Featured

ಯಡಿಯೂರಪ್ಪ ಅವರನ್ನು ಸ್ವಪಕ್ಷದವರು ಅಥವಾ ವಿರೋಧ ಪಕ್ಷದವರು ಕೆಣಕಿದರೆ ಬೀದಿಗಿಳಿದು ಹೋರಾಟ ನಡೆಸುತ್ತೇವೆ : ವೀರಶೈವ–ಲಿಂಗಾಯತ ಮಠಾಧೀಶರ ಎಚ್ಚರಿಕೆ -Vishwanews24

ಕಲಬುರ್ಗಿ: ‘ಬಸವ ತತ್ವದಂತೆ ನಡೆಯುತ್ತಿರುವ, ಕೊಡುಗೈ ದಾನಿ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರನ್ನು ಸ್ವಪಕ್ಷದವರು ಅಥವಾ ವಿರೋಧ ಪಕ್ಷದವರು ಕೆಣಕಿದರೆ ಬೀದಿಗಿಳಿದು ಹೋರಾಟ ನಡೆಸುತ್ತೇವೆ’ ಎಂದು ಕಲ್ಯಾಣ ಕರ್ನಾಟಕ ಭಾಗದ ವೀರಶೈವ–ಲಿಂಗಾಯತ ಮಠಾಧೀಶರು ಎಚ್ಚರಿಕೆ ನೀಡಿದರು.

ಈ ಭಾಗಕ್ಕೆ ‘ಕಲ್ಯಾಣ ಕರ್ನಾಟಕ’ ಎಂದು ನಾಮಕರಣ ಮಾಡಿದ್ದಕ್ಕಾಗಿ ಯಡಿಯೂರಪ್ಪ ಅವರಿಗೆ ಮಂಗಳವಾರ ‘ಕಲ್ಯಾಣ ಕರ್ನಾಟಕ ಮಠಾಧೀಶರ ವೇದಿಕೆ’ ಆಯೋಜಿಸಿದ್ದ ಸನ್ಮಾನ ಸಮಾರಂಭದಲ್ಲಿ ಮಾತನಾಡಿದ ಹಲವು ಮಠಾಧೀಶರು ಯಡಿಯೂರಪ್ಪ ಅವರಿಗೆ ಸಂಪೂರ್ಣ ಬೆಂಬಲ ವ್ಯಕ್ತಪಡಿಸಿದರು.

ಪ್ರಾಸ್ತಾವಿಕ ಭಾಷಣದಲ್ಲಿ ದೇವಾಪುರದ ಶಿವಮೂರ್ತಿ ಶಿವಾಚಾರ್ಯರು, ‘ಈ ಭಾಗದ ಮಠಗಳು ಶಿಕ್ಷಣ ಸಂಸ್ಥೆಗಳ ಮೂಲಕ ಅಕ್ಷರ ದಾಸೋಹ ನೀಡುತ್ತಿವೆ. ಸಂಕಷ್ಟದಲ್ಲಿದ್ದ ಮಠಗಳಿಗೆ ಯಡಿಯೂರಪ್ಪ ಅವರು ಆರ್ಥಿಕ ನೆರವು ನೀಡಿದ್ದಾರೆ’ ಎಂದು ಸ್ಮರಿಸಿದರು.

ಯಡಿಯೂರಪ್ಪ ಅವರನ್ನು ಆಧುನಿಕ ಬಸವಣ್ಣ ಎಂಬ ಕೆಲ ಮಠಾಧೀಶರ ಹೊಗಳಿಕೆಯನ್ನು ನಯವಾಗಿಯೇ ಆಕ್ಷೇಪಿಸಿದ ನಾಲವಾರ ಮಠದ ಸಿದ್ಧತೋಟೇಂದ್ರ ಶಿವಾಚಾರ್ಯರು, ‘ಸ್ವಾಮೀಜಿಗಳು ಸೇರಿದಂತೆ ಯಾರೂ ಬಸವಣ್ಣನವರ ವ್ಯಕ್ತಿತ್ವದ ಸಮೀಪ‍ಕ್ಕೂ ಸುಳಿಯಲು ಸಾಧ್ಯವಿಲ್ಲ. ಯಡಿಯೂರಪ್ಪ ಅವರನ್ನು ಬಸವತತ್ವವನ್ನು ಎದೆಯಲ್ಲಿಟ್ಟುಕೊಂಡು ಆಚರಿಸುತ್ತಿರುವ ಬಸವ ಅನುಯಾಯಿ ಎನ್ನಬಹುದು’ ಎಂದರು.

ಸುಲಫಲ ಮಠಕ್ಕೆ ತೆರಳಿದ ಯಡಿಯೂರಪ್ಪ ಅವರು, ಅಲ್ಲಿ ಬಸವ ಭವನ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಮಠದ  ಸಾರಂಗಧರ ದೇಶಿಕೇಂದ್ರ ಸ್ವಾಮೀಜಿ, ‘ಈ ಸರ್ಕಾರದ ಅವಧಿ ಮುಗಿಯುವವರೆಗೆ ಯಡಿಯೂರಪ್ಪ ಮುಖ್ಯಮಂತ್ರಿ ಆಗಿರಬೇಕು. ಪದಚ್ಯುತಿಗೊಳಿಸಿ ದರೆ ಎಲ್ಲ ಮಠಾಧೀಶರು ದೆಹಲಿಯಲ್ಲಿ ಧರಣಿ ನಡೆಸುತ್ತೇವೆ’ ಎಂದು ಬಿಜೆಪಿ ಹೈಕಮಾಂಡ್‌ಗೆ ಎಚ್ಚರಿಕೆ ನೀಡಿದರು.

ಮಹಾರಾಷ್ಟ್ರದ ಸೊಲ್ಲಾಪುರ ಕ್ಷೇತ್ರದ ಬಿಜೆಪಿ ಸಂಸದ ಜಯಸಿದ್ಧೇಶ್ವರ ಸ್ವಾಮೀಜಿ, ಕಲಬುರ್ಗಿಯ ಶರಣಬಸವೇಶ್ವರ ಸಂಸ್ಥಾನದ ಡಾ.ಶರಣಬಸವಪ್ಪ ಅಪ್ಪ, ಶಾಖಾಪುರ ಮಠದ ಸಿದ್ದರಾಮ ಶಿವಾಚಾರ್ಯರು, ಮಾದನ ಹಿಪ್ಪರಗಾದ ಶಿವಲಿಂಗ ಸ್ವಾಮೀಜಿ, ಚಿತ್ತಾಪುರದ ಸೋಮಶೇಖರ ಶಿವಾಚಾರ್ಯರು, ಕಡಕೋಳದ ಡಾ.ರುದ್ರಮುನಿ ಶಿವಾಚಾರ್ಯರು, ಪಾಳಾದ ಡಾ.ಗುರುಮೂರ್ತಿ ಶಿವಾಚಾರ್ಯರು, ಹೊನ್ನಕಿರಣಗಿಯ ಚಂದ್ರಗುಂಡ ಶಿವಾಚಾರ್ಯರು, ಕಡಗಂಚಿಯ ಶಾಂತಲಿಂಗ ಶಿವಾಚಾರ್ಯರು, ಮಹಾಗಾಂವ ಕಳ್ಳಿಮಠದ ಗುರುಲಿಂಗ ಶಿವಾಚಾರ್ಯರು ಇದ್ದರು.

Vishwa News 24

Recent Posts

ಎಸ್‌ಟಿಪಿಯನ್ನು ಮೂಳೂರಿನಿಂದ ಬೆಳಪು ಪ್ರದೇಶಕ್ಕೆ ಸ್ಥಳಾಂತರ ಮಾಡಿದರೆ ಕಾಪು ಪುರಸಭೆಗೆ ಸಂಪೂರ್ಣ ಸ್ವಾಗತ : ದೇವಿಪ್ರಸಾದ್ ಶೆಟ್ಟಿ – vishwanews24

ಬೆಳಪು ಪ್ರದೇಶದಲ್ಲಿ ಎಲ್ಲಾ ಅಗತ್ಯ ಸೌಲಭ್ಯಗಳೊಂದಿಗೆ ಘಟಕ ನಿರ್ಮಿಸಿದರೆ ನಮ್ಮಿಂದ ಯಾವುದೇ ವಿರೋಧ ಇರುವುದಿಲ್ಲ : ದೇವಿಪ್ರಸಾದ್ ಶೆಟ್ಟಿ ಮೂಳೂರು…

1 day ago

ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ – vishwanews24

ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ ಬೆಳಗಾವಿ: ಪ್ರಿಯಕರನ ಜೊತೆ…

1 day ago

ಬಿಜೆಪಿ ನಡೆಸಿರುವ ಅಪವಿತ್ರ ಮೈತ್ರಿ ಇತಿಹಾಸವನ್ನು ದೇಶ ಮರೆತಿಲ್ಲ : ಬಿ.ಕೆ.ಹರಿಪ್ರಸಾದ್ – vishwanews24

ದೇಶದ ಜಾತ್ಯತೀತ ಮೌಲ್ಯಗಳನ್ನು ರಕ್ಷಿಸಲು ಕಾಂಗ್ರೆಸ್ ಪಕ್ಷ ಸದಾ ಸಮಾನ ಚಿಂತನೆಯ ಪಕ್ಷಗಳೊಂದಿಗೆ ಕೈಜೋಡಿಸಿದೆ : ಬಿ.ಕೆ.ಹರಿಪ್ರಸಾದ್ ಬೆಂಗಳೂರು: ‘ಬಿಜೆಪಿ…

1 day ago

ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ – vishwanews24

ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ ಪಡುಬಿದ್ರಿ: ಸನಾತನ ಫೌಂಡೇಶನ್‌ನ ಅಧ್ಯಕ್ಷ,…

1 day ago

ವಿವಾಹಿತ ಮಹಿಳೆ  ಜತೆ ಲಿವ್ ಇನ್ ರಿಲೇಶನ್‌ ಶಿಪ್‌ನಲ್ಲಿದ್ದ ಯುವಕ ಶವವಾಗಿ ಪತ್ತೆ  – vishwanews24

ವಿವಾಹಿತ ಮಹಿಳೆ ಜತೆ ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ಶವವಾಗಿ ಪತ್ತೆ  ಬೆಂಗಳೂರು: ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ನೇಣುಬಿಗಿದ…

1 day ago

ಬಿಜೆಪಿ ನಾಯಕ ಸುವೇಂದು ಅಧಿಕಾರಿ ಬಂಗಾಳದ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕಾರ – vishwanews24

ಪಶ್ಚಿಮ ಬಂಗಾಳದ ರಾಜಕೀಯ ಇತಿಹಾಸದಲ್ಲಿ ಹೊಸ ಪರ್ವ.. ಬಿಜೆಪಿ ಮೊದಲ ಸಿಎಂ ಆಗಿ ಪ್ರಮಾಣ ಸ್ವೀಕಾರ.. ಐತಿಹಾಸಿಕ ಕ್ಷಣಕ್ಕೆ ಮೋದಿ,…

1 day ago