ಮಂಗಳೂರು, – ರಾಹುಲ್ ಗಾಂಧಿಯವರು ಬಳಸಿದ್ದ ‘ಇವನರ್ವ ಇವನರ್ವ’ ಹೇಳಿಕೆಯನ್ನು ಯಕ್ಷಗಾನದಲ್ಲಿ ಬಳಸಿರುವ ವಿಚಾರಕ್ಕೆ ಸಂಬಂಧಿಸಿದಂತೆ ಕಲಾವಿದನ ಅಮಾನತಿಗೆ ನೀಡಿದ್ದ ನೋಟಿಸನ್ನು ಚುನಾವಣಾ ಆಯೋಗ ಹಿಂಪಡೆದಿದೆ. ಕಟೀಲು ಮೇಳದ ಹಾಸ್ಯಕಲಾವಿದ ಪೂರ್ಣೇಶ್ ಆಚಾರ್ಯ ಅವರನ್ನು ಮೇಳದಿಂದ ವಜಾಗೊಳಿಸುವಂತೆ ನಿ ಡಿದ್ದ ಸೂಚನೆಯನ್ನು ಚುನಾವಣಾ ಆಯೋಗ ವಾಪಸ್ ಪಡೆದಿದೆ. ರಾಹುಲ್ ಗಾಂಧಿಯವರ ಇವನರ್ವ ಹೇಳಿಕೆಯನ್ನು ಯಕ್ಷಗಾನದಲ್ಲಿ ಬಳಸಿಕೊಂಡ ವಿಡಿಯೋ ವೈರಲ್ ಆಗಿದ್ದ ಹಿನ್ನೆಲೆಯಲ್ಲಿ ಯಕ್ಷಗಾನ ಕಲಾವಿದ ಪೂರ್ಣೇಶ್ ಆಚಾರ್ಯ ಅವರನ್ನು ಕಟೀಲು ಮೇಳದಿಂದ ವಜಾ ಮಾಡಬೇಕು ಎಂದು ಉಲ್ಲೇಖಿಸಿ ಚುನಾವಣಾ ಆಯೋಗ ನೋಟಿಸ್ ನೀಡಿತ್ತು. ಆದರೆ ಈ ವಿಚಾರದಲ್ಲಿ ಆಯೋಗಕ್ಕೆ ತಪ್ಪು ಮಾಹಿತಿ ಲಭಿಸಿತ್ತು ಎನ್ನಲಾಗಿದೆ.
ವೀಡಿಯೋದಲ್ಲಿ ಇರುವುದು ಕಾಸರಗೋಡು ಜಿಲ್ಲೆಯ ಮಾನ್ಯದಲ್ಲಿ ನಡೆದ ಯಕ್ಷಗಾನ ಪ್ರಸಂಗದ ತುಣುಕು. ಅದು ಕೇರಳಕ್ಕೆ ಸೇರಿಕೊಂಡಿರುವ ಕಾಸರಗೋಡು ಆಗಿರುವುದರಿಂದ ಅಲ್ಲಿ ಚುನಾವಣಾ ನೀತಿ ಸಂಹಿತೆಯೂ ಅನ್ವಯವಾಗುವುದಿಲ್ಲ. ವಾಸ್ತವವಾಗಿ ಏ. ೧ರಂದು ನಾನಿದ್ದ ಕಟೀಲು ಮೇಳದ ಪ್ರದರ್ಶನವು ಬೆಳ್ಳಾರೆಯ ಐವರ್ನಾಡಿನಲ್ಲಿತ್ತು ಎಂದು ಕಲಾವಿದ ಪೂರ್ಣೇಶ್ ಹೇಳಿದ್ದರು. ಜೊತೆಗೆ ಆಯೋಗಕ್ಕೆ ಪೂರಕ ದಾಖಲೆಗಳನ್ನೂ ಸಲ್ಲಿಸಿದ್ದರು. ದಾಖಲೆಗಳನ್ನು ಪರಿಶೀಲಿಸಿದ ಬಳಿಕ ಸತ್ಯಾಸತ್ಯತೆ ಮನಗಂಡು ನೋಟಿಸ್ನ್ನು ವಾಪಸ್ ಪಡೆಯಲಾಗಿದೆ ಎಂದು ಮೂಡುಬಿದಿರೆ ಕ್ಷೇತ್ರದ ಚುನಾವಣಾಧಿಕಾರಿ ಪ್ರಸನ್ನ ತಿಳಿಸಿದ್ದಾರೆ. ಇದರಿಂದಾಗಿ ಪೂರ್ಣೇಶ್ ಆಚಾರ್ಯರ ಮುಂದಿನ ಕಲಾ ಪ್ರದರ್ಶನಕ್ಕೆ ಯಾವುದೇ ಅಡಚಣೆ ಇಲ್ಲದಂತಾಗಿದೆ.
ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…
ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…
ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…
ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…
ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…
ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…