Featured

ಯಡಿಯೂರಪ್ಪ ಅವರು ದೊಡ್ಡ ನಾಯಕರು ,ಉತ್ತಮ ರೀತಿಯಲ್ಲಿ ಆಡಳಿತ ನಡೆಸುತ್ತಿದ್ದಾರೆ : ಮುರಳೀಧರ ರಾವ್‌   -Vishwanews24

ಮಂಗಳೂರು:  ಅನರ್ಹ ಶಾಸಕರು ಬಿಜೆಪಿಗರಲ್ಲ, ಟಿಕೆಟ್‌ ಯಾರಿಗೂ ಅಂತಿಮಗೊಂಡಿಲ್ಲ ಎಂದು  ಮಂಗಳೂರಿನಲ್ಲಿ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ಕರ್ನಾಟಕ ಬಿಜೆಪಿ ಉಸ್ತುವಾರಿ ಮುರಳೀಧರ ರಾವ್‌  ಹೇಳಿದರು.

ಮಂಗಳೂರಿನ ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಭಾನುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯ ಬಿಜೆಪಿಯಲ್ಲಿ ಯಾವುದೇ ಗೊಂದಲ ಇಲ್ಲ. ಯಡಿಯೂರಪ್ಪ ಅವರು ಬಿಜೆಪಿಯ ಪ್ರಶ್ನಾತೀತ ನಾಯಕ. 15 ಸ್ಥಾನಗಳಿಗೆ ನಡೆಯುವ ಉಪ ಚುನಾವಣೆಯಲ್ಲಿ ಎಲ್ಲ ಸ್ಥಾನಗಳಲ್ಲೂ ಬಿಜೆಪಿ ಜಯಗಳಿಸುತ್ತದೆ. ಶಾಸಕರ ಅನರ್ಹತೆ ವಿಚಾರ ಸುಪ್ರೀಂ ಕೋರ್ಟ್‌ನಲ್ಲಿ ತೀರ್ಮಾನಕ್ಕೆ ಬಾಕಿ ಇದೆ. ಅನರ್ಹ ಶಾಸಕರು ಬಿಜೆಪಿ ಸದಸ್ಯರಲ್ಲ. ಹಾಗಾಗಿ ಅನರ್ಹ ಶಾಸಕರಿಗೆ ಟಿಕೆಟ್‌ ನೀಡುವ ವಿಚಾರ ಅಂತಿಮಗೊಂಡಿಲ್ಲ ಎಂದು ಸ್ಪಷ್ಟಪಡಿಸಿದರು.

ಸಿಎಂ ಯಡಿಯೂರಪ್ಪ ಅವರನ್ನು ಎಲ್ಲಿಯೂ ಬದಿಗೆ ಸರಿಸಿಲ್ಲ, ಅವರನ್ನು ಕಡೆಗಣಿಸಿಯೂ ಇಲ್ಲ. ಬಿಜೆಪಿ ರಾಜ್ಯ ಉಪಾಧ್ಯಕ್ಷರಾಗಿ ನೇಮಕಗೊಂಡ ಭಾನುಪ್ರಕಾಶ್‌ ಹಾಗೂ ಸುರಾನ ಅವರು ಬಿಜೆಪಿಯಲ್ಲಿ ಕೆಲಸ ಮಾಡಿದ್ದಾರೆ, ಅವರು ಕಾಂಗ್ರೆಸಿಗರಲ್ಲ. ಹಾಗಿರುವಾಗ ಅವರನ್ನು ನೇಮಕಗೊಳಿಸಿರುವುದರಲ್ಲಿ ಯಾವುದೇ ಅಸಮಾಧಾನ ಪಕ್ಷದಲ್ಲಿ ಇಲ್ಲ. ಈ ಕುರಿತ ಎಲ್ಲ ವರದಿಗಳೂ ಕೇವಲ ಊಹಪೋಹ. ಯಡಿಯೂರಪ್ಪ ಅವರು ದೊಡ್ಡ ನಾಯಕರು. ಅವರು ಉತ್ತಮ ರೀತಿಯಲ್ಲಿ ಆಡಳಿತ ನಡೆಸುತ್ತಿದ್ದಾರೆ. ಅದೇ ರೀತಿ ರಾಜ್ಯಾಧ್ಯಕ್ಷರಾಗಿ ನಳಿನ್‌ ಕುಮಾರ್‌ ಕಟೀಲ್‌ ಅವರು ರಾಜ್ಯಾದ್ಯಂತ ಪ್ರವಾಸ ನಡೆಸುತ್ತಿದ್ದಾರೆ. ಬಿಜೆಪಿಯಲ್ಲಿ ಭಿನ್ನಮತ ಎಂಬುದಿಲ್ಲ ಎಂದು ಮುರಳೀಧರ ರಾವ್‌ ಸ್ಪಷ್ಟಪಡಿಸಿದರು.

ಅನರ್ಹ ಶಾಸಕರ ವಿಚಾರ ಈಗ ಸುಪ್ರೀಂ ಕೋರ್ಟ್‌ನಲ್ಲಿ ಅಂತಿಮ ತೀರ್ಮಾನಕ್ಕೆ ಬಾಕಿ ಇದೆ. ಉಪ ಚುನಾವಣೆಗೆ ಇನ್ನೂ ಸಮಯ ಇದೆ. ಹಾಗಿರುವಾಗ ಈಗಲೇ ಅಭ್ಯರ್ಥಿ ಆಯ್ಕೆಯ ತರಾತುರಿ ಬಿಜೆಪಿಗೆ ಇಲ್ಲ. ಅಲ್ಲದೆ ಅನರ್ಹ ಶಾಸಕರು ಬಿಜೆಪಿ ಸದಸ್ಯತ್ವ ಪಡೆದವರಲ್ಲ. ಹಾಗಿರುವಾಗ ಈಗಲೇ ಅವರಿಗೆ ಟಿಕೆಟ್‌ ನೀಡುವ ವಿಚಾರ ಯಾಕೆ? ಕೋರ್ಟಿನ ತೀರ್ಪು ಪ್ರಕಟವಾಗಲಿ. ಬಿಜೆಪಿಯಲ್ಲಿ ಟಿಕೆಟ್‌ ನೀಡಬೇಕಾದರೆ, ಪಕ್ಷದ್ದೇ ನಿಯಮ ಇದೆ. ಪಕ್ಷದ ಸದಸ್ಯರಾದವರ ಹೆಸರನ್ನು ಸ್ಥಳೀಯ ಸಮಿತಿಯಲ್ಲಿ ಚರ್ಚಿಸಿ, ಜಿಲ್ಲಾ ಹಂತದಲ್ಲಿ ಹಾಗೂ ರಾಜ್ಯ ಹಂತದಲ್ಲಿ ತೀರ್ಮಾನಿಸಿ, ಬಳಿಕ ಪಕ್ಷದ ವರಿಷ್ಠರು ಯಾರಿಗೆ ಟಿಕೆಟ್‌ ಎನ್ನುವುದನ್ನು ನಿರ್ಧರಿಸುತ್ತಾರೆ ಎಂದರು.

 

Vishwa News 24

Recent Posts

ಉಡುಪಿ : ಬಾಲಕಿ ನಾಪತ್ತೆ -vishwanews24

ಉಡುಪಿ : ಬಾಲಕಿ ನಾಪತ್ತೆ ಉಡುಪಿ : ಉಡುಪಿ ಮಹಿಳಾ ಪೊಲೀಸ್ ಠಾಣಾ ವ್ಯಾಪ್ತಿಯ ನಿವಾಸಿ ಪ್ರೀತಿ (16) ಎಂಬ…

13 hours ago

ಮಂಗಳೂರು ವಿಮಾನ ನಿಲ್ದಾಣದಲ್ಲಿ ‘ಉಬರ್’ ಸೇವೆ ಆರಂಭ -vishwanews24

ಮಂಗಳೂರು ವಿಮಾನ ನಿಲ್ದಾಣದಲ್ಲಿ 'ಉಬರ್' ಸೇವೆ ಆರಂಭ ಪ್ರಯಾಣಿಕರಿಗೆ ವೇಗವಾದ ಮತ್ತು ಸುಲಭ ಸಾರಿಗೆ ಸೌಲಭ್ಯ ಮಂಗಳೂರು: ಮಂಗಳೂರು ಅಂತರರಾಷ್ಟ್ರೀಯ…

17 hours ago

ಉಡುಪಿ ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಅತ್ಯಂತ ಖಂಡನೀಯ ಕೃತ್ಯ : ರೆನೋಲ್ಡ್ ಪ್ರವೀಣ್ ಕುಮಾರ್ -vishwanews24

ಉಡುಪಿ ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಅತ್ಯಂತ ಖಂಡನೀಯ ಕೃತ್ಯ : ರೆನೋಲ್ಡ್ ಪ್ರವೀಣ್ ಕುಮಾರ್ ಉಡುಪಿ: ಜಿಲ್ಲಾ ನ್ಯಾಯಾಲಯಕ್ಕೆ…

19 hours ago

ಉಡುಪಿ : ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಸಂದೇಶ ;   ಪೊಲೀಸರು, ಶ್ವಾನ ದಳದಿಂದ ಶೋಧ ಕಾರ್ಯಾಚರಣೆ -vishwanews24

ಉಡುಪಿ : ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಸಂದೇಶ ;   ಪೊಲೀಸರು, ಶ್ವಾನ ದಳದಿಂದ ಶೋಧ ಕಾರ್ಯಾಚರಣೆ ಉಡುಪಿ: ಉಡುಪಿ…

20 hours ago

ಇಂದಿನಿಂದ ಟೆಲಿಗ್ರಾಮ್ ಮೇಲಿನ ನಿಷೇಧ ತೆರವು: ಮೆಸೇಜ್ ಎಡಿಟಿಂಗ್ ನಿರ್ಬಂಧ ಜೂ. 30ರವರೆಗೆ ಮುಂದುವರಿಕೆ -vishwanews24

ಇಂದಿನಿಂದ ಟೆಲಿಗ್ರಾಮ್ ಮೇಲಿನ ನಿಷೇಧ ತೆರವು: ಮೆಸೇಜ್ ಎಡಿಟಿಂಗ್ ನಿರ್ಬಂಧ ಜೂ. 30ರವರೆಗೆ ಮುಂದುವರಿಕೆ ನವದೆಹಲಿ : ನೀಟ್ -ಯುಜಿ…

21 hours ago

246 ಕೋಟಿ ರೂ.ಗಳ 46 ಯೋಜನೆಗಳು ರದ್ದು; ದೇವಸ್ಥಾನಗಳ ಹಣ ಬೇರೆ ಕೆಲಸಕ್ಕೆ ಬಳಸುವಂತಿಲ್ಲ: ಸಿಎಂ ವಿಜಯ್ -vishwanews24

246 ಕೋಟಿ ರೂ.ಗಳ 46 ಯೋಜನೆಗಳು ರದ್ದು; ದೇವಸ್ಥಾನಗಳ ಹಣ ಬೇರೆ ಕೆಲಸಕ್ಕೆ ಬಳಸುವಂತಿಲ್ಲ: ಸಿಎಂ ವಿಜಯ್ ಚೆನ್ನೈ: ತಮಿಳುನಾಡಿನಾದ್ಯಂತ…

21 hours ago