Featured

ಯಕ್ಷಗಾನ ನಡೆಯುತ್ತಿದ್ದಾಗ ರಂಗಸ್ಥಳದಲ್ಲೇ ಹೃದಯಾಘಾತ – ಕಟೀಲು ಮೇಳದ ಕಲಾವಿದ ಗುರುವಪ್ಪ ಬಾಯಾರು ನಿಧನ -Vishwanews24

ಯಕ್ಷಗಾನ ನಡೆಯುತ್ತಿದ್ದಾಗ ರಂಗಸ್ಥಳದಲ್ಲೇ ಹೃದಯಾಘಾತ – ಕಟೀಲು ಮೇಳದ ಕಲಾವಿದ ಗುರುವಪ್ಪ ಬಾಯಾರು ನಿಧನ
ಮoಗಳೂರು: ಯಕ್ಷಗಾನ ನಡೆಯುತ್ತಿದ್ದಾಗ ರಂಗಸ್ಥಳದಲ್ಲೇ ಹೃದಯಾಘಾತವಾಗಿ ಕಟೀಲು ಮೇಳದ ಕಲಾವಿದರೊಬ್ಬರು ನಿಧನರಾಗಿದ್ದಾರೆ.

ಕಟೀಲು ಶ್ರೀ ದುರ್ಗಾಪರಮೇಶ್ವರಿ ಪ್ರಸಾದಿತ ದಶಾವತಾರ ಯಕ್ಷಗಾನ ಮಂಡಳಿಯ ನಾಲ್ಕನೇ‌ ಮೇಳದ ಗುರುವಪ್ಪ ಬಾಯಾರು (58)ಮೃತ ಕಲಾವಿದ.

ಕಟೀಲಿನ ಕ್ಷೇತ್ರದ ಸರಸ್ವತೀ ಸದನದಲ್ಲಿ ಗುರುವಾರ ತ್ರಿಜನ್ಮ ಮೋಕ್ಷ ಯಕ್ಷಗಾನ ನಡೆಯುತ್ತಿತ್ತು. ಈ ಸಂದರ್ಭ ಶಿಶುಪಾಲನ ಪಾತ್ರಧಾರಿಯಾಗಿದ್ದ ಗುರುವಪ್ಪ ಬಾಯರು(Guruvappa Bayaru) ರಂಗಸ್ಥಳದಲ್ಲೇ ಇದ್ದರು. ಇನ್ನೊಂದು ಪಾತ್ರಧಾರಿ ಕುಣಿಯುತ್ತಿದ್ದಾಗ ಅಲ್ಲೇ ಇದ್ದ ಗುರುವಪ್ಪ ಬಾಯಾರು ಅವರಿಗೆ ಹೃದಯಾಘಾತವಾಗಿ ರಂಗಸ್ಥಳದಿಂದ ಕೆಳಗೆ ಕುಸಿದು ಬಿದ್ದಿದ್ದಾರೆ.

ತಕ್ಷಣ ಅವರನ್ನು ಸ್ಥಳೀಯ ಖಾಸಗಿ ಅಸ್ಪತ್ರೆಯಲ್ಲಿ ಚಿಕಿತ್ಸೆ ನೀಡಿ ಬಳಿಕ ಮಂಗಳೂರಿನ ಅಸ್ಪತ್ರೆಗೆ ದಾಖಲಿಸಿದ್ದರೂ ಚಿಕಿತ್ಸೆ ಫಲಕಾರಿಯಾಗದೇ ನಿಧನರಾಗಿದ್ದಾರೆ. ʼತ್ರಿಜನ್ಮ ಮೋಕ್ಷʼ ಯಕ್ಷಗಾನ ಪ್ರದರ್ಶನದಲ್ಲಿ ಶಿಶುಪಾಲನ ಪಾತ್ರ ನಿರ್ವಹಣೆ ಮಾಡುತ್ತಿದ್ದ ಗುರುವಪ್ಪ ಬಾಯಾರು ರಂಗದಲ್ಲೇ ಮೋಕ್ಷ ಪಡೆದಿದ್ದಾರೆ.

Vishwa News 24

Recent Posts

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ -vishwanews24

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…

1 day ago

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ -vishwanews24

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…

1 day ago

ಉಪ್ಪೂರು : ವಯೋವಂದನ ಆತಿಥ್ಯ ಗೃಹ “ಸೈಟ್ ಆಫೀಸ್” ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ -vishwanews24

ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…

3 days ago

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

4 days ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

4 days ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

4 days ago