Featured

ಯಡಿಯೂರಪ್ಪ ಅವರನ್ನು ಸ್ವಪಕ್ಷದವರು ಅಥವಾ ವಿರೋಧ ಪಕ್ಷದವರು ಕೆಣಕಿದರೆ ಬೀದಿಗಿಳಿದು ಹೋರಾಟ ನಡೆಸುತ್ತೇವೆ : ವೀರಶೈವ–ಲಿಂಗಾಯತ ಮಠಾಧೀಶರ ಎಚ್ಚರಿಕೆ -Vishwanews24

ಕಲಬುರ್ಗಿ: ‘ಬಸವ ತತ್ವದಂತೆ ನಡೆಯುತ್ತಿರುವ, ಕೊಡುಗೈ ದಾನಿ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರನ್ನು ಸ್ವಪಕ್ಷದವರು ಅಥವಾ ವಿರೋಧ ಪಕ್ಷದವರು ಕೆಣಕಿದರೆ ಬೀದಿಗಿಳಿದು ಹೋರಾಟ ನಡೆಸುತ್ತೇವೆ’ ಎಂದು ಕಲ್ಯಾಣ ಕರ್ನಾಟಕ ಭಾಗದ ವೀರಶೈವ–ಲಿಂಗಾಯತ ಮಠಾಧೀಶರು ಎಚ್ಚರಿಕೆ ನೀಡಿದರು.

ಈ ಭಾಗಕ್ಕೆ ‘ಕಲ್ಯಾಣ ಕರ್ನಾಟಕ’ ಎಂದು ನಾಮಕರಣ ಮಾಡಿದ್ದಕ್ಕಾಗಿ ಯಡಿಯೂರಪ್ಪ ಅವರಿಗೆ ಮಂಗಳವಾರ ‘ಕಲ್ಯಾಣ ಕರ್ನಾಟಕ ಮಠಾಧೀಶರ ವೇದಿಕೆ’ ಆಯೋಜಿಸಿದ್ದ ಸನ್ಮಾನ ಸಮಾರಂಭದಲ್ಲಿ ಮಾತನಾಡಿದ ಹಲವು ಮಠಾಧೀಶರು ಯಡಿಯೂರಪ್ಪ ಅವರಿಗೆ ಸಂಪೂರ್ಣ ಬೆಂಬಲ ವ್ಯಕ್ತಪಡಿಸಿದರು.

ಪ್ರಾಸ್ತಾವಿಕ ಭಾಷಣದಲ್ಲಿ ದೇವಾಪುರದ ಶಿವಮೂರ್ತಿ ಶಿವಾಚಾರ್ಯರು, ‘ಈ ಭಾಗದ ಮಠಗಳು ಶಿಕ್ಷಣ ಸಂಸ್ಥೆಗಳ ಮೂಲಕ ಅಕ್ಷರ ದಾಸೋಹ ನೀಡುತ್ತಿವೆ. ಸಂಕಷ್ಟದಲ್ಲಿದ್ದ ಮಠಗಳಿಗೆ ಯಡಿಯೂರಪ್ಪ ಅವರು ಆರ್ಥಿಕ ನೆರವು ನೀಡಿದ್ದಾರೆ’ ಎಂದು ಸ್ಮರಿಸಿದರು.

ಯಡಿಯೂರಪ್ಪ ಅವರನ್ನು ಆಧುನಿಕ ಬಸವಣ್ಣ ಎಂಬ ಕೆಲ ಮಠಾಧೀಶರ ಹೊಗಳಿಕೆಯನ್ನು ನಯವಾಗಿಯೇ ಆಕ್ಷೇಪಿಸಿದ ನಾಲವಾರ ಮಠದ ಸಿದ್ಧತೋಟೇಂದ್ರ ಶಿವಾಚಾರ್ಯರು, ‘ಸ್ವಾಮೀಜಿಗಳು ಸೇರಿದಂತೆ ಯಾರೂ ಬಸವಣ್ಣನವರ ವ್ಯಕ್ತಿತ್ವದ ಸಮೀಪ‍ಕ್ಕೂ ಸುಳಿಯಲು ಸಾಧ್ಯವಿಲ್ಲ. ಯಡಿಯೂರಪ್ಪ ಅವರನ್ನು ಬಸವತತ್ವವನ್ನು ಎದೆಯಲ್ಲಿಟ್ಟುಕೊಂಡು ಆಚರಿಸುತ್ತಿರುವ ಬಸವ ಅನುಯಾಯಿ ಎನ್ನಬಹುದು’ ಎಂದರು.

ಸುಲಫಲ ಮಠಕ್ಕೆ ತೆರಳಿದ ಯಡಿಯೂರಪ್ಪ ಅವರು, ಅಲ್ಲಿ ಬಸವ ಭವನ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಮಠದ  ಸಾರಂಗಧರ ದೇಶಿಕೇಂದ್ರ ಸ್ವಾಮೀಜಿ, ‘ಈ ಸರ್ಕಾರದ ಅವಧಿ ಮುಗಿಯುವವರೆಗೆ ಯಡಿಯೂರಪ್ಪ ಮುಖ್ಯಮಂತ್ರಿ ಆಗಿರಬೇಕು. ಪದಚ್ಯುತಿಗೊಳಿಸಿ ದರೆ ಎಲ್ಲ ಮಠಾಧೀಶರು ದೆಹಲಿಯಲ್ಲಿ ಧರಣಿ ನಡೆಸುತ್ತೇವೆ’ ಎಂದು ಬಿಜೆಪಿ ಹೈಕಮಾಂಡ್‌ಗೆ ಎಚ್ಚರಿಕೆ ನೀಡಿದರು.

ಮಹಾರಾಷ್ಟ್ರದ ಸೊಲ್ಲಾಪುರ ಕ್ಷೇತ್ರದ ಬಿಜೆಪಿ ಸಂಸದ ಜಯಸಿದ್ಧೇಶ್ವರ ಸ್ವಾಮೀಜಿ, ಕಲಬುರ್ಗಿಯ ಶರಣಬಸವೇಶ್ವರ ಸಂಸ್ಥಾನದ ಡಾ.ಶರಣಬಸವಪ್ಪ ಅಪ್ಪ, ಶಾಖಾಪುರ ಮಠದ ಸಿದ್ದರಾಮ ಶಿವಾಚಾರ್ಯರು, ಮಾದನ ಹಿಪ್ಪರಗಾದ ಶಿವಲಿಂಗ ಸ್ವಾಮೀಜಿ, ಚಿತ್ತಾಪುರದ ಸೋಮಶೇಖರ ಶಿವಾಚಾರ್ಯರು, ಕಡಕೋಳದ ಡಾ.ರುದ್ರಮುನಿ ಶಿವಾಚಾರ್ಯರು, ಪಾಳಾದ ಡಾ.ಗುರುಮೂರ್ತಿ ಶಿವಾಚಾರ್ಯರು, ಹೊನ್ನಕಿರಣಗಿಯ ಚಂದ್ರಗುಂಡ ಶಿವಾಚಾರ್ಯರು, ಕಡಗಂಚಿಯ ಶಾಂತಲಿಂಗ ಶಿವಾಚಾರ್ಯರು, ಮಹಾಗಾಂವ ಕಳ್ಳಿಮಠದ ಗುರುಲಿಂಗ ಶಿವಾಚಾರ್ಯರು ಇದ್ದರು.

Vishwa News 24

Recent Posts

ಸುರತ್ಕಲ್ : ಪ್ರೀತಿಸುವುದಾಗಿ ನಂಬಿಸಿ ವಂಚನೆ ಆರೋಪ: ಅಪ್ರಾಪ್ತೆ ಆತ್ಮಹತ್ಯೆ; ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು – vishwanews24

ಸುರತ್ಕಲ್ : ಪ್ರೀತಿಸುವುದಾಗಿ ನಂಬಿಸಿ ದೈಹಿಕ ಸಂಪರ್ಕ ಬೆಳೆಸಿ ವಂಚನೆ ಆರೋಪ: ಅಪ್ರಾಪ್ತೆ ಆತ್ಮಹತ್ಯೆ; ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು…

6 hours ago

ರಾಜ್ಯ ಸರ್ಕಾರದಿಂದ  133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ ಶೋಕಾಸ್ ನೋಟಿಸ್ – vishwanews24

ರಾಜ್ಯ ಸರ್ಕಾರದಿಂದ  133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ ಶೋಕಾಸ್ ನೋಟಿಸ್ ಬೆಂಗಳೂರು: ರಾಜ್ಯ ಸರ್ಕಾರ 133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ …

6 hours ago

ಉಡುಪಿ: ಅಸ್ವಸ್ಥಗೊಂಡ ಪ್ರಯಾಣಿಕ ; ಬಸ್‌ನಲ್ಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪ್ರಾಣ ಉಳಿಸಿದ ಚಾಲಕ – vishwanews24

ಉಡುಪಿ: ಅಸ್ವಸ್ಥಗೊಂಡ ಪ್ರಯಾಣಿಕ ; ಬಸ್‌ನಲ್ಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪ್ರಾಣ ಉಳಿಸಿದ ಚಾಲಕ ಉಡುಪಿ : ಶಿವಮೊಗ್ಗದಿಂದ ಬರುತ್ತಿದ್ದ ಖಾಸಗಿ…

7 hours ago

ಮುಂಬೈನಲ್ಲಿ ಮುಂಗಾರು: ರೈಲು ನಿಲ್ದಾಣ ಸೇರಿದಂತೆ ಹಲವು ಪ್ರದೇಶಗಳು ಜಲಾವೃತ – vishwanews24

ಮುಂಬೈನಲ್ಲಿ ಮುಂಗಾರು: ತಗ್ಗು ಪ್ರದೇಶಗಳು ಜಲಾವೃತ, ರೈಲು ಸಂಚಾರ ವ್ಯತ್ಯಯ ಮುಂಬೈ: ಮುಂಬೈನಲ್ಲಿ ಮುಂಗಾರು ಆರಂಭವಾದ ಒಂದು ದಿನದ ನಂತರ,…

10 hours ago

ಜೂ.25 ರಂದು ಮಂಗಳೂರಿಗೆ ಬಾಲಿವುಡ್ ಸೂಪರ್ ಸ್ಟಾರ್ ಶಾರುಖ್ ಖಾನ್ – vishwanews24

ಜೂ.25ಕ್ಕೆ ಮಂಗಳೂರಿಗೆ ಶಾರುಖ್ ಖಾನ್: ರೋಹನ್ ಕಾರ್ಪೊರೇಶನ್ ವಿಶೇಷ ಕಾರ್ಯಕ್ರಮದಲ್ಲಿ ಭಾಗಿ ಮಂಗಳೂರು: ಬಾಲಿವುಡ್ ನ ಖ್ಯಾತ ನಟ ಹಾಗೂ…

10 hours ago

ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್‌ಟೇಬಲ್ ಸಾವು – vishwanews24

ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್‌ಟೇಬಲ್ ಸಾವು ರಾಯಚೂರು: ಜಿಲ್ಲೆಯ ದೇವದುರ್ಗ ಜಿಲ್ಲಾ ಸಶಸ್ತ್ರ ಮೀಸಲು ಪಡೆ ಕಾನ್ಸ್‌ಟೇಬಲ್…

10 hours ago