Featured

ಯಡಿಯೂರಪ್ಪ ಬಗ್ಗೆ ಮಾತನಾಡುವ ನೈತಿಕತೆ ದಿನೇಶ್ ಗುಂಡೂರಾವ್ ಗೆ ಇಲ್ಲ : ಅನರ್ಹ ಶಾಸಕ ಡಾ.ಕೆ.ಸುಧಾಕರ್ -Vishwanews24

ಚಿಕ್ಕಬಳ್ಳಾಪುರ: ರಾಜ್ಯದ ಪ್ರದೇಶ ಕಾಂಗ್ರೆಸ್ ಅಧ್ಯಕ್ಷರಾಗಿ ದಿನೇಶ್ ಗುಂಡೂರಾವ್ ನೇಮಕವಾದ ಬಳಿಕವೇ ರಾಜ್ಯದಲ್ಲಿ ಕಾಂಗ್ರೆಸ್ ಸತ್ತು ಹೋಯಿತು ಎಂದು ಚಿಕ್ಕಬಳ್ಳಾಪುರ ಅನರ್ಹ ಶಾಸಕ ಡಾ.ಕೆ.ಸುಧಾಕರ್ ತಿಳಿಸಿದರು.

ಚಿಕ್ಕಬಳ್ಳಾಪುರ ತಾಲೂಕಿನ ಮಂಡಿಕಲ್ ಗ್ರಾಮದಲ್ಲಿ ನೂತನ ಐಟಿಐ ಕಾಲೇಜು ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದರು.

ರಾಜ್ಯದಲ್ಲಿ ಬಿಜೆಪಿ ಸರ್ಕಾರ ಸತ್ತು ಹೋಗಿದೆ. ನೆರೆ ಪರಿಹಾರ ತರುವಲ್ಲಿ ವಿಫಲವಾಗಿದೆಯೆಂಬ ದಿನೇಶ್ ಗುಂಡೂರಾವ್ ಆರೋಪಕ್ಕೆ ಪ್ರತಿಕ್ರಿಯೆ ನೀಡಿದ ಅವರು, ದಿನೇಶ್ ಗುಂಡೂರಾವ್ ಪಕ್ಷದ ಅಧ್ಯಕ್ಷರಾದ ಮೇಲೆಯೆ ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಈ ಗತಿ ಬಂದಿದೆ ಎಂದರು.

ಯಾವುದೇ ಸರ್ಕಾರವನ್ನು ಎರಡು ತಿಂಗಳಲ್ಲಿ ಮೌಲ್ಯಮಾಪನ ಮಾಡಲು ಸಾಧ್ಯವಿಲ್ಲ, ಐದು ವರ್ಷ ಅಧಿಕಾರ ನಡೆಸಿದ ಕಾಂಗ್ರೆಸ್ ಪಕ್ಷ ಕಳೆದ ವಿಧಾನ ಸಭಾ ಚುನಾವಣೆಯಲ್ಲಿ 127 ಇದ್ದ  ಶಾಸಕರ ಸಂಖ್ಯೆ ಈಗ 78 ಕ್ಕೆ ಬಂದಿದೆ. ದಿನೇಶ್ ಗುಂಡೂರಾವ್ ಪಕ್ಷದ ಅಧ್ಯಕ್ಷರಾದ ಮೇಲೆ ಲೋಕಸಭಾ ಚುನಾವಣೆಯಲ್ಲಿ 1 ಸ್ಥಾನಕ್ಕೆ ಬಂದಿದೆ ಎಂದರು.

ದಿನೇಶ್ ಗುಂಡೂರಾವ್ ಮೊದಲು ತಮ್ಮ ಯೋಗ್ಯತೆಯನ್ನು ಅರಿಯಲಿ. ಅಧ್ಯಕ್ಷರಾಗಿ ಹೇಗೆ ಇರಬೇಕು. ಹೇಗೆ ಕಾರ್ಯ ನಿರ್ವಹಿಸಬೇಕು ಎಂಬುದನ್ನು ತಿಳದುಕೊಳ್ಳಿ. ಅವರಿಂದಲೇ ಪಕ್ಷ ರಾಜ್ಯದಲ್ಲಿ ಆಧೋಗತಿಗೆ ಇಳಿಯಿತು. ಯಡಿಯೂರಪ್ಪ ಬಗ್ಗೆ ಮಾತನಾಡುವ ನೈತಿಕತೆ ಅವರಿಗೆ ಇಲ್ಲ ಎಂದು ದಿನೇಶ್ ಗುಂಡೂರಾವ್ ವಿರುದ್ದ ಅನರ್ಹ ಶಾಸಕ ಸುಧಾಕರ್ ತೀವ್ರ ವಾಗ್ದಾಳಿ ನಡೆಸಿದರು. ಸಿಎಂ ಬಿ.ಎಸ್. ಯಡಿಯೂರಪ್ಪ ನೇತ್ರತ್ವದಲ್ಲಿ ಬಿಜೆಪಿ ಸರ್ಕಾರ ಉತ್ತಮವಾಗಿ ಕೆಲಸ ಮಾಡುತ್ತಿದೆ ಎಂದರು

Vishwa News 24

Recent Posts

ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್‌ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ – vishwanews24

ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್‌ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…

6 hours ago

ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ – vishwanews24

ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು  :…

6 hours ago

ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ  – vishwanews24

ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…

6 hours ago

ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ – vishwanews24

ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…

7 hours ago

ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ – vishwanews24

ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್‌ಪೋರ್ಟ್…

7 hours ago

ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು – vishwanews24

ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್‌ಜೆಟ್ (Spice Jet) ವಿಮಾನದಲ್ಲಿ…

7 hours ago