ದಾವಣಗೆರೆ: ರಾಜ್ಯ ರಾಜಕಾರಣದ ಇತಿಹಾಸದಲ್ಲಿ ಬಿ.ಎಸ್. ಯಡಿಯೂರಪ್ಪ ಅವರ ವಿರುದ್ಧ ನಡೆದಷ್ಟು ಪಿತೂರಿ, ಷಡ್ಯಂತ್ರ ಬೇರೆ ಯಾವ ರಾಜಕಾರಣಿಯ ವಿರುದ್ಧವೂ ನಡೆದಿಲ್ಲ ಎಂದು ಬಿಜೆಪಿ ಯುವ ಘಟಕದ ಕಾರ್ಯದರ್ಶಿ ಬಿ.ವೈ. ವಿಜಯೇಂದ್ರ ಹೇಳಿದರು.
ನಗರದ ಹೈಸ್ಕೂಲ್ ಮೈದಾನದಲ್ಲಿ ನಡೆಯುತ್ತಿರುವ ಬಾಳೆಹೊನ್ನೂರು ರಂಭಾಪುರಿ ಶ್ರೀಗಳ ಶರನ್ನವರಾತ್ರಿ ದಸರಾ ಧರ್ಮ ಸಮ್ಮೇಳನದಲ್ಲಿ ಸೋಮವಾರ ಭಾಗವಹಿಸಿ ಅವರು ಮಾತನಾಡಿದರು.
ಯಡಿಯೂರಪ್ಪ ಮಾತ್ರ ಯಾರಿಗೂ ಕೇಡು ಬಯಸದೇ ರಾಜಕಾರಣ ಮಾಡುತ್ತಾ ಬಂದರು. ಹಾಗಾಗಿ ಅವರು ಮತ್ತೆ ಮುಖ್ಯಮಂತ್ರಿಯಾಗಲು ಜನ ಬಯಸಿದರು. ರಾಜ್ಯದಲ್ಲಿ ಭೀಕರ ಬರಗಾಲ ಇತ್ತು. ಯಡಿಯೂರಪ್ಪ ಮುಖ್ಯಮಂತ್ರಿಯಾಗಿ 48 ಗಂಟೆಗಳಲ್ಲಿಯೇ ಮಳೆ ಬಂತು. ಆದರೆ ಮಳೆ ಜಾಸ್ತಿಯಾಗಿದ್ದರಿಂದ ಪ್ರವಾಹ ಉಂಟಾಯಿತು. ಒಂದು ತಿಂಗಳ ಕಾಲ ಯಾವುದೇ ಸಚಿವರಿಲ್ಲದಿದ್ದರೂ ಅವರೊಬ್ಬರೇ ಕಾಲಿಗೆ ಚಕ್ರ ಕಟ್ಟಿಕೊಂಡು ತಿರುಗಾಡಿ ಸಂತ್ರಸ್ತರ ನೆರವಿಗೆ ಧಾವಿಸಿದರು ಎಂದರು.
‘ಅವಕಾಶ ಸಿಕ್ಕಿದ್ದರೆ ವರಣಾ ಕ್ಷೇತ್ರದಿಂದ ಗೆದ್ದು ಶಾಸಕನಾಗುತ್ತಿದ್ದೆ. ಆದರೆ ಯಡಿಯೂರಪ್ಪರಂತೆ ಹೋರಾಟ ಮಾಡಿ ಬೆಳವಣಿಗೆ ಹೊಂದಬೇಕು ಎಂಬುದು ರಂಭಾಪುರಿ ಸ್ವಾಮೀಜಿ ಅವರ ಆಶೀರ್ವಾದವಾಗಿತ್ತು. ಹಾಗಾಗಿ ಹೋರಾಟದ ಮೂಲಕವೇ ರಾಜಕೀಯವಾಗಿ ಬೆಳೆಯುವೆ’ ಎಂದು ಬಿ.ವೈ. ವಿಜಯೇಂದ್ರ ಹೇಳಿದರು.
ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ ಬೆಳ್ತಂಗಡಿ: ಕಲೆಯ ಪ್ರದರ್ಶನದಲ್ಲಿ ಕೆಲವೊಮ್ಮೆ ಪ್ರೇಕ್ಷಕರ ವರ್ತನೆ…
ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ ಶಿಳ್ಳೆ ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್ ಭಟ್ ಗರಂ ಮಂಗಳೂರು: ಯಕ್ಷಗಾನ…
ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…
SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…
ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಗೌರವ ಡಾಕ್ಟರೇಟ್ ಮಂಗಳೂರು…
ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…