Featured

ಯಡಿಯೂರಪ್ಪ ಅವರ ಸರ್ಕಾರದಲ್ಲಿ ಒಬ್ಬನೇ ಒಬ್ಬ ಪ್ರಾಮಾಣಿಕ ಸಚಿವ ಇಲ್ಲ : ಎಚ್ ಡಿ ಕುಮಾರಸ್ವಾಮಿ -Vishwanews24

ಬೆಂಗಳೂರು: ‘ಹುಣಸೂರು ಕ್ಷೇತ್ರದ ಉಪ ಚುನಾವಣೆ ಸಂಬಂಧ ನಡೆದ ಸಭೆಯ ಬಳಿಕ ಅವರು ಸುದ್ದಿಗಾರರೊಂದಿಗೆ ಮಾತನಾಡಿದ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ‘ಡಿಕೆ ಶಿವಕುಮಾರ್ ಮತ್ತು ನನ್ನ ವಿರುದ್ಧ ಆರೋಪ ಇದ್ದರೆ ದೂರು ನೀಡಲಿ.  ಎಂದು ಕಿಡಿಕಾರಿದರು.

ಯಡಿಯೂರಪ್ಪ ಅವರ ಸರ್ಕಾರದಲ್ಲಿ ಒಬ್ಬನೇ ಒಬ್ಬ ಪ್ರಾಮಾಣಿಕ ಸಚಿವ ಇಲ್ಲ ಎಂದು ಟೀಕಿಸಿದರು. ‘ವಿದೇಶದಲ್ಲಿದ್ದ ಐಎಂಎ ಮುಖ್ಯಸ್ಥನನ್ನು ರಾಜ್ಯಕ್ಕೆ ಕರೆದುಕೊಂಡು ಬಂದವರು ನಮ್ಮ ಪೊಲೀಸರು. ಆದರೆ, ಆತನನ್ನು ಕೇಂದ್ರದ ತನಿಖಾಧಿಕಾರಿಗಳು 15 ದಿನ ತಮ್ಮ ವಶದಲ್ಲಿ ಏಕೆ ಇರಿಸಿಕೊಂಡರು ಎನ್ನುವುದು ನನಗ ಗೊತ್ತಿದೆ. ಸೂಕ್ತ ಸಮಯದಲ್ಲಿ ಈ ಎಲ್ಲ ವಿಚಾರಗಳನ್ನು ಬಹಿರಂಗಪಡಿಸುತ್ತೇನೆ’ ಎಂದು ಹೇಳಿದರು.

‘ರಾಜ್ಯದಲ್ಲಿ ಬೇರೆ ಪಕ್ಷದ ಶಾಸಕರನ್ನು ಖರೀದಿಸುವ ಪ್ರಯತ್ನಗಳನ್ನು ಬಿಜೆಪಿ 2008ರಿಂದಲೂ ನಡೆಸುತ್ತಲೇ ಇದೆ. ಇದಕ್ಕಾಗಿ ಕೋಟಿಗಟ್ಟಲೆ ಹಣ ಹರಿಸಲಾಗಿದೆ. ಇದು ಐಟಿ, ಇಡಿ ಅಧಿಕಾರಿಗಳ ಕಣ್ಣಿಗೆ ಕಾಣಿಸಲಿಲ್ಲವೇ? ಅವರೇನು ಸತ್ತಿದ್ದರೇ?’ ಎಂದು ಆಕ್ರೋಶ ವ್ಯಕ್ತಪಡಿಸಿದರು. ‘

ಮಾಜಿ ಸಿವಿಸಿ ವಿಠ್ಠಲ್ ಅವರು ಭ್ರಷ್ಟಾಚಾರದ ಕುರಿತು ಬರೆದಿರುವ ಪುಸ್ತಕದಲ್ಲಿ ಕೇಂದ್ರ ಸರ್ಕಾರವು ತನಗಾಗದವರನ್ನು ಕಟ್ಟಿಹಾಕಲು ಕೇಂದ್ರದ ಸಂಸ್ಥೆಗಳನ್ನು ಬಳಸಿಕೊಂಡು ಹೇಗೆಲ್ಲ ದೌರ್ಜನ್ಯಗಳನ್ನು ಎಸಗುತ್ತಿದೆ ಎಂಬುದನ್ನು ವಿವರವಾಗಿ ಹೇಳಿದ್ದಾರೆ. ಇಂದು ದೇಶದಲ್ಲಿ ಅದೇ ಪರಿಸ್ಥಿತಿ ಉಂಟಾಗಿದೆ’ ಎಂದು ಹೇಳಿದರು.

Vishwa News 24

Recent Posts

ಕುದುರೆಮುಖ ಆಫ್ ರೋಡಿಂಗ್ ಚಟುವಟಿಕೆ ವಿರುದ್ಧ ತೀವ್ರ ಆಕ್ರೋಶ – vishwanews24

ಕುದುರೆಮುಖದಲ್ಲಿ ಅನಧಿಕೃತ ಜೀಪುಗಳ ಆಫ್ ರೋಡಿಂಗ್ .. ನಿಷೇಧಿಸುವಂತೆ ಜಿಲ್ಲಾಡಳಿತಕ್ಕೆ ಸ್ಥಳೀಯರು, ಪರಿಸರ ಪ್ರೇಮಿಗಳ ಒತ್ತಾಯ ಮೋಜು-ಮಸ್ತಿಗಾಗಿ ಸೂಕ್ಷ್ಮ ಪರಿಸರದಲ್ಲಿ…

17 minutes ago

ಕುಂದಾಪುರ: ಮನೆಯ ಬಾಗಿಲು ಮುರಿದು ಒಳನುಗ್ಗಿದ ಕಳ್ಳರು; ಚಿನ್ನಾಭರಣ, ನಗದು ಕಳವು – vishwanews24

ಕುಂದಾಪುರ: ಮನೆಯ ಬಾಗಿಲು ಮುರಿದು ಒಳನುಗ್ಗಿದ ಕಳ್ಳರು; ಚಿನ್ನಾಭರಣ, ನಗದು ಕಳವು ಕುಂದಾಪುರ: ಕುಂದಾಪುರದ ಬೊಬ್ಬರ್ಯನಕಟ್ಟೆಯ ಮನೆಯಲ್ಲಿ ಯಾರೂ ಇಲ್ಲದ…

34 minutes ago

ಕರ್ನಾಟಕ ವಿಧಾನಸಭೆ ನೂತನ ಸ್ಪೀಕರ್​ ಆಗಿ ಜಿ.ಎಸ್. ಪಾಟೀಲ್ ಅವಿರೋಧ ಆಯ್ಕೆ – vishwanews24

ಕರ್ನಾಟಕ ವಿಧಾನಸಭೆ ಸ್ಪೀಕರ್​ ಆಗಿ ಜಿ.ಎಸ್. ಪಾಟೀಲ್ ಅವಿರೋಧ ಆಯ್ಕೆ ಬೆಂಗಳೂರು: ಕರ್ನಾಟಕ ವಿಧಾನಸಭಾಧ್ಯಕ್ಷರಾಗಿ ಗುರುಪಾದಗೌಡ ಸಂಗನಗೌಡ ಪಾಟೀಲ (ಜಿ.ಎಸ್.ಪಾಟೀಲ್)…

50 minutes ago

ನಿರ್ಮಾಣ ಹಂತದಲ್ಲಿದ್ದ ಸುರಂಗದ ಒಳಗೆ ನುಗ್ಗಿದ ನೀರು : 7 ಕಾರ್ಮಿಕರ ದಾರುಣ ಸಾವು ; 14ಕ್ಕೂ ಹೆಚ್ಚು ಮಂದಿಗೆ ಗಂಭೀರ ಗಾಯ – vishwanews24

ನಿರ್ಮಾಣ ಹಂತದಲ್ಲಿದ್ದ ಸುರಂಗದ ಒಳಗೆ ನುಗ್ಗಿದ ನೀರು .. 7 ಕಾರ್ಮಿಕರ ದಾರುಣ ಸಾವು ; 14ಕ್ಕೂ ಹೆಚ್ಚು ಮಂದಿಗೆ…

1 hour ago

ಧ್ವಜಾರೋಹಣಕ್ಕೆ ವಿನಾಯಿತಿ ಕೋರಿ ಸಿಎಂಗೆ ಸಚಿವ ಜಮೀರ್ ಪತ್ರ ; ಮನವಿಗೆ  ಸ್ಪಂದಿಸಿದ ಸಿಎಂ  – vishwanews24

ಧ್ವಜಾರೋಹಣಕ್ಕೆ ವಿನಾಯಿತಿ ಕೋರಿ ಸಿಎಂಗೆ ಸಚಿವ ಜಮೀರ್ ಪತ್ರ ; ಮನವಿಗೆ  ಸ್ಪಂದಿಸಿದ ಸಿಎಂ  ಚುನಾವಣೆ, ಪಕ್ಷ ಸಂಘಟನೆ ಕಾರಣ…

1 hour ago

ಮನೆ ತೆರಿಗೆ ಲಕ್ಷಾಂತರ ಹಣ ದುರುಪಯೋಗ: ಶಿವಪುರ ಗ್ರಾ.ಪಂ ಸಿಬ್ಬಂದಿ ವಜಾ – vishwanews24

ಮನೆ ತೆರಿಗೆ ಲಕ್ಷಾಂತರ ಹಣ ದುರುಪಯೋಗ: ಶಿವಪುರ ಗ್ರಾಪಂ ಸಿಬ್ಬಂದಿ ವಜಾ ಉಡುಪಿ: ಹೆಬ್ರಿ ತಾಲ್ಲೂಕಿನ ಶಿವಪುರ ಗ್ರಾಮ ಪಂಚಾಯಿತಿಯಲ್ಲಿ…

1 hour ago