ಬೆಂಗಳೂರು: ನೂತನ ಸಿಎಂ ಆಗಿ ಆಯ್ಕೆಯಾದ ಬಳಿಕ ಬಸವರಾಜ್ ಬೊಮ್ಮಾಯಿ ಮಾಧ್ಯಮಕ್ಕೆ ಮೊದಲ ಪ್ರತಿಕ್ರಿಯೆ ನೀಡಿದ್ದಾರೆ. ಜನರ ಸೇವೆಗೆ ನಾನು ಬದ್ಧವಾಗಿದ್ದೇನೆ ಎಂದಿದ್ದಾರೆ.
ಶಾಸಕರು ನನ್ನ ಮೇಲೆ ವಿಶ್ವಾಸವಿಟ್ಟು ನನ್ನನ್ನು ಆಯ್ಕೆ ಮಾಡಿದ್ದಾರೆ. ಶಾಸಕರು ನನ್ನ ಮೇಲೆ ಇಟ್ಟಿರುವ ವಿಶ್ವಾಸದಂತೆ ಕೆಲಸ ಮಾಡುತ್ತೇನೆ. ಹಣಕಾಸಿನ ಬಿಕ್ಕಟ್ಟು ಸೇರಿಂದ ಸದ್ಯ ರಾಜ್ಯ ಎದುರಿಸುತ್ತಿರುವ ಸವಾಲುಗಳನ್ನು ಸಮರ್ಪಕವಾಗಿ ಎದುರಿಸುತ್ತೇವೆ. ರೈತರು, ಬಡವರು, ಸಂಕಷ್ಟದಲ್ಲಿರುವವರ ಸಮಸ್ಯೆ ಪರಿಹಾರಕ್ಕೆ ಪ್ರಾಮಾಣಿಕ ಪ್ರಯತ್ನ ನಡೆಸುತ್ತೇನೆ.
ಶಾಸಕಾಂಗ ಸಭೆಯ ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದ ಬಸವರಾಜ ಬೊಮ್ಮಾಯಿ, ನಾನು ಎಲ್ಲರನ್ನು ಒಗ್ಗೂಡಿಸಿಕೊಂಡು, ವಿಶ್ವಾಸಕ್ಕೆ ತೆಗೆದುಕೊಂಡು ಹೋಗುತ್ತೇನೆ. ಯಡಿಯೂರಪ್ಪನವರ ಮಾರ್ಗದರ್ಶನದಲ್ಲಿ ಜನಪರ ಆಡಳಿತ ನೀಡುತ್ತೇನೆ ಎಂದರು.
ರಾಜ್ಯದಲ್ಲಿ ಕೋವಿಡ್ ಸಂಕಷ್ಟ ಮತ್ತು ಪ್ರವಾಹ ಪರಿಸ್ಥಿತಿ ನಿರ್ಮಾಣವಾಗಿದ್ದು, ಪರಿಹರಿಸುವ ಕೆಲಸ ಮಾಡುತ್ತೇನೆ. ಹೈಕಮಾಂಡ್ ಯಾವುದೇ ಷರತ್ತು ವಿಧಿಸಿಲ್ಲ. ಯಡಿಯೂರಪ್ಪನವರ ನಿರೀಕ್ಷೆಗಳನ್ನು ಈಡೇರಿಸುತ್ತೇನೆ ಎಂದು ಭರವಸೆ ನೀಡಿದರು.
ಉಡುಪಿ : ಮೇ 5 ರಂದು ನೇರ ಸಂದರ್ಶನ ಉಡುಪಿ : ಉದ್ಯೋಗ ಆಕಾಂಕ್ಷಿಗಳಿಗೆ ಮೇ 5 ರಂದು ಬೆಳಗ್ಗೆ…
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ಡೈಮಂಡ್ಸ್ ಆಭರಣಗಳ ಪ್ರದರ್ಶನಕ್ಕೆ ಚಾಲನೆ ಉಡುಪಿ : ಮಾಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಉಡುಪಿ ಶಾಖೆಯ…
ಮೋದಿ ದುರಾಡಳಿತದ ವಿರುದ್ಧ ಮಾತಾಡಲು ಬಿಜೆಪಿಗರಿಗೆ ಸವಾಲು.. ಬಿಜೆಪಿಯ ಬಡಜನ ವಿರೋಧಿ ಬಣ್ಣ ಮತ್ತೆ ಬಯಲು.. ವಾಣಿಜ್ಯ ಸಿಲಿಂಡರ್ ದರ…
ಪತ್ನಿಯ ಅಕ್ರಮ ಸಂಬಂಧ, ಕಿರುಕುಳಕ್ಕೆ ಬೇಸತ್ತು ಗಂಡ ನೇಣಿಗೆ ಶರಣು ಕಾರವಾರ: ಪತ್ನಿಯ ಕಿರುಕುಳಕ್ಕೆ ಬೇಸತ್ತು ಪತಿ ಆತ್ಮಹತ್ಯೆ ಮಾಡಿಕೊಂಡ…
ಮನೆಯಲ್ಲಿದ್ದ ಚಿನ್ನಾಭರಣ ಸಮೇತ ಪತ್ನಿ ಪರಾರಿ: ಮಕ್ಕಳಿಬ್ಬರನ್ನು ಕೊಲೆಗೈದು ನೇಣಿಗೆ ಶರಣಾದ ಪತಿ ಕುಣಿಗಲ್ : ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ…
NDMAಯಿಂದ ಬರುತ್ತೆ ತುರ್ತು ಎಚ್ಚರಿಕೆ ಸಂದೇಶ.. ನಿಮ್ಮ ಮೊಬೈಲ್ನಲ್ಲಿ ಅಲರ್ಟ್ ಸಂದೇಶ, ಸೈರನ್ ಮೊಳಗಿದ್ರೆ ಭಯಪಡಬೇಡಿ.. ನಿಮ್ಮ ಮೊಬೈಲ್ ಫೋನ್…