ಆಪರೇಷನ್ ಕಮಲದ ಮೂಲಕ ಅನೈತಿಕವಾಗಿ ಬಂದಿರುವ ಕೂಸು ಈ ಸರ್ಕಾರ. ಕಾಂಗ್ರೆಸ್,ಜೆಡಿಎಸ್ ನಿಂದ 17 ಶಾಸಕರನ್ನು ಆಪರೇಷನ್ ಮಾಡಿದ್ದೀರೆ. ಇಲ್ಲವಾಗಿದ್ರೆ ಯಡಿಯೂರಪ್ಪ ಅಲ್ಪಾವಧಿ ಸಿಎಂ ಆಗಿ ದಾಖಲೆ ಮಾಡುತ್ತಿದ್ದರು. ಯಡಿಯೂರಪ್ಪ ಇಂದು ಸಿಎಂ ಆಗೋಕೆ ಜನಾದೇಶ ಕಾರಣವಲ್ಲ ಎಂಬುದಾಗಿ ಮಾಜಿ ಸಿಎಂ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ.
ವಿಧಾನಸಭೆಯಲ್ಲಿ ರಾಜ್ಯ ಬಿಜೆಪಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಒಂದು ದಿನದಲ್ಲೇ ರಾಜ್ಯಪಾಲರ ಭಾಷಣದ ಚರ್ಚೆ ಮುಗಿಸೋಕೆ ಆಗಲ್ಲ. ಅದಕ್ಕೆ ಉತ್ತರ ಪಡೆದುಕೊಳ್ಳೋಕೆ ಸಾಧ್ಯವಿಲ್ಲ. ಇದು ಸದಸ್ಯರ ಹಕ್ಕು ಮೊಟಕು ಮಾಡಿದಂತೆ. ರಾಜ್ಯಪಾಲರ ಭಾಷಣದ ಚರ್ಚೆಗೆ ಕನಿಷ್ಟ 10 ದಿನ ನಿಗದಿ ಮಾಡಬೇಕು. ಇಲ್ಲವಾದರೆ ಇದೊಂದು ಅಣಕವಾಗುತ್ತದೆ. ರಾಜ್ಯಪಾಲರು ಭಾಷಣ ಮಾಡೋದು,ಉತ್ತರ ಕೊಡುವುದು. ಕೊನೆಗೆ ನಾವು ಸಭಾತ್ಯಾಗ ಮಾಡೋದು ಅಷ್ಟೇ ಆಗುತ್ತದೆ. ಬಜೆಟ್ ಅಧಿವೇಶನದಲ್ಲೂ ಚರ್ಚೆ ಮಾಡಿ, ಉತ್ತರ ಕೊಡಬಹುದು ಎಂಬುದಾಗಿ ಹೇಳಿದರು.
ಇನ್ನೂ ಮುಂದುವರೆದು ರಾಜ್ಯ ಬಿಜೆಪಿ ನೇತೃತ್ವದ ಸರ್ಕಾರ ಅಸ್ಥಿತ್ವಕ್ಕೆ ಬಂದ ಬಗೆಯನ್ನು ವಿವರಿಸಿದ ಅವರು, ಈ ಸರ್ಕಾರ 17 ಶಾಸಕರು ರಾಜೀನಾಮೆ ಕೊಟ್ಟಿದ್ದರಿಂದ ಬಂದಿದ್ದು. ಬಿಜೆಪಿಯವರು ಜನಾದೇಶದಿಂದ ಬಂದಿದ್ದೇವೆ ಎನ್ನಬಾರದು. ಆಪರೇಷನ್ ಕಮಲದಿಂದ ಬಂದಿದ್ದೇವೆ ಎನ್ನಬೇಕು ಎಂಬುದಾಗಿ ಸರ್ಕಾರವನ್ನ ಲೇವಡಿ ಮಾಡಿದರು.
ತುಳುಕೂಟ ಉಡುಪಿ: 2026–27ನೇ ಸಾಲಿನ ಕಾರ್ಯಕಾರಿ ಸಮಿತಿ ಪ್ರಕಟ- ಅಧ್ಯಕ್ಷರಾಗಿ ಬಿ. ಜಯಕರ ಶೆಟ್ಟಿ ಇಂದ್ರಾಳಿ ತುಳು ಭಾಷೆ, ಸಾಹಿತ್ಯ,…
ಎಲ್ಪಿಜಿ: ಇ-ಕೆವೈಸಿ ದಿನಾಂಕ ಆ. 23ರ ವರೆಗೆ ವಿಸ್ತರಣೆ ಉಡುಪಿ: ಎಲ್ಪಿಜಿ ಗ್ರಾಹಕರಿಗೆ ಇ-ಕೆವೈಸಿ ಪೂರ್ಣ ಗೊಳಿಸಲು ನೀಡಲಾಗಿದ್ದ ಗಡುವನ್ನು ಆ.…
ಚಿತ್ರದುರ್ಗ: ಚಾಲಕನ ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಖಾಸಗಿ ಬಸ್ ; ಮೂವರು ದುರ್ಮರಣ 15ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ…
ಕಡಬ: ದ್ವಿಚಕ್ರ ವಾಹನದ ಮೇಲೆ ಬಿದ್ದ ಮರ ; ಹಿಂಬದಿ ಸವಾರನಿಗೆ ಗಂಭೀರ ಗಾಯ ಕಡಬ : ಗುಂಡ್ಯ-ಸುಳ್ಯ ರಾಜ್ಯ…
ಉಡುಪಿ: ಡೇವಿಡ್ ಡಿಸೋಜಾ ಕೊಲೆ ಪ್ರಕರಣ: ಉತ್ತರಾಖಂಡದಲ್ಲಿ ಮತ್ತೊಬ್ಬ ಆರೋಪಿ ಬಂಧನ ಉಡುಪಿ : ಕಾಪು ಜಿಲ್ಲೆಯ ಮುದರಂಗಡಿಯ ಸೇಂಟ್…
ಬ್ರಹ್ಮಾವರ: ಖಾಸಗಿ ಬಸ್ ಬೆಂಕಿಗಾಹುತಿ ; ಅದೃಷ್ಟವಶಾತ್ ಏಳು ಪ್ರಯಾಣಿಕರು ಪಾರು ಉಡುಪಿ: ಉಡುಪಿಯಿಂದ ಸಾಗರಕ್ಕೆ ತೆರಳುತ್ತಿದ್ದ ಖಾಸಗಿ ಬಸ್ಸೊಂದು…