Featured

ಯಕ್ಷಗಾನ ಕಲಿಯಲು ವಾರಣಾಸಿ ಕ್ಷೇತ್ರದ ನಾಟಕ ಶಾಲೆಯ ವಿದ್ಯಾರ್ಥಿಗಳು ಕೃಷ್ಣ ನಗರಿ ಉಡುಪಿಗೆ  – vishwanews24

ಯಕ್ಷಗಾನ ಕಲಿಯಲು ಕೃಷ್ಣ ನಗರಿ ಉಡುಪಿಗೆ ಬಂದ ವಾರಣಾಸಿ ಕ್ಷೇತ್ರದ ನಾಟಕ ಶಾಲೆಯ ವಿದ್ಯಾರ್ಥಿಗಳು

ಉಡುಪಿ: ಭಾಷೆಯ ಗಡಿಗಳನ್ನು ದಾಟಿ ಯಕ್ಷಗಾನ ಬೆಳೆಯುತ್ತಿದೆ.  ವಾರಣಾಸಿ ಕ್ಷೇತ್ರದ ರಾಷ್ಟ್ರೀಯ ನಾಟಕ ಶಾಲೆಯ ವಿದ್ಯಾರ್ಥಿಗಳು, ಕೃಷ್ಣ ನಗರಿ ಉಡುಪಿಗೆ ಯಕ್ಷಗಾನ ಕಲಿಯಲು ಬಂದಿದ್ದಾರೆ. ಗುರು ಬನ್ನಂಜೆ ಸಂಜೀವ ಸುವರ್ಣರ ಮಾರ್ಗದರ್ಶನದಲ್ಲಿ ಹಿಂದಿ ಯಕ್ಷಗಾನದ ಶಿಬಿರ ಏರ್ಪಟ್ಟಿದೆ.

ಕನ್ನಡದ ಕಲೆ ಯಕ್ಷಗಾನಕ್ಕೆ ರಾಷ್ಟ್ರೀಯ ನಾಟಕ ಶಾಲೆಯ ವಿದ್ಯಾರ್ಥಿಗಳೇ ಮನಸೋತಿದ್ದಾರೆ. ಭವಿಷ್ಯದ ಚಲನಚಿತ್ರರಂಗ ಮತ್ತು ಟಿವಿ ಪರದೆಯನ್ನು ಅಲಂಕರಿಸದಿರುವ ಯುವ ಕಲಾವಿದರು 20 ದಿನಗಳಿಂದ ಯಕ್ಷಗಾನ ಅಭ್ಯಾಸ ಮಾಡುತ್ತಿದ್ದಾರೆ. ಗುರುಬನಂಜೆ ಸಂಜೀವ ಸುವರ್ಣ ಅವರು, ಸಾಂಪ್ರದಾಯಿಕ ಹೆಜ್ಜೆಗಾರಿಕೆಯನ್ನು‌ ಕಲಿಸುವುದರ ಜೊತೆಗೆ ಯಕ್ಷಗಾನ ಪ್ರದರ್ಶನಕ್ಕೆ ಈ ವಿದ್ಯಾರ್ಥಿಗಳನ್ನು ಸಜ್ಜುಗೊಳಿಸುತ್ತಿದ್ದಾರೆ.

ಪ್ರತಿದಿನ ಹನ್ನೆರಡು ಗಂಟೆಗೂ ಅಧಿಕ ಕಾಲ ವಿದ್ಯಾರ್ಥಿಗಳು ಬೆವರಿಳಿಸಿ ಯಕ್ಷಗಾನದ ಹಾಡುಗಳಿಗೆ ಹೆಜ್ಜೆ ಹಾಕುತ್ತಿದ್ದಾರೆ. ಇನ್ನು ಕೆಲವೇ ದಿನಗಳಲ್ಲಿ ಚಕ್ರವ್ಯೂಹ ಯಕ್ಷಗಾನ ಪ್ರದರ್ಶನವನ್ನು ನೀಡಲಿದ್ದಾರೆ. ರಾಷ್ಟ್ರೀಯ ನಾಟಕ ಶಾಲೆಯ ಕಲಿಕೆಯ ಭಾಗವಾಗಿ ಕಳೆದ ಹಲವಾರು ವರ್ಷಗಳಿಂದ ಯಕ್ಷಗಾನವನ್ನು ಒಂದು ಪಠ್ಯವಾಗಿ ಕಲಿಸಲಾಗುತ್ತದೆ.

ಇದು ಕನ್ನಡಿಗರಿಗೆ ಹೆಮ್ಮೆಯ ವಿಚಾರವಾಗಿದ್ದು, ದೇಶದ ನಾನಾ ಭಾಗಗಳ ಕಲಾವಿದರು ಅಪರೂಪದ ಕರಾವಳಿಯ ಕಲೆಯನ್ನು ಅಭ್ಯಸಿಸುವಂತಾಗಿದೆ. ಅದಮಾರು ಮಠದ ಆಶ್ರಯದಲ್ಲಿ ಈ ಶಿಬಿರ ಏರ್ಪಟ್ಟಿದ್ದು, ಗಾನನಾಟ್ಯ ಸಂಭಾಷಣೆಯ ಅಪರೂಪದ ಕಲೆ ದೇಶದ ಮೂಲೆ ಮೂಲೆಗಳಿಂದ ಕಲಾವಿದರನ್ನು ಆಕರ್ಷಿಸುತ್ತಿದೆ.

Vishwa News 24

Recent Posts

ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್‌ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ – vishwanews24

ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್‌ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…

15 hours ago

ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ – vishwanews24

ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು  :…

16 hours ago

ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ  – vishwanews24

ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…

16 hours ago

ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ – vishwanews24

ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…

16 hours ago

ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ – vishwanews24

ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್‌ಪೋರ್ಟ್…

17 hours ago

ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು – vishwanews24

ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್‌ಜೆಟ್ (Spice Jet) ವಿಮಾನದಲ್ಲಿ…

17 hours ago