Featured

ಯಡಿಯೂರಪ್ಪ ಮತ್ತೆ ಮುಖ್ಯಮಂತ್ರಿಯಾದರೆ ನಾನು ರಾಜಕೀಯ ನಿವೃತ್ತಿ ಪಡೆಯುತ್ತೇನೆ : ಬೇಳೂರು ಗೋಪಾಲಕೃಷ್ಣ -Vishwanews24

ಶಿವಮೊಗ್ಗ : ಯಡಿಯೂರಪ್ಪ ಮತ್ತೆ ಮುಖ್ಯಮಂತ್ರಿಯಾದರೆ ನಾನು ರಾಜಕೀಯ ನಿವೃತ್ತಿ ಪಡೆಯುತ್ತೇನೆ ನಾನು ನಮ್ಮ ಮನೆದೇವರಿಗೆ ಹರಕೆ ಹೊತ್ತಿದ್ದೇನೆ. ಯಾವುದೇ ಕಾರಣಕ್ಕೂ ಅವರು ಮತ್ತೆ ಸಿಎಂ ಆಗುವುದಿಲ್ಲ. ಎಂದು ಮಾಜಿ ಶಾಸಕ ಬೇಳೂರು ಗೋಪಾಲಕೃಷ್ಣ ಶಿವಮೊಗ್ಗದಲ್ಲಿ ಪ್ರತಿಜ್ಞೆ ಮಾಡಿದ್ದಾರೆ.

ಬಿಜೆಪಿ ನಾಯಕರು ರಾಜಕೀಯವನ್ನು ಅಸ್ಥಿರ ಮಾಡಲು ಹೊರಟಿದ್ದಾರೆ. ಕಾಂಗ್ರೆಸ್​ ನಾಯಕ ಸಿದ್ದರಾಮಯ್ಯ ಮನಸು ಮಾಡಿದರೆ ಆಪರೇಷನ್ ಹಸ್ತ ಮಾಡಬಹುದು. ಹಲವು ಬಿಜೆಪಿ ಶಾಸಕರು ಅವರ ಸಂಪರ್ಕದಲ್ಲಿದ್ದಾರೆ. ಆದರೆ, ಅವರು ಆ  ಮಟ್ಟಕ್ಕೆ ಇಳಿಯುತ್ತಿಲ್ಲ ಎಂದು ಗೋಪಾಲಕೃಷ್ಣ ಬಿಜೆಪಿ ವಿರುದ್ಧ ಕಿಡಿಕಾರಿದ್ದಾರೆ.

ಯಾವುದೇ ಕಾರಣಕ್ಕೂ ಶರಾವತಿಯನ್ನು ಬೆಂಗಳೂರಿಗೆ ಕೊಂಡೊಯ್ಯಬಾರದು. ನಾನು ಕೂಡ ಹೋರಾಟಗಾರರ ತೀರ್ಮಾನಕ್ಕೆ ಬದ್ಧನಾಗಿದ್ದೇನೆ.  . ಶರಾವತಿ ನೀರನ್ನು ಬೆಂಗಳೂರಿಗೆ ಕೊಂಡೊಯ್ಯುವ ಯೋಜನೆಯನ್ನು ವಿರೋಧಿಸುವ ನಿಟ್ಟಿನಲ್ಲಿ ಬಿಜೆಪಿ ಲಾಭ ಪಡೆದುಕೊಳ್ಳಬಾರದು ಎಂದಿದ್ದಾರೆ.

ಕೇವಲ ಮೋದಿ ಹೆಸರು ಹೇಳಿಕೊಂಡು ಎಲ್ಲರೂ ಪ್ರಚಾರ ಮಾಡಿದ್ದಾರೆ. ಜನರೂ ಮೋದಿ ಮುಖ ನೋಡಿಕೊಂಡು ಮತ ಹಾಕಿದ್ದಾರೆ ಎಂಬುದನ್ನು ಇಲ್ಲಿನ ನಾಯಕರು ಮರೆಯಬಾರದು. ಈ ಹಿಂದೆ ಶೋಭಾ ಮೇಡಂ ಗೋಹತ್ಯೆ ಬಗ್ಗೆ ಮಾತನಾಡಿದ್ದರು. ಈಗ ಅವರದೇ ಸರ್ಕಾರ  ಕೇಂದ್ರದಲ್ಲಿದೆ. ರಾಷ್ಟ್ರಪತಿಗಳಿಂದ ಅಂಕಿತ ಹಾಕಿಸಿ, ಗೋ ಹತ್ಯೆ ನಿಷೇಧ ಕಾಯ್ದೆ ಜಾರಿಗೆ ತರಿಸಲಿ ಎಂದು ಸಂಸದೆ ಶೋಭಾ ಕರಂದ್ಲಾಜೆ ವಿರುದ್ಧವೂ ಬೇಳೂರು ಗೋಪಾಲಕೃಷ್ಣ ಹರಿಹಾಯ್ದಿದ್ದಾರೆ.

Vishwa News 24

Recent Posts

ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್‌ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ – vishwanews24

ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್‌ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…

3 hours ago

ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ – vishwanews24

ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು  :…

3 hours ago

ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ  – vishwanews24

ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…

4 hours ago

ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ – vishwanews24

ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…

4 hours ago

ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ – vishwanews24

ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್‌ಪೋರ್ಟ್…

5 hours ago

ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು – vishwanews24

ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್‌ಜೆಟ್ (Spice Jet) ವಿಮಾನದಲ್ಲಿ…

5 hours ago