ಬೆಂಗಳೂರು: ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ವಿರುದ್ಧ ಪೋಕ್ಸೋ ಪ್ರಕರಣದ ಬಗ್ಗೆ ಮಾಹಿತಿ ಗೊತ್ತಿಲ್ಲ. ಮಾಧ್ಯಮಗಳ ಮೂಲಕ ನೋಡಿದೆ. ಯಡಿಯೂರಪ್ಪ ಅವರ ದೀರ್ಘ ಕಾಲದ ರಾಜಕಾರಣ ನೋಡಿದ್ದೇನೆ. ಇಂತಹ ಆರೋಪಗಳು ಯಾವತ್ತೂ ಕೇಳಿಬಂದಿರಲಿಲ್ಲ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ತಿಳಿಸಿದರು.
ಪೋಕ್ಸೋ ಪ್ರಕರಣದಲ್ಲಿ ಬಿಎಸ್ ಯಡಿಯೂರಪ್ಪ ವಿರುದ್ಧ ಕೋರ್ಟ್ ಜಾಮೀನುರಹಿತ ಬಂಧನ ವಾರೆಂಟ್ ಹೊರಡಿಸಿರುವ ವಿಚಾರ ಸಂಬಂಧ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಅವರು, ಹಿಂದೆ ಎಂದೂ ಬರದಿದ್ದ ಪ್ರಕರಣಗಳು ಈಗ ಯಾಕೆ ಬರ್ತಿವೆ? ಇದರಲ್ಲಿ ರಾಜ್ಯ ಸರ್ಕಾರದ ದ್ವೇಷ ರಾಜಕಾರಣದ ಪಾತ್ರ ಇದೆಯಾ? ಇದರ ಬಗ್ಗೆ ಗೊತ್ತಿಲ್ಲ. ಆದರೆ ನ್ಯಾಯಾಲಯ ಖಂಡಿತವಾಗಿ ನೆಲದ ಕಾನೂನು ಎತ್ತಿ ಹಿಡಿಯಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. ಹಿರಿಯ ನಾಯಕ ಯಡಿಯೂರಪ್ಪ ವಿರುದ್ಧ ಈ ಆರೋಪ ಯಾಕೆ ಬಂತು ಅಂತ ಜನ ಗಮನಿಸ್ತಿದ್ದಾರೆ. ಕಾಂಗ್ರೆಸ್ ಸರ್ಕಾರ ಎಲ್ಲರ ಮೇಲೆ ಕೇಸ್ ಹಾಕುವಂತಹ ಪ್ರಕರಣಗಳನ್ನು ಕೂಡಾ ಜನ ಗಮನಿಸ್ತಿದ್ದಾರೆ, ಕಾದು ನೋಡೋಣ ಎಂದರು.
ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್ಪೋರ್ಟ್…
ದೆಹಲಿ-ಪುಣೆ ಸ್ಪೈಸ್ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್ಜೆಟ್ (Spice Jet) ವಿಮಾನದಲ್ಲಿ…
ಪರಪ್ಪನ ಅಗ್ರಹಾರ ಕಾರಾಗೃಹದ ಮೇಲೆ ಸಿಸಿಬಿ ದಾಳಿ ಮಾಡಿಸಿದ್ದು ನಾನೇ .. ಜೈಲಿನಲ್ಲಿನ ಕೆಲವು ಅಧಿಕಾರಿಗಳು ತಮ್ಮ ಹಳೆಯ ಚಾಳಿ…
ಕಾಸರಗೋಡು: ಸ್ನೇಹಿತರೊಂದಿಗೆ ಕೆರೆಗೆ ಸ್ನಾನಕ್ಕೆ ತೆರಳಿದ್ದ 8ನೇ ತರಗತಿ ವಿದ್ಯಾರ್ಥಿ ನೀರಿನಲ್ಲಿ ಮುಳುಗಿ ಸಾವು ಕಾಸರಗೋಡು: ಸ್ನೇಹಿತರೊಂದಿಗೆ ಕೆರೆಗೆ ಸ್ನಾನಕ್ಕೆ…
ರಾಜ್ಯಾದ್ಯಂತ 1 ವರ್ಷ ಗುಟ್ಕಾ, ಪಾನ್ ಮಸಾಲಾ ಮಾರಾಟ ನಿಷೇಧ ಬೆಂಗಳೂರು: ಕರ್ನಾಟಕ ಸರ್ಕಾರವು ತಂಬಾಕು ಮತ್ತು ನಿಕೋಟಿನ್ ಹೊಂದಿರುವ…
ಉಡುಪಿ : ಶ್ರೀ ಕೃಷ್ಣ ಮಠಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದ ಅಣ್ಣಾಮಲೈ ಉಡುಪಿ: ಮಾಜಿ ಐಪಿಎಸ್ ಅಧಿಕಾರಿ…