ಜಿಲ್ಲೆ

ಯಕ್ಷಗಾನದಲ್ಲಿ ರಾಹುಲ್ ‘ಡೈಲಾಗ್’………..;; ಕಲಾವಿದನ ಅಮಾನತು ವಾಪಸ್

ಮಂಗಳೂರು, – ರಾಹುಲ್ ಗಾಂಧಿಯವರು ಬಳಸಿದ್ದ ‘ಇವನರ್ವ ಇವನರ್ವ’ ಹೇಳಿಕೆಯನ್ನು ಯಕ್ಷಗಾನದಲ್ಲಿ ಬಳಸಿರುವ ವಿಚಾರಕ್ಕೆ ಸಂಬಂಧಿಸಿದಂತೆ ಕಲಾವಿದನ ಅಮಾನತಿಗೆ ನೀಡಿದ್ದ ನೋಟಿಸನ್ನು ಚುನಾವಣಾ ಆಯೋಗ ಹಿಂಪಡೆದಿದೆ. ಕಟೀಲು ಮೇಳದ ಹಾಸ್ಯಕಲಾವಿದ ಪೂರ್ಣೇಶ್ ಆಚಾರ್ಯ ಅವರನ್ನು ಮೇಳದಿಂದ ವಜಾಗೊಳಿಸುವಂತೆ ನಿ ಡಿದ್ದ ಸೂಚನೆಯನ್ನು ಚುನಾವಣಾ ಆಯೋಗ ವಾಪಸ್ ಪಡೆದಿದೆ. ರಾಹುಲ್ ಗಾಂಧಿಯವರ ಇವನರ್ವ ಹೇಳಿಕೆಯನ್ನು ಯಕ್ಷಗಾನದಲ್ಲಿ ಬಳಸಿಕೊಂಡ ವಿಡಿಯೋ ವೈರಲ್ ಆಗಿದ್ದ ಹಿನ್ನೆಲೆಯಲ್ಲಿ ಯಕ್ಷಗಾನ ಕಲಾವಿದ ಪೂರ್ಣೇಶ್ ಆಚಾರ್ಯ ಅವರನ್ನು ಕಟೀಲು ಮೇಳದಿಂದ ವಜಾ ಮಾಡಬೇಕು ಎಂದು ಉಲ್ಲೇಖಿಸಿ ಚುನಾವಣಾ ಆಯೋಗ ನೋಟಿಸ್ ನೀಡಿತ್ತು. ಆದರೆ ಈ ವಿಚಾರದಲ್ಲಿ ಆಯೋಗಕ್ಕೆ ತಪ್ಪು ಮಾಹಿತಿ ಲಭಿಸಿತ್ತು ಎನ್ನಲಾಗಿದೆ.
ವೀಡಿಯೋದಲ್ಲಿ ಇರುವುದು ಕಾಸರಗೋಡು ಜಿಲ್ಲೆಯ ಮಾನ್ಯದಲ್ಲಿ ನಡೆದ ಯಕ್ಷಗಾನ ಪ್ರಸಂಗದ ತುಣುಕು. ಅದು ಕೇರಳಕ್ಕೆ ಸೇರಿಕೊಂಡಿರುವ ಕಾಸರಗೋಡು ಆಗಿರುವುದರಿಂದ ಅಲ್ಲಿ ಚುನಾವಣಾ ನೀತಿ ಸಂಹಿತೆಯೂ ಅನ್ವಯವಾಗುವುದಿಲ್ಲ. ವಾಸ್ತವವಾಗಿ ಏ. ೧ರಂದು ನಾನಿದ್ದ ಕಟೀಲು ಮೇಳದ ಪ್ರದರ್ಶನವು ಬೆಳ್ಳಾರೆಯ ಐವರ್ನಾಡಿನಲ್ಲಿತ್ತು ಎಂದು ಕಲಾವಿದ ಪೂರ್ಣೇಶ್ ಹೇಳಿದ್ದರು. ಜೊತೆಗೆ ಆಯೋಗಕ್ಕೆ ಪೂರಕ ದಾಖಲೆಗಳನ್ನೂ ಸಲ್ಲಿಸಿದ್ದರು. ದಾಖಲೆಗಳನ್ನು ಪರಿಶೀಲಿಸಿದ ಬಳಿಕ ಸತ್ಯಾಸತ್ಯತೆ ಮನಗಂಡು ನೋಟಿಸ್‌ನ್ನು ವಾಪಸ್ ಪಡೆಯಲಾಗಿದೆ ಎಂದು ಮೂಡುಬಿದಿರೆ ಕ್ಷೇತ್ರದ ಚುನಾವಣಾಧಿಕಾರಿ ಪ್ರಸನ್ನ ತಿಳಿಸಿದ್ದಾರೆ. ಇದರಿಂದಾಗಿ ಪೂರ್ಣೇಶ್ ಆಚಾರ್ಯರ ಮುಂದಿನ ಕಲಾ ಪ್ರದರ್ಶನಕ್ಕೆ ಯಾವುದೇ ಅಡಚಣೆ ಇಲ್ಲದಂತಾಗಿದೆ.

Vishwa News 24

Recent Posts

ಜನಿವಾರ, ಹಿಜಾಬ್, ಉಡುದಾರ, ರುದ್ರಾಕ್ಷಿ ಹಾಕಿಕೊಳ್ಳಬಹುದು ಹೊರತು ಕೇಸರಿ ಶಾಲಿಗೆ ಅವಕಾಶ ಇಲ್ಲ : ಸಿಎಂ ಸ್ಪಷ್ಟನೆ – vishwanews24

ಸಾಂಪ್ರದಾಯಿಕ ಧಾರ್ಮಿಕ ಸಂಕೇತಗಳನ್ನು ಧರಿಸಬಹುದು, ಹೊಸದಾಗಿ ಮಾಡುವಂತಿಲ್ಲ : ಸಿಎಂ ಸ್ಪಷ್ಟನೆ ಮೈಸೂರು : "ಪ್ರಾಥಮಿಕ ತರಗತಿಯಿಂದ 12ನೇ ತರಗತಿಯವರೆಗೆ…

46 minutes ago

ಮದ್ಯ ಖರೀದಿ, ಮಾರಾಟ ಮಾಡಲು 21 ವರ್ಷ ಕಡ್ಡಾಯ : ತಮಿಳುನಾಡು ಸರ್ಕಾರ ಆದೇಶ – vishwanews24

ಮದ್ಯ ಖರೀದಿ, ಮಾರಾಟ ಮಾಡಲು 21 ವರ್ಷ ಕಡ್ಡಾಯ :  ಸಿಎಂ ವಿಜಯ್ ಸರ್ಕಾರ ಆದೇಶ ಚೆನ್ನೈ: ಇನ್ನು ಮುಂದೆ…

55 minutes ago

ಇಂದಿರಾ ಗಾಂಧಿ ನಂತರ ಯಾರಾದ್ರೂ ಮಾಸ್ ಲೀಡರ್ ಇದ್ರೆ, ಅದು ಮೋದಿ ಮಾತ್ರ: ಕೆ.ಎನ್‌ ರಾಜಣ್ಣ – vishwanews24

ಇಂದಿರಾ ಗಾಂಧಿ ನಂತರ ಯಾರಾದ್ರೂ ಮಾಸ್ ಲೀಡರ್ ಇದ್ರೆ, ಅದು ಮೋದಿ ಮಾತ್ರ: ಕೆ.ಎನ್‌ ರಾಜಣ್ಣ ನಾನು ಮೋದಿಯವರನ್ನು ಹೊಗಳುತ್ತಿಲ್ಲ.…

1 hour ago

ಸಕ್ಕರೆ ರಫ್ತಿಗೆ ಸೆ.30 ರವರೆಗೆ ಸಂಪೂರ್ಣ ನಿಷೇಧ ಹೇರಿದ ಸರ್ಕಾರ – vishwanews24

ಸಕ್ಕರೆ ರಫ್ತಿಗೆ ಸೆ.30 ರವರೆಗೆ ಸಂಪೂರ್ಣ ನಿಷೇಧ ಹೇರಿದ ಸರ್ಕಾರ ನವದೆಹಲಿ: ದೇಶೀಯ ಮಾರುಕಟ್ಟೆಯಲ್ಲಿ ಸಕ್ಕರೆ ಬೆಲೆಯನ್ನು ನಿಯಂತ್ರಿಸಲು ಮತ್ತು…

1 hour ago

ಹಿಜಬ್‌ಗೆ ಅವಕಾಶ :ಪ್ರಣಾಳಿಕೆಯಲ್ಲಿ ಸಮಾನತೆಯ ಮಾತು ಕೊಟ್ಟಿದ್ವಿ , ಯಾವುದೇ ಕಾರಣಕ್ಕೂ ಆದೇಶ ವಾಪಸ್ ಪಡೆಯಲ್ಲ : ಮಧು ಬಂಗಾರಪ್ಪ – vishwanews24

ಹಿಜಬ್ ಬಗ್ಗೆ ಮಾತಾಡುವ ಬಿಜೆಪಿಯವರು  ನೀಟ್ ಬಗ್ಗೆ ಮಾತಾಡಲಿ : ಮಧು ಬಂಗಾರಪ್ಪ ಆಕ್ರೋಶ ಬೆಂಗಳೂರು: ಹಿಜಬ್ ಬಗ್ಗೆ ಮಾತಾಡುವ…

1 hour ago

ಹಿಜಾಬ್‌ಗೆ ಅನುಮತಿ : ಸಾಮಾಜಿಕ ಸಾಮರಸ್ಯವನ್ನು ಕದಡುವುದೇ ಸಿದ್ದರಾಮಯ್ಯ ಸರ್ಕಾರದ ಕಸುಬಾಗಿ ಬಿಟ್ಟಿದೆ : ಸುನಿಲ್ ಕುಮಾರ್ ಆಕ್ರೋಶ – vishwanews24

ಶಿಕ್ಷಣ ಸಂಸ್ಥೆಗಳಲ್ಲಿ ಹಿಜಾಬ್ ಧರಿಸಲು ಅವಕಾಶ: ಕಾಂಗ್ರೆಸ್ ನ ಮುಸ್ಲಿಂ ಓಲೈಕೆ ನೀತಿ ಬಹಿರಂಗ : ಸುನಿಲ್ ಕುಮಾರ್ ಕಾರ್ಕಳ:…

1 hour ago