ಬೆಂಗಳೂರು: 2006-07ರಲ್ಲಿ ಬಿ.ಎಸ್.ಯಡಿಯೂರಪ್ಪ ಮುಖ್ಯಮಂತ್ರಿಯಾಗಿದ್ದ ವೇಳೆ ಜಾರಿಗೆ ಬಂದಿದ್ದ, ಉಚಿತ ಸೈಕಲ್ ಯೋಜನೆಯನ್ನು ಕುಮಾರಸ್ವಾಮಿ ಯವರ ದೋಸ್ತಿ ಸರಕಾರ ನಿಲ್ಲಿಸುವುದಕ್ಕೆ ಮುಂದಾಗಿದೆ.. ಎನ್ನುವ ಇಂತಹದ್ದೊಂದು ಅನುಮಾನ ಇದೀಗ ಮೂಡಿದೆ.
ಇದಕ್ಕೆ ಕಾರಣ ಸೈಕಲ್ ವಿತರಣೆಯಲ್ಲಿ ಆಗಿರುವ ಕೋಟ್ಯಾಂತರ ರೂಪಾಯಿ ಭ್ರಷ್ಟಾಚಾರ.ರಾಜ್ಯದ 5.14ಲಕ್ಷ ವಿದ್ಯಾರ್ಥಿಗಳಿಗೆ ವಿತರಿಸುತ್ತಿರುವ ಸೈಕಲ್ಗಳು ಕಳಪೆಯಾಗಿವೆ ಅಂತ ಅಂತಾ ಆರೋಪಿಸಿದ್ದಾರೆ.
ತಪಾಸಣೆಗೆ ಬರುವ ಸೈಕಲ್ಗಳು ಉತ್ತಮ ಗುಣಮಟ್ಟದ್ದೇ ಆಗಿರುತ್ತದೆ, ಆದರೆ ನಂತರ ಕಳಪೆ ಗುಣಮಟ್ಟದ ಸೈಕಲ್ಗಳನ್ನ ವಿತರಿಸಲಾಗ್ತಿದೆ. ಇದಕ್ಕೆ ಜಿಲ್ಲಾ ಮಟ್ಟದ ಡಿಡಿಪಿಐ ಅಧಿಕಾರಿಗಳು ಕಾರಣ ಅಂತಾ ದೂರಿದ್ದಾರೆ. ಬಾಲಕಿಯರ ಸೈಕಲ್ಗೆ 3,900ರೂಪಾಯಿಯಂತೆ ಹಾಗೂ ಬಾಲಕರ ಸೈಕಲ್ಗೆ 3,600 ರೂಪಾಯಿ ವೆಚ್ಚದಲ್ಲಿ ಒಟ್ಟಾರೆ 185 ಕೋಟಿ ವೆಚ್ಚದಲ್ಲಿ ರಾಜ್ಯ ಸರ್ಕಾರ ಸೈಕಲ್ ವಿತರಣೆ ಮಾಡ್ತಿದೆ. ಕಳಪೆ ಗುಣಮುಟ್ಟದ ಸೈಕಲ್ ವಿತರಣೆಯ ಕಾರಣ ಹಾಗೂ ಸರ್ಕಾರದ ಖಜಾನೆಗೆ ಹೊರೆ ಕಮ್ಮಿ ಮಾಡುವ ನಿಟ್ಟಿನಲ್ಲಿ, ಇಡೀ ಯೋಜನೆಯನ್ನ ಸ್ಥಗಿತಗೊಳಿಸುವ ಇಂಗಿತದಲ್ಲಿ ಸರ್ಕಾರ ಇದೆ ..
ಕೂಡಲೇ ಸಿಎಂ ಈಗಾಗಲೇ ಸಪ್ಲೈ ಆಗಿರುವ ಸೈಕಲ್ಗಳಿಗೆ ಪೇಮೆಂಟ್ ನೀಡದಂತೆ, ಹಾಗೂ ಕಳಪೆ ಗುಣಮಟ್ಟದ ಸೈಕಲ್ಗಳನ್ನ ವಿತರಣೆ ನಿಲ್ಲಿಸುವಂತೆ ಸೂಚಿಸಿದ್ದಾರೆ ಎನ್ನಲಾಗಿದ್ದು, ಕಳಪೆ ಸೈಕಲ್ಗಳ ವಿತರಣೆ ಸಂಬಂಧ ಇಲಾಖಾವಾರು ತನಿಖೆಗೆ ಸೂಚಿಸಿದ್ದಾರೆ.
ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…
ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…
ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…
ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…
ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…
ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…