ಉಡುಪಿ: ಭಾಷೆಯ ಗಡಿಗಳನ್ನು ದಾಟಿ ಯಕ್ಷಗಾನ ಬೆಳೆಯುತ್ತಿದೆ. ವಾರಣಾಸಿ ಕ್ಷೇತ್ರದ ರಾಷ್ಟ್ರೀಯ ನಾಟಕ ಶಾಲೆಯ ವಿದ್ಯಾರ್ಥಿಗಳು, ಕೃಷ್ಣ ನಗರಿ ಉಡುಪಿಗೆ ಯಕ್ಷಗಾನ ಕಲಿಯಲು ಬಂದಿದ್ದಾರೆ. ಗುರು ಬನ್ನಂಜೆ ಸಂಜೀವ ಸುವರ್ಣರ ಮಾರ್ಗದರ್ಶನದಲ್ಲಿ ಹಿಂದಿ ಯಕ್ಷಗಾನದ ಶಿಬಿರ ಏರ್ಪಟ್ಟಿದೆ.
ಕನ್ನಡದ ಕಲೆ ಯಕ್ಷಗಾನಕ್ಕೆ ರಾಷ್ಟ್ರೀಯ ನಾಟಕ ಶಾಲೆಯ ವಿದ್ಯಾರ್ಥಿಗಳೇ ಮನಸೋತಿದ್ದಾರೆ. ಭವಿಷ್ಯದ ಚಲನಚಿತ್ರರಂಗ ಮತ್ತು ಟಿವಿ ಪರದೆಯನ್ನು ಅಲಂಕರಿಸದಿರುವ ಯುವ ಕಲಾವಿದರು 20 ದಿನಗಳಿಂದ ಯಕ್ಷಗಾನ ಅಭ್ಯಾಸ ಮಾಡುತ್ತಿದ್ದಾರೆ. ಗುರುಬನಂಜೆ ಸಂಜೀವ ಸುವರ್ಣ ಅವರು, ಸಾಂಪ್ರದಾಯಿಕ ಹೆಜ್ಜೆಗಾರಿಕೆಯನ್ನು ಕಲಿಸುವುದರ ಜೊತೆಗೆ ಯಕ್ಷಗಾನ ಪ್ರದರ್ಶನಕ್ಕೆ ಈ ವಿದ್ಯಾರ್ಥಿಗಳನ್ನು ಸಜ್ಜುಗೊಳಿಸುತ್ತಿದ್ದಾರೆ.
ಪ್ರತಿದಿನ ಹನ್ನೆರಡು ಗಂಟೆಗೂ ಅಧಿಕ ಕಾಲ ವಿದ್ಯಾರ್ಥಿಗಳು ಬೆವರಿಳಿಸಿ ಯಕ್ಷಗಾನದ ಹಾಡುಗಳಿಗೆ ಹೆಜ್ಜೆ ಹಾಕುತ್ತಿದ್ದಾರೆ. ಇನ್ನು ಕೆಲವೇ ದಿನಗಳಲ್ಲಿ ಚಕ್ರವ್ಯೂಹ ಯಕ್ಷಗಾನ ಪ್ರದರ್ಶನವನ್ನು ನೀಡಲಿದ್ದಾರೆ. ರಾಷ್ಟ್ರೀಯ ನಾಟಕ ಶಾಲೆಯ ಕಲಿಕೆಯ ಭಾಗವಾಗಿ ಕಳೆದ ಹಲವಾರು ವರ್ಷಗಳಿಂದ ಯಕ್ಷಗಾನವನ್ನು ಒಂದು ಪಠ್ಯವಾಗಿ ಕಲಿಸಲಾಗುತ್ತದೆ.
ಇದು ಕನ್ನಡಿಗರಿಗೆ ಹೆಮ್ಮೆಯ ವಿಚಾರವಾಗಿದ್ದು, ದೇಶದ ನಾನಾ ಭಾಗಗಳ ಕಲಾವಿದರು ಅಪರೂಪದ ಕರಾವಳಿಯ ಕಲೆಯನ್ನು ಅಭ್ಯಸಿಸುವಂತಾಗಿದೆ. ಅದಮಾರು ಮಠದ ಆಶ್ರಯದಲ್ಲಿ ಈ ಶಿಬಿರ ಏರ್ಪಟ್ಟಿದ್ದು, ಗಾನನಾಟ್ಯ ಸಂಭಾಷಣೆಯ ಅಪರೂಪದ ಕಲೆ ದೇಶದ ಮೂಲೆ ಮೂಲೆಗಳಿಂದ ಕಲಾವಿದರನ್ನು ಆಕರ್ಷಿಸುತ್ತಿದೆ.
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ಹಫೀಝ್ ರೆಹಮಾನ್ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…