ಆಪರೇಷನ್ ಕಮಲದ ಮೂಲಕ ಅನೈತಿಕವಾಗಿ ಬಂದಿರುವ ಕೂಸು ಈ ಸರ್ಕಾರ. ಕಾಂಗ್ರೆಸ್,ಜೆಡಿಎಸ್ ನಿಂದ 17 ಶಾಸಕರನ್ನು ಆಪರೇಷನ್ ಮಾಡಿದ್ದೀರೆ. ಇಲ್ಲವಾಗಿದ್ರೆ ಯಡಿಯೂರಪ್ಪ ಅಲ್ಪಾವಧಿ ಸಿಎಂ ಆಗಿ ದಾಖಲೆ ಮಾಡುತ್ತಿದ್ದರು. ಯಡಿಯೂರಪ್ಪ ಇಂದು ಸಿಎಂ ಆಗೋಕೆ ಜನಾದೇಶ ಕಾರಣವಲ್ಲ ಎಂಬುದಾಗಿ ಮಾಜಿ ಸಿಎಂ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ.
ವಿಧಾನಸಭೆಯಲ್ಲಿ ರಾಜ್ಯ ಬಿಜೆಪಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಒಂದು ದಿನದಲ್ಲೇ ರಾಜ್ಯಪಾಲರ ಭಾಷಣದ ಚರ್ಚೆ ಮುಗಿಸೋಕೆ ಆಗಲ್ಲ. ಅದಕ್ಕೆ ಉತ್ತರ ಪಡೆದುಕೊಳ್ಳೋಕೆ ಸಾಧ್ಯವಿಲ್ಲ. ಇದು ಸದಸ್ಯರ ಹಕ್ಕು ಮೊಟಕು ಮಾಡಿದಂತೆ. ರಾಜ್ಯಪಾಲರ ಭಾಷಣದ ಚರ್ಚೆಗೆ ಕನಿಷ್ಟ 10 ದಿನ ನಿಗದಿ ಮಾಡಬೇಕು. ಇಲ್ಲವಾದರೆ ಇದೊಂದು ಅಣಕವಾಗುತ್ತದೆ. ರಾಜ್ಯಪಾಲರು ಭಾಷಣ ಮಾಡೋದು,ಉತ್ತರ ಕೊಡುವುದು. ಕೊನೆಗೆ ನಾವು ಸಭಾತ್ಯಾಗ ಮಾಡೋದು ಅಷ್ಟೇ ಆಗುತ್ತದೆ. ಬಜೆಟ್ ಅಧಿವೇಶನದಲ್ಲೂ ಚರ್ಚೆ ಮಾಡಿ, ಉತ್ತರ ಕೊಡಬಹುದು ಎಂಬುದಾಗಿ ಹೇಳಿದರು.
ಇನ್ನೂ ಮುಂದುವರೆದು ರಾಜ್ಯ ಬಿಜೆಪಿ ನೇತೃತ್ವದ ಸರ್ಕಾರ ಅಸ್ಥಿತ್ವಕ್ಕೆ ಬಂದ ಬಗೆಯನ್ನು ವಿವರಿಸಿದ ಅವರು, ಈ ಸರ್ಕಾರ 17 ಶಾಸಕರು ರಾಜೀನಾಮೆ ಕೊಟ್ಟಿದ್ದರಿಂದ ಬಂದಿದ್ದು. ಬಿಜೆಪಿಯವರು ಜನಾದೇಶದಿಂದ ಬಂದಿದ್ದೇವೆ ಎನ್ನಬಾರದು. ಆಪರೇಷನ್ ಕಮಲದಿಂದ ಬಂದಿದ್ದೇವೆ ಎನ್ನಬೇಕು ಎಂಬುದಾಗಿ ಸರ್ಕಾರವನ್ನ ಲೇವಡಿ ಮಾಡಿದರು.
ಮಲ್ಪೆ : ಸೈಂಟ್ಮೇರೀಸ್ ದ್ವೀಪ ಪ್ರವೇಶ ಹಾಗೂ ಜಲ ಕ್ರೀಡೆಗಳಿಗೆ ಮೇ 16ರಿಂದ ಸೆಪ್ಟೆಂಬರ್15ರ ವರೆಗೆ ಸಂಪೂರ್ಣ ನಿಷೇಧ ಮಲ್ಪೆ:…
ಜೂನ್ 21ರಂದು ನೀಟ್ ಯುಜಿ ಮರು ಪರೀಕ್ಷೆ ನವದೆಹಲಿ: ಜೂನ್ 21 ರಂದು ನೀಟ್–ಯುಜಿ ಮರು ಪರೀಕ್ಷೆ ನಡೆಸಲಾಗುವುದು ರಾಷ್ಟ್ರೀಯ…
ಉಡುಪಿ ಜಿಲ್ಲೆಯ ನಿರ್ಲಕ್ಷ್ಯ : ಮೇ 16ರಂದು ಜಿಲ್ಲಾ ಉಸ್ತುವಾರಿ ಸಚಿವರಿಗೆ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ : ಪೃಥ್ವಿರಾಜ್…
ಸಾಂಪ್ರದಾಯಿಕ ಧಾರ್ಮಿಕ ಸಂಕೇತಗಳನ್ನು ಧರಿಸಬಹುದು, ಹೊಸದಾಗಿ ಮಾಡುವಂತಿಲ್ಲ : ಸಿಎಂ ಸ್ಪಷ್ಟನೆ ಮೈಸೂರು : "ಪ್ರಾಥಮಿಕ ತರಗತಿಯಿಂದ 12ನೇ ತರಗತಿಯವರೆಗೆ…
ಮದ್ಯ ಖರೀದಿ, ಮಾರಾಟ ಮಾಡಲು 21 ವರ್ಷ ಕಡ್ಡಾಯ : ಸಿಎಂ ವಿಜಯ್ ಸರ್ಕಾರ ಆದೇಶ ಚೆನ್ನೈ: ಇನ್ನು ಮುಂದೆ…
ಇಂದಿರಾ ಗಾಂಧಿ ನಂತರ ಯಾರಾದ್ರೂ ಮಾಸ್ ಲೀಡರ್ ಇದ್ರೆ, ಅದು ಮೋದಿ ಮಾತ್ರ: ಕೆ.ಎನ್ ರಾಜಣ್ಣ ನಾನು ಮೋದಿಯವರನ್ನು ಹೊಗಳುತ್ತಿಲ್ಲ.…