ಬೆಂಗಳೂರು: ಯಡಿಯೂರಪ್ಪ ಅವರು ಹಗಲುರಾತ್ರಿ ಕೋವಿಡ್ ನಿಯಂತ್ರಣಕ್ಕಾಗಿ ಶ್ರಮಿಸುತ್ತಿದ್ದಾರೆ. ಆಸ್ಪತ್ರೆಗಳಿಗೆ ಭೇಟಿ ನೀಡಿ ಪರಿಸ್ಥಿತಿ ಅವಲೋಕಿಸುವ ಜತೆಗೆ ನಿತ್ಯ ನಾಲ್ಕೈದು ಸಭೆ ಮಾಡಿ ಜನರ ನೋವಿಗೆ ಸ್ಪಂದಿಸುತ್ತಿದ್ದಾರೆ. ಅನ್ಯ ರಾಜ್ಯಗಳಲ್ಲಿ ಖಾಸಗಿ ಆಸ್ಪತ್ರೆಗಳಲ್ಲಿ ಕೋವಿಡ್ ಚಿಕಿತ್ಸೆ ಜನರೇ ಹಣ ಪಾವತಿಸಬೇಕು.
ಆದರೆ ನಮ್ಮ ಸಿಎಂ ಬಿಯು ಸಂಖ್ಯೆ ಮೂಲಕ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದವರಿಗೆ ಸರಕಾರದಿಂದಲೇ ಹಣ ಭರಿಸುವ ನಿರ್ಧಾರ ಕೈಗೊಂಡಿದ್ದಾರೆ. ಜತೆಗೆ ಎರಡು ಪರಿಹಾರ ಪ್ಯಾಕೇಜ್ ಘೋಷಿಸಿದ್ದಾರೆ. ಇಷ್ಟಾದರೂ ಪದೇಪದೆ ನಾಯಕತ್ವದ ಬಗ್ಗೆ ಪ್ರಸ್ತಾಪಿಸುತ್ತಿರುವುದಕ್ಕೆ ಅವರ ಮನಸ್ಸಿಗೆ ನೋವಾಗಿರಬಹುದು ಎಂದು ಸಚಿವ ಆರ್. ಅಶೋಕ್ ಅಭಿಪ್ರಾಯಪಟ್ಟಿದ್ದಾರೆ.
”ಯಡಿಯೂರಪ್ಪ ಜತೆ 40 ವರ್ಷ ಕೆಲಸ ಮಾಡಿದ್ದೇನೆ. ಅವರ ನಾಯಕತ್ವದಲ್ಲಿ ಮುಂದುವರಿಯುತ್ತೇವೆ. ಮುಂದೇನಿದ್ದರೂ ಪಕ್ಷದ ವರ್ಚಸ್ಸು ಹೆಚ್ಚಿಸುವ ನಿಟ್ಟಿನಲ್ಲಿ ಕಾರ್ಯಪ್ರವೃತ್ತರಾಗಬೇಕಿದ್ದು, ಈ ಗೊಂದಲಗಳಿಗೆ ಇತಿಶ್ರೀ ಹಾಡಬೇಕಿದೆ,” ಎಂದವರು ಹೇಳಿದ್ದಾರೆ.
ಯಡಿಯೂರಪ್ಪ ಸಮರ್ಥ, ಗಟ್ಟಿ ನಾಯಕ. ಅವರು ಆಲದ ಮರದಂತೆ ಎಂಬ ನಂಬಿಕೆಯಿಂದ ಅನ್ಯ ಪಕ್ಷಗಳ 17 ಮಂದಿ ಬಿಜೆಪಿಗೆ ಬಂದಿದ್ದಾರೆ. ನುಗ್ಗೆ ಮರವಾಗಿದ್ದರೆ ಯಾರೂ ಬರುತ್ತಿರಲಿಲ್ಲ. ನಮ್ಮದು ಪ್ರಜಾಪ್ರಭುತ್ವವಿರುವ ಪಕ್ಷ. ಅನಗತ್ಯ ಹೇಳಿಕೆ ನೀಡುವವರ ವಿರುದ್ಧ ಪಕ್ಷ ಸೂಕ್ತ ಕ್ರಮ ಕೈಗೊಳ್ಳುತ್ತದೆ,” ಎಂದಿದ್ದಾರೆ.
ಅಯೋಧ್ಯೆ ರಾಮಮಂದಿರ ಹುಂಡಿ ಹಗರಣ : ಎಲ್ಲಾ ಹಗರಣಗಳ ಸತ್ಯಾಂಶ ಹೊರಗೆ ಬರಬೇಕು : ವಿನಯಕುಮಾರ್ ಸೊರಕೆ ಆಗ್ರಹ ಉಡುಪಿ:…
ಉಡುಪಿ ಜಿಲ್ಲೆಯಾದ್ಯಂತ ಎಎನ್ಪಿಆರ್ ಕ್ಯಾಮೆರಾ ಅಳವಡಿಕೆ: ಸಂಚಾರ ನಿಯಮ ಉಲ್ಲಂಘನೆ ಪ್ರಕರಣಗಳಲ್ಲಿ ಶೇ. 40-70ರಷ್ಟು ಇಳಿಕೆ ಉಡುಪಿ: ಸ್ವಯಂ ಚಾಲಿತ…
ಹೆಬ್ರಿ: ಕೂಡ್ಲು ಫಾಲ್ಸ್ ಪ್ರವೇಶಕ್ಕೆ ಅರಣ್ಯ ಇಲಾಖೆಯಿಂದ ತಾತ್ಕಾಲಿಕ ನಿಷೇಧ ಹೆಬ್ರಿ: ಪುವಾಸಿ ತಾಣವಾದ ಕೂಡು ಫಾಲ್ಸ್ ಪುವೇಶಕ್ಕೆ ಅರಣ್ಯ…
ಉಡುಪಿ : ವ್ಯಕ್ತಿ ನಾಪತ್ತೆ ಉಡುಪಿ : ಹೆಬ್ರಿ ಪೊಲೀಸ್ ಠಾಣಾ ವ್ಯಾಪ್ತಿಯ ನಿವಾಸಿ ಕುಶಾಲ್ ಶೆಟ್ಟಿ (55) ಎಂಬ…
ಸ್ಥಳ ಮಹಜರು ವೇಳೆ ತಪ್ಪಿಸಿಕೊಳ್ಳಲು ಯತ್ನ : ಅತ್ಯಾಚಾರ , ಕೊಲೆ ಪ್ರಕರಣದ ಆರೋಪಿ ಎನ್ಕೌಂಟರ್ನಲ್ಲಿ ಹತ್ಯೆ ಕೊಲ್ಕತ್ತಾ: ಪಶ್ಚಿಮ…
ಉಡುಪಿ : ಜು. 10 ರಂದು ನೇರ ಸಂದರ್ಶನ ಉಡುಪಿ : ಉಡುಪಿಯ ವಿ.ಪಿ ನಗರದ ಸುಧಾ ಫರ್ನೀರ್ಸ್ ಬಿಲ್ಡಿಂಗ್s…