Featured

ಯಡಿಯೂರಪ್ಪನವರು ಮುಖ್ಯಮಂತ್ರಿಗಳಾಗಿದ್ದಾಗ ದಲಿತರಿಗೆ ಪೊಳ್ಳು ಭರವಸೆ ಕೊಡಲಿಲ್ಲ : ಸಿದ್ದರಾಮಯ್ಯ ವಿರುದ್ಧ ವಿಜಯೇಂದ್ರ ಕಿಡಿ – vishwanews24

ಯಡಿಯೂರಪ್ಪನವರು ಮುಖ್ಯಮಂತ್ರಿಗಳಾಗಿದ್ದಾಗ ದಲಿತರಿಗೆ ಪೊಳ್ಳು ಭರವಸೆ ಕೊಡಲಿಲ್ಲ; ಸಿದ್ದರಾಮಯ್ಯ ವಿರುದ್ಧ ವಿಜಯೇಂದ್ರ ಕಿಡಿ

ಬೆಂಗಳೂರು: ಸಿದ್ದರಾಮಯ್ಯನವರ ದಲಿತಪರ ಕಾಳಜಿ ಎಲ್ಲಿ ಹೋಗಿದೆ? ವಿಪಕ್ಷದಲ್ಲಿದ್ದಾಗ ಇದ್ದ ದಲಿತಪರ ಕಾಳಜಿ ಅಧಿಕಾರಕ್ಕೆ ಬಂದ ಬಳಿಕ ಮರೆತುಹೋಯಿತೇ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಶಾಸಕ ಬಿ.ವೈ. ವಿಜಯೇಂದ್ರ ಅವರು ಪ್ರಶ್ನಿಸಿದ್ದಾರೆ.

ಪರಿಶಿಷ್ಟರ ಹಣ ದುರ್ಬಳಕೆ ವಿರೋಧಿ ಹೋರಾಟ ಸಮಿತಿ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಬೃಹತ್ ಪ್ರತಿಭಟನೆಯು ಇಂದು ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ನಡೆಯಿತು.

ಈ ಪ್ರತಿಭಟನೆಯಲ್ಲಿ ಭಾಗವಹಿಸಿ ಮಾತನಾಡಿದ ವಿಜಯೇಂದ್ರ ಅವರು, ಅಹಿಂದ ಹೆಸರಿನೊಂದಿಗೆ ರಾಜ್ಯದಲ್ಲಿ ಪರಿಶಿಷ್ಟ ಜಾತಿ, ಪಂಗಡಗಳ ಕಣ್ಣೀರು ಒರೆಸುವುದಾಗಿ ಹೇಳಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಅಧಿಕಾರಕ್ಕೆ ಬಂದವರು; ಅವರು ಈ ಕರಾಳದಿನಕ್ಕೆ ಕಾರಣರು ಎಂದು ಟೀಕಿಸಿದರು.

ಮುಖ್ಯಮಂತ್ರಿಗಳು ಅಸಹಾಯಕರಾಗಿದ್ದಾರಾ? ಅಥವಾ…ಸಿದ್ದರಾಮಯ್ಯನವರು ಅನುಭವಿ ಮುಖ್ಯಮಂತ್ರಿ; ಅವರು ಅಸಮರ್ಥ ಎನ್ನುವುದಿಲ್ಲ. ಮುಖ್ಯಮಂತ್ರಿಗಳು ಅಸಹಾಯಕರಾಗಿದ್ದಾರಾ? ಅಥವಾ ದಲಿತರ ಮೇಲಿನ ಕಾಳಜಿ ಮರೆತುಹೋಗಿದೆಯೇ ಎಂದು ಬಿ.ವೈ. ವಿಜಯೇಂದ್ರ ಅವರು ಕೇಳಿದರು.
ದಲಿತ ಸಮುದಾಯಕ್ಕೆ ಶಕ್ತಿ ಕೊಡಬೇಕಾದ ಹಣದ ದುರ್ಬಳಕೆ ಮಾಡಿದ್ದೀರಲ್ಲ? ಇದು ನ್ಯಾಯವೇ ಸಿದ್ದರಾಮಯ್ಯನವರೇ? ಎಂದು ಪ್ರಶ್ನೆಯನ್ನು ಮುಂದಿಟ್ಟರು.

ಸಿದ್ದರಾಮಯ್ಯನವರೇ, ಹಿಂದೆ ಬಿಜೆಪಿ ಸರಕಾರ ಇದ್ದಾಗ, ಯಡಿಯೂರಪ್ಪನವರು ಮುಖ್ಯಮಂತ್ರಿಗಳಾಗಿದ್ದಾಗ ನಿಮ್ಮಂತೆ ಪೊಳ್ಳು ಭರವಸೆ ಕೊಡಲಿಲ್ಲ; ನಮ್ಮ ಸರಕಾರಗಳು ದಲಿತರ ಕಾಲೊನಿಗಳಿಗೆ ಮೂಲಸೌಕರ್ಯಗಳನ್ನು ಕೊಟ್ಟು ಕಾಂಕ್ರೀಟ್ ರಸ್ತೆಗಳನ್ನು ಮಾಡಿದ್ದವು. ಸಿದ್ದರಾಮಯ್ಯನವರೇ ನಿಮ್ಮ ದಲಿತ ಕಾಳಜಿ ಎಲ್ಲಿ ಹೋಗಿದೆ ಎಂದು ಪ್ರಶ್ನಿಸಿದರು.

ಸಿದ್ದರಾಮಯ್ಯನವರೇ, ಯಾವುದೇ ಕಾರಣಕ್ಕೂ ಎಸ್‍ಇಪಿ, ಟಿಎಸ್‍ಪಿ ಹಣವನ್ನು ದುರ್ಬಳಕೆ ಮಾಡುವ ದುಸ್ಸಾಹಸಕ್ಕೆ ಕೈ ಹಾಕದಿರಿ ಎಂದು ಮನವಿ ಮಾಡಿದರು.

Vishwa News 24

Recent Posts

ಪಡುಬಿದ್ರಿ : ವ್ಯಕ್ತಿ ನಾಪತ್ತೆ ; ಪತ್ತೆಗೆ ಮನವಿ -vishwanews24

ಪಡುಬಿದ್ರಿ : ವ್ಯಕ್ತಿ ನಾಪತ್ತೆ ; ಪತ್ತೆಗೆ ಮನವಿ ಪಡುಬಿದ್ರಿ : ಕಂಚಿನಡ್ಕದ ನಿವಾಸಿ ರವೀಂದ್ರ (35) ಪಡುಬಿದ್ರಿ ಪೇಟೆಗೆ…

1 day ago

ಪಡುಬಿದ್ರಿ ಪೊಲೀಸರ ವಿಶೇಷ ಕಾರ್ಯಾಚರಣೆ :ರಸ್ತೆ ಅಪಘಾತ ಪ್ರಕರಣದಲ್ಲಿ 23 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಲಾರಿ ಚಾಲಕ ಅರೆಸ್ಟ್ -vishwanews24

ಪಡುಬಿದ್ರಿ ಪೊಲೀಸರ ವಿಶೇಷ ಕಾರ್ಯಾಚರಣೆ :ರಸ್ತೆ ಅಪಘಾತ ಪ್ರಕರಣದಲ್ಲಿ 23 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಲಾರಿ ಚಾಲಕ ಅರೆಸ್ಟ್ ಉಡುಪಿ: 2002ರಲ್ಲಿ…

2 days ago

ಬೆಂಗಳೂರು : ಸ್ವಾಮೀಜಿ ವೇಷದಲ್ಲಿ ಬಂದು ಕೈಚಳಕ; ಮನೆಯಲ್ಲಿ ದೋಷ, ಸಾವಿನ ಕಂಟಕ ಎಂದು ಹೆದರಿಸಿ ಚಿನ್ನಾಭರಣ ದೋಚಿ ಪರಾರಿ -vishwanews24

ಬೆಂಗಳೂರು : ಸ್ವಾಮೀಜಿ ವೇಷದಲ್ಲಿ ಬಂದು ಕೈಚಳಕ; ಮನೆಯಲ್ಲಿ ದೋಷ, ಸಾವಿನ ಕಂಟಕ ಎಂದು ಹೆದರಿಸಿ ಚಿನ್ನಾಭರಣ ದೋಚಿ ಪರಾರಿ…

2 days ago

ಬೆಳ್ತಂಗಡಿ: ಅಪ್ರಾಪ್ತ ಬಾಲಕಿ ಅತ್ಯಾಚಾರ ಪ್ರಕರಣ ; ಆರೋಪಿ ಅರೆಸ್ಟ್ -vishwanews24

ಬೆಳ್ತಂಗಡಿ: ಅಪ್ರಾಪ್ತ ಬಾಲಕಿ ಗರ್ಭಿಣಿ ಪ್ರಕರಣ ; ಆರೋಪಿ ಅರೆಸ್ಟ್ ಬೆಳ್ತಂಗಡಿ : ಬಾಲಕಿಯನ್ನು ಪುಸಲಾಯಿಸಿ ಅತ್ಯಾಚಾರ ಮಾಡಿ ಬಾಲಕಿ…

2 days ago

ಮಂತ್ರಾಲಯ ಬಳಿ ಅಪಘಾತ: ಮಂಗಳೂರಿನ ಹಾಪ್‌ಕಾಮ್ಸ್ ನ ಪ್ರಧಾನ ವ್ಯವಸ್ಥಾಪಕ ರವಿ ಶೆಟ್ಟಿ ನಿಧನ -vishwanews24

ಮಂತ್ರಾಲಯ ಬಳಿ ಅಪಘಾತ: ಮಂಗಳೂರಿನ ಹಾಪ್‌ಕಾಮ್ಸ್ ನ ಪ್ರಧಾನ ವ್ಯವಸ್ಥಾಪಕ ರವಿ ಶೆಟ್ಟಿ ನಿಧನ ಕರ್ನೂಲು: ಕರ್ನೂಲು ಜಿಲ್ಲೆಯ ಮಂತ್ರಾಲಯದ…

2 days ago

ಉಡುಪಿ ಬಡಗುಬೆಟ್ಟು ಕಂಬಳಕ್ಕೆ ತಡೆ: ಆದೇಶ ತಕ್ಷಣ ಹಿಂಪಡೆಯಲು ಶಾಸಕ ಗುರ್ಮೆ ಆಗ್ರಹ -Vishwanews24

ಉಡುಪಿ ಬಡಗುಬೆಟ್ಟು ಕಂಬಳಕ್ಕೆ ತಡೆ: ಆದೇಶ ತಕ್ಷಣ ಹಿಂಪಡೆಯಲು ಶಾಸಕ ಗುರ್ಮೆ ಆಗ್ರಹ ಉಡುಪಿ: ಉಡುಪಿ ಬಡಗುಬೆಟ್ಟು ಕೋಟಿ–ಚೆನ್ನಯ ಕಂಬಳಕ್ಕೆ…

2 days ago