ಬೆಂಗಳೂರು,: ಯಡಿಯೂರಪ್ಪ ಉತ್ತಮ ಆಡಳಿತ ನೀಡುವುದಾಗಿ ಹೇಳಿದ್ದಾರೆ. ಅದನ್ನು ಸ್ವಾಗತಿಸುತ್ತೇನೆ. ದ್ವೇಷ ರಾಜಕಾರಣ ಮಾಡುವುದಿಲ್ಲ ಎಂದಿದ್ದಾರೆ. ಅದನ್ನೂ ಸ್ವಾಗತಿಸುತ್ತೇನೆ. ಜನಸೇವೆ ಮಾಡಲು ಪ್ರಾಮಾಣಿಕವಾಗಿರಬೇಕು. ನನ್ನ ಅವಧಿಯಲ್ಲಿ ನಾನು ಆ ಪ್ರಯತ್ನ ಮಾಡಿದ್ದೇನೆ. ಕುಮಾರ ಸ್ವಾಮಿಯವರು ಪ್ರಾಮಾಣಿಕವಾಗಿ ಕೆಲಸ ಮಾಡಿದ್ದಾರೆ. ರಾಜ್ಯದಲ್ಲಿ ಆಡಳಿತ ಯಂತ್ರ ಕುಸಿದಿತ್ತು ಎಂಬ ಆರೋಪಗಳು ಸುಳ್ಳು. ಮೈತ್ರಿ ಸರಕಾರ ಉತ್ತಮವಾಗಿತ್ತು. ಕೆಲಸ ಮಾಡಿತ್ತು ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ಯಡಿಯೂರಪ್ಪ ಜನಾದೇಶದಿಂದ ಮುಖ್ಯಮಂತ್ರಿಯಾಗಿಲ್ಲ. ಅವರು ಒಮ್ಮೆಯೂ ಜನಾದೇಶದಿಂದ ಮುಖ್ಯಮಂತ್ರಿಯಾಗಿಲ್ಲ. ಪ್ರತಿಬಾರಿಯೂ ಬಹುಮತದ ಕೊರತೆಯೊಂದಿಗೆ ಸರಕಾರ ರಚಿಸಿದ್ದಾರೆ. ನೀವು ಮುಖ್ಯಮಂತ್ರಿಯಾಗಿ ಹೆಚ್ಚು ದಿನ ಇರಬೇಕೆನ್ನುವುದು ನನ್ನ ಆಶಯ. ಅತೃಪ್ತರನ್ನು ಕಟ್ಟಿಕೊಂಡು ಸ್ಥಿರ ಸರಕಾರ ನೀಡಲು ಸಾಧ್ಯವೇ? ನೀವು ಬಹುದಿನ ಮುಖ್ಯಮಂತ್ರಿಯಾಗಿ ಇರುತ್ತೀರೆಂಬ ಖಾತ್ರಿ ನನಗಿಲ್ಲ. ಬಿಜೆಪಿಗೆ ಬಹುಮತವೇ ಇಲ್ಲ. ಅತೃಪ್ತರ ಮೂಲಕ ಸರಕಾರ ರಚನೆ ಮಾಡಿದೆ. ಪ್ರಜಾಪ್ರಭುತ್ವಕ್ಕೆ ವಿರುದ್ಧವಾಗಿ ಅಧಿಕಾರಕ್ಕೇರಿರುವ ಬಿಜೆಪಿಯ ವಿಶ್ವಾಸ ಮತಕ್ಕೆ ನಾವು ಬೆಂಬಲ ನೀಡುವುದಿಲ್ಲ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.
ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…
ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು :…
ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…
ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…
ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್ಪೋರ್ಟ್…
ದೆಹಲಿ-ಪುಣೆ ಸ್ಪೈಸ್ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್ಜೆಟ್ (Spice Jet) ವಿಮಾನದಲ್ಲಿ…