Featured

ಯಡಿಯೂರಪ್ಪ ಮತ್ತೆ ಮುಖ್ಯಮಂತ್ರಿಯಾದರೆ ನಾನು ರಾಜಕೀಯ ನಿವೃತ್ತಿ ಪಡೆಯುತ್ತೇನೆ : ಬೇಳೂರು ಗೋಪಾಲಕೃಷ್ಣ -Vishwanews24

ಶಿವಮೊಗ್ಗ : ಯಡಿಯೂರಪ್ಪ ಮತ್ತೆ ಮುಖ್ಯಮಂತ್ರಿಯಾದರೆ ನಾನು ರಾಜಕೀಯ ನಿವೃತ್ತಿ ಪಡೆಯುತ್ತೇನೆ ನಾನು ನಮ್ಮ ಮನೆದೇವರಿಗೆ ಹರಕೆ ಹೊತ್ತಿದ್ದೇನೆ. ಯಾವುದೇ ಕಾರಣಕ್ಕೂ ಅವರು ಮತ್ತೆ ಸಿಎಂ ಆಗುವುದಿಲ್ಲ. ಎಂದು ಮಾಜಿ ಶಾಸಕ ಬೇಳೂರು ಗೋಪಾಲಕೃಷ್ಣ ಶಿವಮೊಗ್ಗದಲ್ಲಿ ಪ್ರತಿಜ್ಞೆ ಮಾಡಿದ್ದಾರೆ.

ಬಿಜೆಪಿ ನಾಯಕರು ರಾಜಕೀಯವನ್ನು ಅಸ್ಥಿರ ಮಾಡಲು ಹೊರಟಿದ್ದಾರೆ. ಕಾಂಗ್ರೆಸ್​ ನಾಯಕ ಸಿದ್ದರಾಮಯ್ಯ ಮನಸು ಮಾಡಿದರೆ ಆಪರೇಷನ್ ಹಸ್ತ ಮಾಡಬಹುದು. ಹಲವು ಬಿಜೆಪಿ ಶಾಸಕರು ಅವರ ಸಂಪರ್ಕದಲ್ಲಿದ್ದಾರೆ. ಆದರೆ, ಅವರು ಆ  ಮಟ್ಟಕ್ಕೆ ಇಳಿಯುತ್ತಿಲ್ಲ ಎಂದು ಗೋಪಾಲಕೃಷ್ಣ ಬಿಜೆಪಿ ವಿರುದ್ಧ ಕಿಡಿಕಾರಿದ್ದಾರೆ.

ಯಾವುದೇ ಕಾರಣಕ್ಕೂ ಶರಾವತಿಯನ್ನು ಬೆಂಗಳೂರಿಗೆ ಕೊಂಡೊಯ್ಯಬಾರದು. ನಾನು ಕೂಡ ಹೋರಾಟಗಾರರ ತೀರ್ಮಾನಕ್ಕೆ ಬದ್ಧನಾಗಿದ್ದೇನೆ.  . ಶರಾವತಿ ನೀರನ್ನು ಬೆಂಗಳೂರಿಗೆ ಕೊಂಡೊಯ್ಯುವ ಯೋಜನೆಯನ್ನು ವಿರೋಧಿಸುವ ನಿಟ್ಟಿನಲ್ಲಿ ಬಿಜೆಪಿ ಲಾಭ ಪಡೆದುಕೊಳ್ಳಬಾರದು ಎಂದಿದ್ದಾರೆ.

ಕೇವಲ ಮೋದಿ ಹೆಸರು ಹೇಳಿಕೊಂಡು ಎಲ್ಲರೂ ಪ್ರಚಾರ ಮಾಡಿದ್ದಾರೆ. ಜನರೂ ಮೋದಿ ಮುಖ ನೋಡಿಕೊಂಡು ಮತ ಹಾಕಿದ್ದಾರೆ ಎಂಬುದನ್ನು ಇಲ್ಲಿನ ನಾಯಕರು ಮರೆಯಬಾರದು. ಈ ಹಿಂದೆ ಶೋಭಾ ಮೇಡಂ ಗೋಹತ್ಯೆ ಬಗ್ಗೆ ಮಾತನಾಡಿದ್ದರು. ಈಗ ಅವರದೇ ಸರ್ಕಾರ  ಕೇಂದ್ರದಲ್ಲಿದೆ. ರಾಷ್ಟ್ರಪತಿಗಳಿಂದ ಅಂಕಿತ ಹಾಕಿಸಿ, ಗೋ ಹತ್ಯೆ ನಿಷೇಧ ಕಾಯ್ದೆ ಜಾರಿಗೆ ತರಿಸಲಿ ಎಂದು ಸಂಸದೆ ಶೋಭಾ ಕರಂದ್ಲಾಜೆ ವಿರುದ್ಧವೂ ಬೇಳೂರು ಗೋಪಾಲಕೃಷ್ಣ ಹರಿಹಾಯ್ದಿದ್ದಾರೆ.

Vishwa News 24

Recent Posts

ಎಸ್‌ಟಿಪಿಯನ್ನು ಮೂಳೂರಿನಿಂದ ಬೆಳಪು ಪ್ರದೇಶಕ್ಕೆ ಸ್ಥಳಾಂತರ ಮಾಡಿದರೆ ಕಾಪು ಪುರಸಭೆಗೆ ಸಂಪೂರ್ಣ ಸ್ವಾಗತ : ದೇವಿಪ್ರಸಾದ್ ಶೆಟ್ಟಿ – vishwanews24

ಬೆಳಪು ಪ್ರದೇಶದಲ್ಲಿ ಎಲ್ಲಾ ಅಗತ್ಯ ಸೌಲಭ್ಯಗಳೊಂದಿಗೆ ಘಟಕ ನಿರ್ಮಿಸಿದರೆ ನಮ್ಮಿಂದ ಯಾವುದೇ ವಿರೋಧ ಇರುವುದಿಲ್ಲ : ದೇವಿಪ್ರಸಾದ್ ಶೆಟ್ಟಿ ಮೂಳೂರು…

1 day ago

ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ – vishwanews24

ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ ಬೆಳಗಾವಿ: ಪ್ರಿಯಕರನ ಜೊತೆ…

1 day ago

ಬಿಜೆಪಿ ನಡೆಸಿರುವ ಅಪವಿತ್ರ ಮೈತ್ರಿ ಇತಿಹಾಸವನ್ನು ದೇಶ ಮರೆತಿಲ್ಲ : ಬಿ.ಕೆ.ಹರಿಪ್ರಸಾದ್ – vishwanews24

ದೇಶದ ಜಾತ್ಯತೀತ ಮೌಲ್ಯಗಳನ್ನು ರಕ್ಷಿಸಲು ಕಾಂಗ್ರೆಸ್ ಪಕ್ಷ ಸದಾ ಸಮಾನ ಚಿಂತನೆಯ ಪಕ್ಷಗಳೊಂದಿಗೆ ಕೈಜೋಡಿಸಿದೆ : ಬಿ.ಕೆ.ಹರಿಪ್ರಸಾದ್ ಬೆಂಗಳೂರು: ‘ಬಿಜೆಪಿ…

1 day ago

ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ – vishwanews24

ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ ಪಡುಬಿದ್ರಿ: ಸನಾತನ ಫೌಂಡೇಶನ್‌ನ ಅಧ್ಯಕ್ಷ,…

1 day ago

ವಿವಾಹಿತ ಮಹಿಳೆ  ಜತೆ ಲಿವ್ ಇನ್ ರಿಲೇಶನ್‌ ಶಿಪ್‌ನಲ್ಲಿದ್ದ ಯುವಕ ಶವವಾಗಿ ಪತ್ತೆ  – vishwanews24

ವಿವಾಹಿತ ಮಹಿಳೆ ಜತೆ ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ಶವವಾಗಿ ಪತ್ತೆ  ಬೆಂಗಳೂರು: ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ನೇಣುಬಿಗಿದ…

1 day ago

ಬಿಜೆಪಿ ನಾಯಕ ಸುವೇಂದು ಅಧಿಕಾರಿ ಬಂಗಾಳದ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕಾರ – vishwanews24

ಪಶ್ಚಿಮ ಬಂಗಾಳದ ರಾಜಕೀಯ ಇತಿಹಾಸದಲ್ಲಿ ಹೊಸ ಪರ್ವ.. ಬಿಜೆಪಿ ಮೊದಲ ಸಿಎಂ ಆಗಿ ಪ್ರಮಾಣ ಸ್ವೀಕಾರ.. ಐತಿಹಾಸಿಕ ಕ್ಷಣಕ್ಕೆ ಮೋದಿ,…

2 days ago