ಮಂಗಳೂರು, – ರಾಹುಲ್ ಗಾಂಧಿಯವರು ಬಳಸಿದ್ದ ‘ಇವನರ್ವ ಇವನರ್ವ’ ಹೇಳಿಕೆಯನ್ನು ಯಕ್ಷಗಾನದಲ್ಲಿ ಬಳಸಿರುವ ವಿಚಾರಕ್ಕೆ ಸಂಬಂಧಿಸಿದಂತೆ ಕಲಾವಿದನ ಅಮಾನತಿಗೆ ನೀಡಿದ್ದ ನೋಟಿಸನ್ನು ಚುನಾವಣಾ ಆಯೋಗ ಹಿಂಪಡೆದಿದೆ. ಕಟೀಲು ಮೇಳದ ಹಾಸ್ಯಕಲಾವಿದ ಪೂರ್ಣೇಶ್ ಆಚಾರ್ಯ ಅವರನ್ನು ಮೇಳದಿಂದ ವಜಾಗೊಳಿಸುವಂತೆ ನಿ ಡಿದ್ದ ಸೂಚನೆಯನ್ನು ಚುನಾವಣಾ ಆಯೋಗ ವಾಪಸ್ ಪಡೆದಿದೆ. ರಾಹುಲ್ ಗಾಂಧಿಯವರ ಇವನರ್ವ ಹೇಳಿಕೆಯನ್ನು ಯಕ್ಷಗಾನದಲ್ಲಿ ಬಳಸಿಕೊಂಡ ವಿಡಿಯೋ ವೈರಲ್ ಆಗಿದ್ದ ಹಿನ್ನೆಲೆಯಲ್ಲಿ ಯಕ್ಷಗಾನ ಕಲಾವಿದ ಪೂರ್ಣೇಶ್ ಆಚಾರ್ಯ ಅವರನ್ನು ಕಟೀಲು ಮೇಳದಿಂದ ವಜಾ ಮಾಡಬೇಕು ಎಂದು ಉಲ್ಲೇಖಿಸಿ ಚುನಾವಣಾ ಆಯೋಗ ನೋಟಿಸ್ ನೀಡಿತ್ತು. ಆದರೆ ಈ ವಿಚಾರದಲ್ಲಿ ಆಯೋಗಕ್ಕೆ ತಪ್ಪು ಮಾಹಿತಿ ಲಭಿಸಿತ್ತು ಎನ್ನಲಾಗಿದೆ.
ವೀಡಿಯೋದಲ್ಲಿ ಇರುವುದು ಕಾಸರಗೋಡು ಜಿಲ್ಲೆಯ ಮಾನ್ಯದಲ್ಲಿ ನಡೆದ ಯಕ್ಷಗಾನ ಪ್ರಸಂಗದ ತುಣುಕು. ಅದು ಕೇರಳಕ್ಕೆ ಸೇರಿಕೊಂಡಿರುವ ಕಾಸರಗೋಡು ಆಗಿರುವುದರಿಂದ ಅಲ್ಲಿ ಚುನಾವಣಾ ನೀತಿ ಸಂಹಿತೆಯೂ ಅನ್ವಯವಾಗುವುದಿಲ್ಲ. ವಾಸ್ತವವಾಗಿ ಏ. ೧ರಂದು ನಾನಿದ್ದ ಕಟೀಲು ಮೇಳದ ಪ್ರದರ್ಶನವು ಬೆಳ್ಳಾರೆಯ ಐವರ್ನಾಡಿನಲ್ಲಿತ್ತು ಎಂದು ಕಲಾವಿದ ಪೂರ್ಣೇಶ್ ಹೇಳಿದ್ದರು. ಜೊತೆಗೆ ಆಯೋಗಕ್ಕೆ ಪೂರಕ ದಾಖಲೆಗಳನ್ನೂ ಸಲ್ಲಿಸಿದ್ದರು. ದಾಖಲೆಗಳನ್ನು ಪರಿಶೀಲಿಸಿದ ಬಳಿಕ ಸತ್ಯಾಸತ್ಯತೆ ಮನಗಂಡು ನೋಟಿಸ್ನ್ನು ವಾಪಸ್ ಪಡೆಯಲಾಗಿದೆ ಎಂದು ಮೂಡುಬಿದಿರೆ ಕ್ಷೇತ್ರದ ಚುನಾವಣಾಧಿಕಾರಿ ಪ್ರಸನ್ನ ತಿಳಿಸಿದ್ದಾರೆ. ಇದರಿಂದಾಗಿ ಪೂರ್ಣೇಶ್ ಆಚಾರ್ಯರ ಮುಂದಿನ ಕಲಾ ಪ್ರದರ್ಶನಕ್ಕೆ ಯಾವುದೇ ಅಡಚಣೆ ಇಲ್ಲದಂತಾಗಿದೆ.
ಬೆಳಪು ಪ್ರದೇಶದಲ್ಲಿ ಎಲ್ಲಾ ಅಗತ್ಯ ಸೌಲಭ್ಯಗಳೊಂದಿಗೆ ಘಟಕ ನಿರ್ಮಿಸಿದರೆ ನಮ್ಮಿಂದ ಯಾವುದೇ ವಿರೋಧ ಇರುವುದಿಲ್ಲ : ದೇವಿಪ್ರಸಾದ್ ಶೆಟ್ಟಿ ಮೂಳೂರು…
ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ ಬೆಳಗಾವಿ: ಪ್ರಿಯಕರನ ಜೊತೆ…
ದೇಶದ ಜಾತ್ಯತೀತ ಮೌಲ್ಯಗಳನ್ನು ರಕ್ಷಿಸಲು ಕಾಂಗ್ರೆಸ್ ಪಕ್ಷ ಸದಾ ಸಮಾನ ಚಿಂತನೆಯ ಪಕ್ಷಗಳೊಂದಿಗೆ ಕೈಜೋಡಿಸಿದೆ : ಬಿ.ಕೆ.ಹರಿಪ್ರಸಾದ್ ಬೆಂಗಳೂರು: ‘ಬಿಜೆಪಿ…
ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ ಪಡುಬಿದ್ರಿ: ಸನಾತನ ಫೌಂಡೇಶನ್ನ ಅಧ್ಯಕ್ಷ,…
ವಿವಾಹಿತ ಮಹಿಳೆ ಜತೆ ಲಿವ್ ಇನ್ ರಿಲೇಶನ್ಶಿಪ್ನಲ್ಲಿದ್ದ ಯುವಕ ಶವವಾಗಿ ಪತ್ತೆ ಬೆಂಗಳೂರು: ಲಿವ್ ಇನ್ ರಿಲೇಶನ್ಶಿಪ್ನಲ್ಲಿದ್ದ ಯುವಕ ನೇಣುಬಿಗಿದ…
ಪಶ್ಚಿಮ ಬಂಗಾಳದ ರಾಜಕೀಯ ಇತಿಹಾಸದಲ್ಲಿ ಹೊಸ ಪರ್ವ.. ಬಿಜೆಪಿ ಮೊದಲ ಸಿಎಂ ಆಗಿ ಪ್ರಮಾಣ ಸ್ವೀಕಾರ.. ಐತಿಹಾಸಿಕ ಕ್ಷಣಕ್ಕೆ ಮೋದಿ,…