ಬೆಂಗಳೂರು,: ಯಡಿಯೂರಪ್ಪ ಉತ್ತಮ ಆಡಳಿತ ನೀಡುವುದಾಗಿ ಹೇಳಿದ್ದಾರೆ. ಅದನ್ನು ಸ್ವಾಗತಿಸುತ್ತೇನೆ. ದ್ವೇಷ ರಾಜಕಾರಣ ಮಾಡುವುದಿಲ್ಲ ಎಂದಿದ್ದಾರೆ. ಅದನ್ನೂ ಸ್ವಾಗತಿಸುತ್ತೇನೆ. ಜನಸೇವೆ ಮಾಡಲು ಪ್ರಾಮಾಣಿಕವಾಗಿರಬೇಕು. ನನ್ನ ಅವಧಿಯಲ್ಲಿ ನಾನು ಆ ಪ್ರಯತ್ನ ಮಾಡಿದ್ದೇನೆ. ಕುಮಾರ ಸ್ವಾಮಿಯವರು ಪ್ರಾಮಾಣಿಕವಾಗಿ ಕೆಲಸ ಮಾಡಿದ್ದಾರೆ. ರಾಜ್ಯದಲ್ಲಿ ಆಡಳಿತ ಯಂತ್ರ ಕುಸಿದಿತ್ತು ಎಂಬ ಆರೋಪಗಳು ಸುಳ್ಳು. ಮೈತ್ರಿ ಸರಕಾರ ಉತ್ತಮವಾಗಿತ್ತು. ಕೆಲಸ ಮಾಡಿತ್ತು ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ಯಡಿಯೂರಪ್ಪ ಜನಾದೇಶದಿಂದ ಮುಖ್ಯಮಂತ್ರಿಯಾಗಿಲ್ಲ. ಅವರು ಒಮ್ಮೆಯೂ ಜನಾದೇಶದಿಂದ ಮುಖ್ಯಮಂತ್ರಿಯಾಗಿಲ್ಲ. ಪ್ರತಿಬಾರಿಯೂ ಬಹುಮತದ ಕೊರತೆಯೊಂದಿಗೆ ಸರಕಾರ ರಚಿಸಿದ್ದಾರೆ. ನೀವು ಮುಖ್ಯಮಂತ್ರಿಯಾಗಿ ಹೆಚ್ಚು ದಿನ ಇರಬೇಕೆನ್ನುವುದು ನನ್ನ ಆಶಯ. ಅತೃಪ್ತರನ್ನು ಕಟ್ಟಿಕೊಂಡು ಸ್ಥಿರ ಸರಕಾರ ನೀಡಲು ಸಾಧ್ಯವೇ? ನೀವು ಬಹುದಿನ ಮುಖ್ಯಮಂತ್ರಿಯಾಗಿ ಇರುತ್ತೀರೆಂಬ ಖಾತ್ರಿ ನನಗಿಲ್ಲ. ಬಿಜೆಪಿಗೆ ಬಹುಮತವೇ ಇಲ್ಲ. ಅತೃಪ್ತರ ಮೂಲಕ ಸರಕಾರ ರಚನೆ ಮಾಡಿದೆ. ಪ್ರಜಾಪ್ರಭುತ್ವಕ್ಕೆ ವಿರುದ್ಧವಾಗಿ ಅಧಿಕಾರಕ್ಕೇರಿರುವ ಬಿಜೆಪಿಯ ವಿಶ್ವಾಸ ಮತಕ್ಕೆ ನಾವು ಬೆಂಬಲ ನೀಡುವುದಿಲ್ಲ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.
ಧರ್ಮಸ್ಥಳ ಪ್ರಕರಣ : ವಿಠಲ್ ಗೌಡ ವಿರುದ್ಧ ಅರೆಸ್ಟ್ ವಾರಂಟ್: ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…
ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ ಬೆಂಗಳೂರು: ಕನ್ನಡ ಸಿನಿಮಾ ರಂಗದ ಖ್ಯಾತ ನಿರ್ಮಾಪಕ ಬಾ.ಮಾ.…
ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ ಬೆಂಗಳೂರು: ಶ್ರೀರಾಮನನ್ನು ರಾಜಕೀಯವಾಗಿ ಬಳಸಿಕೊಡವರು, ಶ್ರೀರಾಮನ ಹೆಸರಿನಲ್ಲಿ ಒಂದೊಂದು…
ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು ಉಡುಪಿ: ಕಠಿಣ ಕಾನೂನು ಕ್ರಮ ಮತ್ತು ಜಾಗೃತಿ…
ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ ಚೆನ್ನೈ: ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ,…
ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ ಶಿವಮೊಗ್ಗ: ಅಯೋಧ್ಯೆ ರಾಮಮಂದಿರದ ದೇಣಿಗೆ ಲೂಟಿ ಆಗಿರುವ…