ಬೆಂಗಳೂರು,: ಯಡಿಯೂರಪ್ಪ ಉತ್ತಮ ಆಡಳಿತ ನೀಡುವುದಾಗಿ ಹೇಳಿದ್ದಾರೆ. ಅದನ್ನು ಸ್ವಾಗತಿಸುತ್ತೇನೆ. ದ್ವೇಷ ರಾಜಕಾರಣ ಮಾಡುವುದಿಲ್ಲ ಎಂದಿದ್ದಾರೆ. ಅದನ್ನೂ ಸ್ವಾಗತಿಸುತ್ತೇನೆ. ಜನಸೇವೆ ಮಾಡಲು ಪ್ರಾಮಾಣಿಕವಾಗಿರಬೇಕು. ನನ್ನ ಅವಧಿಯಲ್ಲಿ ನಾನು ಆ ಪ್ರಯತ್ನ ಮಾಡಿದ್ದೇನೆ. ಕುಮಾರ ಸ್ವಾಮಿಯವರು ಪ್ರಾಮಾಣಿಕವಾಗಿ ಕೆಲಸ ಮಾಡಿದ್ದಾರೆ. ರಾಜ್ಯದಲ್ಲಿ ಆಡಳಿತ ಯಂತ್ರ ಕುಸಿದಿತ್ತು ಎಂಬ ಆರೋಪಗಳು ಸುಳ್ಳು. ಮೈತ್ರಿ ಸರಕಾರ ಉತ್ತಮವಾಗಿತ್ತು. ಕೆಲಸ ಮಾಡಿತ್ತು ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ಯಡಿಯೂರಪ್ಪ ಜನಾದೇಶದಿಂದ ಮುಖ್ಯಮಂತ್ರಿಯಾಗಿಲ್ಲ. ಅವರು ಒಮ್ಮೆಯೂ ಜನಾದೇಶದಿಂದ ಮುಖ್ಯಮಂತ್ರಿಯಾಗಿಲ್ಲ. ಪ್ರತಿಬಾರಿಯೂ ಬಹುಮತದ ಕೊರತೆಯೊಂದಿಗೆ ಸರಕಾರ ರಚಿಸಿದ್ದಾರೆ. ನೀವು ಮುಖ್ಯಮಂತ್ರಿಯಾಗಿ ಹೆಚ್ಚು ದಿನ ಇರಬೇಕೆನ್ನುವುದು ನನ್ನ ಆಶಯ. ಅತೃಪ್ತರನ್ನು ಕಟ್ಟಿಕೊಂಡು ಸ್ಥಿರ ಸರಕಾರ ನೀಡಲು ಸಾಧ್ಯವೇ? ನೀವು ಬಹುದಿನ ಮುಖ್ಯಮಂತ್ರಿಯಾಗಿ ಇರುತ್ತೀರೆಂಬ ಖಾತ್ರಿ ನನಗಿಲ್ಲ. ಬಿಜೆಪಿಗೆ ಬಹುಮತವೇ ಇಲ್ಲ. ಅತೃಪ್ತರ ಮೂಲಕ ಸರಕಾರ ರಚನೆ ಮಾಡಿದೆ. ಪ್ರಜಾಪ್ರಭುತ್ವಕ್ಕೆ ವಿರುದ್ಧವಾಗಿ ಅಧಿಕಾರಕ್ಕೇರಿರುವ ಬಿಜೆಪಿಯ ವಿಶ್ವಾಸ ಮತಕ್ಕೆ ನಾವು ಬೆಂಬಲ ನೀಡುವುದಿಲ್ಲ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.
ಬೆಳಪು ಪ್ರದೇಶದಲ್ಲಿ ಎಲ್ಲಾ ಅಗತ್ಯ ಸೌಲಭ್ಯಗಳೊಂದಿಗೆ ಘಟಕ ನಿರ್ಮಿಸಿದರೆ ನಮ್ಮಿಂದ ಯಾವುದೇ ವಿರೋಧ ಇರುವುದಿಲ್ಲ : ದೇವಿಪ್ರಸಾದ್ ಶೆಟ್ಟಿ ಮೂಳೂರು…
ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ ಬೆಳಗಾವಿ: ಪ್ರಿಯಕರನ ಜೊತೆ…
ದೇಶದ ಜಾತ್ಯತೀತ ಮೌಲ್ಯಗಳನ್ನು ರಕ್ಷಿಸಲು ಕಾಂಗ್ರೆಸ್ ಪಕ್ಷ ಸದಾ ಸಮಾನ ಚಿಂತನೆಯ ಪಕ್ಷಗಳೊಂದಿಗೆ ಕೈಜೋಡಿಸಿದೆ : ಬಿ.ಕೆ.ಹರಿಪ್ರಸಾದ್ ಬೆಂಗಳೂರು: ‘ಬಿಜೆಪಿ…
ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ ಪಡುಬಿದ್ರಿ: ಸನಾತನ ಫೌಂಡೇಶನ್ನ ಅಧ್ಯಕ್ಷ,…
ವಿವಾಹಿತ ಮಹಿಳೆ ಜತೆ ಲಿವ್ ಇನ್ ರಿಲೇಶನ್ಶಿಪ್ನಲ್ಲಿದ್ದ ಯುವಕ ಶವವಾಗಿ ಪತ್ತೆ ಬೆಂಗಳೂರು: ಲಿವ್ ಇನ್ ರಿಲೇಶನ್ಶಿಪ್ನಲ್ಲಿದ್ದ ಯುವಕ ನೇಣುಬಿಗಿದ…
ಪಶ್ಚಿಮ ಬಂಗಾಳದ ರಾಜಕೀಯ ಇತಿಹಾಸದಲ್ಲಿ ಹೊಸ ಪರ್ವ.. ಬಿಜೆಪಿ ಮೊದಲ ಸಿಎಂ ಆಗಿ ಪ್ರಮಾಣ ಸ್ವೀಕಾರ.. ಐತಿಹಾಸಿಕ ಕ್ಷಣಕ್ಕೆ ಮೋದಿ,…