ಯಕ್ಷಗಾನ ಹಿರಿಯ ಕಲಾವಿದ ಕುಂಬ್ಳೆ ಸುಂದರ್ ರಾವ್ ನಿಧನ – Vishwanews24

Featured, ದಕ್ಷಿಣ ಕನ್ನಡ

ಯಕ್ಷಗಾನ ಹಿರಿಯ ಕಲಾವಿದ ಕುಂಬ್ಳೆ ಸುಂದರ್ ರಾವ್ ನಿಧನ

ಮಂಗಳೂರು: ಯಕ್ಷಗಾನದ ಹಿರಿಯ ಕಲಾವಿದ ಮಾಜಿ ಶಾಸಕ ಕುಂಬ್ಳೆ ಸುಂದರ್ ರಾವ್ ಇಂದು ನಿಧನರಾಗಿದ್ದಾರೆ. ಅವರಿಗೆ 88 ವರ್ಷ ವಯಸ್ಸಾಗಿತ್ತು,

ಮಂಗಳೂರಿನ ಪಂಪ್​ವೆಲ್ ಸ್ವಗೃಹದಲ್ಲಿ ಕುಂಬ್ಳೆ ಸುಂದರ್ ರಾವ್ ನಿಧನರಾಗಿದ್ದು, ನಾಳೆ ಅಂತ್ಯಕ್ರಿಯೆ ನಡೆಯಲಿದೆ ಎಂದು ಕುಟುಂಬದ ಆಪ್ತರು ಮಾಹಿತಿ ನೀಡಿದ್ದಾರೆ. ಸ್ವಗೃಹದಲ್ಲಿ ಇಂದು ಸಾರ್ವಜನಿಕರಿಗೆ ಅಂತಿಮ ದರ್ಶನಕ್ಕೆ ವ್ಯವಸ್ಥೆ ಕಲ್ಪಿಸಲು ಕುಟುಂಬಸ್ಥರು ತೀರ್ಮಾನಿಸಿದ್ದಾರೆ.

ಇಹಲೋಕ ತ್ಯಜಿಸಿದ ಕುಂಬ್ಳೆ ಸುಂದರ್ ರಾವ್ – ಯಕ್ಷಗಾನ ಕ್ಷೇತ್ರದ ದಿಗ್ಗಜ, ಮಾಜಿ ಶಾಸಕ ಇನ್ನು ನೆನಪು ಮಾತ್ರ

ಕಾಯರ್ಕಾಡಿ ಕುಂಞಕಣ್ಣ ಮತ್ತು ಕಲ್ಯಾಣಿ ದಂಪತಿ ಸುಪುತ್ರರಾಗಿ 1934ನೇ ಮಾರ್ಚ್ 20 ರಲ್ಲಿ ಕೇರಳದ ಕಾಸರಗೋಡು ಜಿಲ್ಲೆಯ ಕುಂಬಳೆಯಲ್ಲಿ ಜನಿಸಿದ ಕುಂಬಳೆ ಸುಂದರ್ ರಾವ್ ಅವರು 1994 ರಿಂದ 1999ರವರೆಗೆ ಬಿಜೆಪಿಯಿಂದ ಸುರತ್ಕಲ್ ಕ್ಷೇತ್ರದ ಶಾಸಕರಾಗಿ ಸೇವೆ ಸಲ್ಲಿಸಿದ್ದಾರೆ. ಸುರತ್ಕಲ್, ಧರ್ಮಸ್ಥಳ ಮತ್ತು ಇರಾ ಯಕ್ಷಗಾನ ಮೇಳಗಳಲ್ಲಿ ಕಲಾವಿದರಾಗಿ ಇವರು ಕಾರ್ಯ ನಿರ್ವಹಿಸಿದ್ದಾರೆ. ಕರ್ನಾಟಕ ರಾಜ್ಯ ಯಕ್ಷಗಾನ ಅಕಾಡೆಮಿಯ ಅಧ್ಯಕ್ಷರಾಗಿಯೂ ಸೇವೆ‌ ಸಲ್ಲಿಸಿದ್ದಾರೆ.

ಸ್ನೇಹಿತರೆ ಶತ್ರುಗಳಾಗುತ್ತಾರೆ : ನೋಡಿ ಇಂದಿನ ದಿನ ಭವಿಷ್ಯ -Vishwanews24 

Leave a Reply