕಲಾವಿದರು ವ್ಯವಸಾಯಿ ಮೇಳ ಹಾಗೂ ಹವ್ಯಾಸಿ ಕಲಾವಿದರಾಗಿ ತಮ್ಮನ್ನು ತೊಡಗಿಸಿಕೊಂಡಿದ್ದು, ತಮ್ಮ ಬಿಡುಬೀಸು ಹೇಳಿಕೆಯಿಂದ ಒಂದು ಕಲಾಪ್ರಕಾರವನ್ನೇ ಅಸಹ್ಯವಾಗಿಸುವ ಪ್ರಯತ್ನವನ್ನು ಬಿಳಿಮಲೆ ನಡೆಸಿದ್ದಾರೆ ಎಂದು ಅವರು ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ಈ ಹಿಂದೆ ಹುತಾತ್ಮ ಸೈನಿಕರ ಜಾತಿ ಹುಡುಕಿ ವಿವಾದ ಸೃಷ್ಟಿಸಿದ್ದ ಬಿಳಿಮಲೆಯವರು ಈಗ ಯಕ್ಷಗಾನ ಕಲಾವಿದರ ಬಗ್ಗೆ ಅದೇ ಅಪಸವ್ಯವನ್ನು ವ್ಯಕ್ತಪಡಿಸಿದ್ದಾರೆ. ಇದನ್ನು ಯಾವುದೇ ಕಾರಣಕ್ಕೂ ಸಹಿಸುವುದಕ್ಕೆ ಸಾಧ್ಯವಿಲ್ಲ. ಇದು ಇಡಿ ಕಲಾ ಪ್ರಕಾರವನ್ನು ಮುಜುಗರಕ್ಕೆ ದೂಡುವ ಕೃತ್ಯ ಎಂದು ಟೀಕಿಸಿದ್ದಾರೆ.

ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾಗಿ ಇಂಥ ಹೇಳಿಕೆ ನೀಡುವಾಗ ಸಮಷ್ಠಿ ಜವಾಬ್ದಾರಿ ಪ್ರದರ್ಶಿಸಬೇಕಿತ್ತು. ಸ್ಥಾನ ಗೌರವವನ್ನು ಅರಿಯಬೇಕಿತ್ತು. ಆದರೆ ಬಿಳಿಮಲೆಯವರು ತಮ್ಮ ಎಂದಿನ ಮಾತಿನ ಚಪಲ ಪ್ರದರ್ಶಿಸಿದ್ದಾರೆ. ಈ ಬೇಜವಾಬ್ದಾರಿ ವರ್ತನೆಗಾಗಿ ಸರ್ಕಾರ ಅವರನ್ನು ತಕ್ಷಣ ಪ್ರಾಧಿಕಾರದ ಜವಾಬ್ದಾರಿಯಿಂದ ವಜಾಗೊಳಿಸಬೇಕು ಎಂದು ಒತ್ತಾಯಿಸಿದ್ದಾರೆ.

Vishwa News 24

Recent Posts

ಎಸ್‌ಟಿಪಿಯನ್ನು ಮೂಳೂರಿನಿಂದ ಬೆಳಪು ಪ್ರದೇಶಕ್ಕೆ ಸ್ಥಳಾಂತರ ಮಾಡಿದರೆ ಕಾಪು ಪುರಸಭೆಗೆ ಸಂಪೂರ್ಣ ಸ್ವಾಗತ : ದೇವಿಪ್ರಸಾದ್ ಶೆಟ್ಟಿ – vishwanews24

ಬೆಳಪು ಪ್ರದೇಶದಲ್ಲಿ ಎಲ್ಲಾ ಅಗತ್ಯ ಸೌಲಭ್ಯಗಳೊಂದಿಗೆ ಘಟಕ ನಿರ್ಮಿಸಿದರೆ ನಮ್ಮಿಂದ ಯಾವುದೇ ವಿರೋಧ ಇರುವುದಿಲ್ಲ : ದೇವಿಪ್ರಸಾದ್ ಶೆಟ್ಟಿ ಮೂಳೂರು…

22 hours ago

ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ – vishwanews24

ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ ಬೆಳಗಾವಿ: ಪ್ರಿಯಕರನ ಜೊತೆ…

1 day ago

ಬಿಜೆಪಿ ನಡೆಸಿರುವ ಅಪವಿತ್ರ ಮೈತ್ರಿ ಇತಿಹಾಸವನ್ನು ದೇಶ ಮರೆತಿಲ್ಲ : ಬಿ.ಕೆ.ಹರಿಪ್ರಸಾದ್ – vishwanews24

ದೇಶದ ಜಾತ್ಯತೀತ ಮೌಲ್ಯಗಳನ್ನು ರಕ್ಷಿಸಲು ಕಾಂಗ್ರೆಸ್ ಪಕ್ಷ ಸದಾ ಸಮಾನ ಚಿಂತನೆಯ ಪಕ್ಷಗಳೊಂದಿಗೆ ಕೈಜೋಡಿಸಿದೆ : ಬಿ.ಕೆ.ಹರಿಪ್ರಸಾದ್ ಬೆಂಗಳೂರು: ‘ಬಿಜೆಪಿ…

1 day ago

ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ – vishwanews24

ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ ಪಡುಬಿದ್ರಿ: ಸನಾತನ ಫೌಂಡೇಶನ್‌ನ ಅಧ್ಯಕ್ಷ,…

1 day ago

ವಿವಾಹಿತ ಮಹಿಳೆ  ಜತೆ ಲಿವ್ ಇನ್ ರಿಲೇಶನ್‌ ಶಿಪ್‌ನಲ್ಲಿದ್ದ ಯುವಕ ಶವವಾಗಿ ಪತ್ತೆ  – vishwanews24

ವಿವಾಹಿತ ಮಹಿಳೆ ಜತೆ ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ಶವವಾಗಿ ಪತ್ತೆ  ಬೆಂಗಳೂರು: ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ನೇಣುಬಿಗಿದ…

1 day ago

ಬಿಜೆಪಿ ನಾಯಕ ಸುವೇಂದು ಅಧಿಕಾರಿ ಬಂಗಾಳದ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕಾರ – vishwanews24

ಪಶ್ಚಿಮ ಬಂಗಾಳದ ರಾಜಕೀಯ ಇತಿಹಾಸದಲ್ಲಿ ಹೊಸ ಪರ್ವ.. ಬಿಜೆಪಿ ಮೊದಲ ಸಿಎಂ ಆಗಿ ಪ್ರಮಾಣ ಸ್ವೀಕಾರ.. ಐತಿಹಾಸಿಕ ಕ್ಷಣಕ್ಕೆ ಮೋದಿ,…

1 day ago