ದಾವಣಗೆರೆ: ರಾಜ್ಯ ರಾಜಕಾರಣದ ಇತಿಹಾಸದಲ್ಲಿ ಬಿ.ಎಸ್. ಯಡಿಯೂರಪ್ಪ ಅವರ ವಿರುದ್ಧ ನಡೆದಷ್ಟು ಪಿತೂರಿ, ಷಡ್ಯಂತ್ರ ಬೇರೆ ಯಾವ ರಾಜಕಾರಣಿಯ ವಿರುದ್ಧವೂ ನಡೆದಿಲ್ಲ ಎಂದು ಬಿಜೆಪಿ ಯುವ ಘಟಕದ ಕಾರ್ಯದರ್ಶಿ ಬಿ.ವೈ. ವಿಜಯೇಂದ್ರ ಹೇಳಿದರು.
ನಗರದ ಹೈಸ್ಕೂಲ್ ಮೈದಾನದಲ್ಲಿ ನಡೆಯುತ್ತಿರುವ ಬಾಳೆಹೊನ್ನೂರು ರಂಭಾಪುರಿ ಶ್ರೀಗಳ ಶರನ್ನವರಾತ್ರಿ ದಸರಾ ಧರ್ಮ ಸಮ್ಮೇಳನದಲ್ಲಿ ಸೋಮವಾರ ಭಾಗವಹಿಸಿ ಅವರು ಮಾತನಾಡಿದರು.
ಯಡಿಯೂರಪ್ಪ ಮಾತ್ರ ಯಾರಿಗೂ ಕೇಡು ಬಯಸದೇ ರಾಜಕಾರಣ ಮಾಡುತ್ತಾ ಬಂದರು. ಹಾಗಾಗಿ ಅವರು ಮತ್ತೆ ಮುಖ್ಯಮಂತ್ರಿಯಾಗಲು ಜನ ಬಯಸಿದರು. ರಾಜ್ಯದಲ್ಲಿ ಭೀಕರ ಬರಗಾಲ ಇತ್ತು. ಯಡಿಯೂರಪ್ಪ ಮುಖ್ಯಮಂತ್ರಿಯಾಗಿ 48 ಗಂಟೆಗಳಲ್ಲಿಯೇ ಮಳೆ ಬಂತು. ಆದರೆ ಮಳೆ ಜಾಸ್ತಿಯಾಗಿದ್ದರಿಂದ ಪ್ರವಾಹ ಉಂಟಾಯಿತು. ಒಂದು ತಿಂಗಳ ಕಾಲ ಯಾವುದೇ ಸಚಿವರಿಲ್ಲದಿದ್ದರೂ ಅವರೊಬ್ಬರೇ ಕಾಲಿಗೆ ಚಕ್ರ ಕಟ್ಟಿಕೊಂಡು ತಿರುಗಾಡಿ ಸಂತ್ರಸ್ತರ ನೆರವಿಗೆ ಧಾವಿಸಿದರು ಎಂದರು.
‘ಅವಕಾಶ ಸಿಕ್ಕಿದ್ದರೆ ವರಣಾ ಕ್ಷೇತ್ರದಿಂದ ಗೆದ್ದು ಶಾಸಕನಾಗುತ್ತಿದ್ದೆ. ಆದರೆ ಯಡಿಯೂರಪ್ಪರಂತೆ ಹೋರಾಟ ಮಾಡಿ ಬೆಳವಣಿಗೆ ಹೊಂದಬೇಕು ಎಂಬುದು ರಂಭಾಪುರಿ ಸ್ವಾಮೀಜಿ ಅವರ ಆಶೀರ್ವಾದವಾಗಿತ್ತು. ಹಾಗಾಗಿ ಹೋರಾಟದ ಮೂಲಕವೇ ರಾಜಕೀಯವಾಗಿ ಬೆಳೆಯುವೆ’ ಎಂದು ಬಿ.ವೈ. ವಿಜಯೇಂದ್ರ ಹೇಳಿದರು.
ಮೈಸೂರು: ಕಾಲೇಜು ಕ್ಯಾಂಪಸ್ನಲ್ಲೇ ಹೃದಯಾಘಾತ ; ಕುಸಿದುಬಿದ್ದು ವಿದ್ಯಾರ್ಥಿ ಸಾವು ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನ ಖ್ಯಾತ ಮರಿಮಲ್ಲಪ್ಪ ಕಾಲೇಜು…
ಅಡ್ಡ ಮತದಾನ ಮೂಲಕ ಪಕ್ಷಕ್ಕೆ ಹಾಗೂ ಮೈತ್ರಿಗೆ ದ್ರೋಹ ಬಗೆದವರನ್ನು ಯಾವುದೇ ಕಾರಣಕ್ಕೂ ಕ್ಷಮಿಸುವುದಿಲ್ಲ : ವಿಜಯೇಂದ್ರ ಆಕ್ರೋಶ ಬೆಂಗಳೂರು:…
ಭಟ್ಕಳ ಲವ್ ಜಿಹಾದ್ ಆರೋಪ : ಯುವಕ ಅರೆಸ್ಟ್ ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಭಟ್ಕಳದಲ್ಲಿ ಕಿಚ್ಚು ಹಚ್ಚಿದ ಹಿಂದೂ,…
ಪರಿಷತ್ ಚುನಾವಣೆಯಲ್ಲಿ ನಮಗೆ ಮತ ನೀಡಿದ ಬೇರೆ ಪಕ್ಷದ ವಿಶ್ವಾಸವನ್ನುನಾವು ಉಳಿಸಿಕೊಳ್ಳುತ್ತೇವೆ: ಡಿ.ಕೆ.ಶಿವಕುಮಾರ್ ಬೆಂಗಳೂರು: ವಿಧಾನ ಪರಿಷತ್ ಚುನಾವಣೆಯಲ್ಲಿ ನಮ್ಮ…
ವಚನಾನಂದ ಸ್ವಾಮೀಜಿ ವಿರುದ್ಧ ಪೋಕ್ಸೋ ಪ್ರಕರಣ: ಜೂ. 30ಕ್ಕೆ ಮುಂದೂಡಿಕೆ ದಾವಣಗೆರೆ: ಹರಿಹರದ ವಚನಾನಂದ ಸ್ವಾಮೀಜಿ ಪೋಕ್ಸೋ ಪ್ರಕರಣ ಆದೇಶವನ್ನು…
ವಿಟ್ಲ : ಲಾರಿಯಲ್ಲಿ ತಾಂತ್ರಿಕ ವೈಫಲ್ಯ - ಸರಿಪಡಿಸುವ ವೇಳೆ ಚಕ್ರಗಳ ಅಡಿಗೆ ಸಿಲುಕಿ ಚಾಲಕ ಸ್ಥಳದಲ್ಲೇ ಮೃತ್ಯು ವಿಟ್ಲ:…