ಬೆಂಗಳೂರು: ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಸಂಬಂಧ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ವಿರುದ್ಧ ಪೋಕ್ಸೋ ಪ್ರಕರಣ ದಾಖಲಾಗಿದೆ. ಇದರ ಬೆನ್ನಲ್ಲೇ ಡಿಸಿಎಂ ಡಿಕೆ ಶಿವಕುಮಾರ್ ಅವರು ಗೃಹ ಸಚಿವ ಡಾ.ಜಿ. ಪರಮೇಶ್ವರ ಅವರ ನಿವಾಸಕ್ಕೆ ಭೇಟಿ ನೀಡಿ ಮಾತುಕತೆ ನಡೆಸಿದ್ದಾರೆ. ಬಳಿಕ ಮಾತನಾಡಿದ ಡಿಕೆ ಶಿವಕುಮಾರ್, ಇದೊಂದು ಸೂಕ್ಷ್ಮ ವಿಷಯವಾಗಿರುವುದರಿಂದ ಗೃಹ ಸಚಿವರೇ ಮಾತಾಡುತ್ತಾರೆ ಎಂದರು.
ನಂತರ ಮಾತನಾಡಿದ ಪರಮೇಶ್ವರ್, ಯಡಿಯೂರಪ್ಪ ಒಬ್ಬ ಹಿರಿಯ ರಾಜಕಾರಣಿ. ಇದರಲ್ಲಿ ಯಾವುದೇ ರಾಜಕೀಯ ದುರುದ್ದೇಶ ಇಲ್ಲ. ನಿನ್ನೆ ರಾತ್ರಿ ಒಬ್ಬ ಮಹಿಳೆ ದೂರು ಕೊಟ್ಟಿದ್ದಾರೆ. ಇದರನ್ನು ಪರಿಗಣಿಸಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಕಾನೂನು ಪ್ರಕಾರ ಪೊಲೀಸರು ತನಿಖೆ ಮಾಡುತ್ತಿದ್ದಾರೆ ಎಂದರು.
ಯಡಿಯೂರಪ್ಪ ವಿರುದ್ಧ ದೂರು ನೀಡಿದ ಮಹಿಳೆ ಮಾನಸಿಕ ಅಸ್ವಸ್ಥೆ ಅಂತಾ ಹೇಳುತ್ತಿದ್ದಾರೆ ಎಂದ ಪರಮೇಶ್ವರ್, ಅವರು ದೂರನ್ನು ಟೈಪ್ ಮಾಡಿ ಕೊಟ್ಟಿದ್ದಾರೆ. ಆದರೆ ಕೈಯಿಂದ ಬರೆದು ದೂರು ಕೊಟ್ಟಿದ್ದಲ್ಲ. ಟೈಪ್ ಕಾಪಿ ಕೊಟ್ಟಿದ್ದಾರೆ ಎಂದು ಅಧಿಕಾರಿಗಳು ಹೇಳಿದ್ದಾರೆ. ಈ ಪ್ರಕರಣ ಒಬ್ಬ ಮಾಜಿ ಸಿಎಂ ವಿಷಯಕ್ಕೆ ಸಂಬಂಧಿಸಿದೆ. ಯಾವುದೇ ವಿಷಯ ಆದರೂ ಎಚ್ಚರಿಕೆಯಿಂದ ಹೇಳಬೇಕು ಎಂದರು.
ತನಿಖೆ ಆಗುವವರೆಗೂ ಯಾವುದೇ ವಿಷಯ ತಿಳಿಸಲು ಸಾಧ್ಯವಿಲ್ಲ. ಇದು ಒಬ್ಬ ಮಾಜಿ ಮುಖ್ಯಮಂತ್ರಿ ವಿಷಯಕ್ಕೆ ಸಂಬಂಧಿಸಿದ್ದಾಗಿದೆ. ಇದು ಬಹಳ ಸೂಕ್ಷ್ಮ ವಿಷಯವಾಗಿದೆ. ಮಹಿಳೆಗೆ ರಕ್ಷಣೆ ಅಗತ್ಯ ಬಿದ್ದರೆ ಕೊಡುತ್ತೇವೆ. ಅವರನ್ನು ವಶಕ್ಕೆ ಪಡೆಯುವ ಸಂಬಂಧ ತನಿಖೆಯ ಮೇಲೆ ನಿರ್ಧಾರ ಮಾಡಲಾಗುತ್ತದೆ. ಇದರ ಬಗ್ಗೆ ಡಿಸಿಎಂ ಡಿಕೆ ಶಿವಕುಮಾರ್ ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ಜೊತೆಗೂ ಚರ್ಚೆ ಮಾಡಿದ್ದೇವೆ. ಮುಖ್ಯಮಂತ್ರಿ ಕೂಡ ಇದರ ಬಗ್ಗೆ ಮಾಹಿತಿ ಪಡೆದಿದ್ದಾರೆ ಎಂದರು.
ಬೆಂಗಳೂರು: ಸ್ಕೂಟರ್ ಸ್ಕಿಡ್ ಆಗಿ ಲಾರಿಗೆ ಡಿಕ್ಕಿ; ಮಹಿಳೆ ಸಾವು ಬೆಂಗಳೂರು : ಸಿಲಿಕಾನ್ ಸಿಟಿಯ ಎಲೆಕ್ಟ್ರಾನಿಕ್ ಸಿಟಿಯ ಜನನಿಬಿಡ…
ಹಿಂದೂ ಸಂಘಟನೆಗಳ ಮುಖಂಡರಿಗೆ ಉಡುಪಿ ಜಿಲ್ಲೆಗೆ ಪ್ರವೇಶ ನಿಷೇಧಿಸಿರುವುದು ಸರ್ಕಾರದ ಪ್ರಜಾಪ್ರಭುತ್ವ ವಿರೋಧಿ ನೀತಿ : ದಿನೇಶ್ ಮೆಂಡನ್ ಆರೋಪ…
ಉಡುಪಿ ಜಿಲ್ಲೆಗೆ ಹಿಂದೂ ಸಂಘಟನೆಗಳ ಮುಖಂಡರನ್ನು ನಿರ್ಬಂಧಿಸಿರುವುದು ಖಂಡನೀಯ : ಸುನಿಲ್ ಕೆ.ಆರ್ ಉಡುಪಿ: ಕಾಪು ಪ್ರಖಂಡದ ಬಜರಂಗದಳದ ವತಿಯಿಂದ…
ಕಟಪಾಡಿ: ಮಟ್ಟು ಬೀಚ್ನಲ್ಲಿ ಮುಂದುವರಿದ ಕಡಲ್ಕೊರೆತ ಕಟಪಾಡಿ: ಕಾಪು ತಾಲೂಕು ಕೋಟೆ ಗ್ರಾ.ಪಂ. ವ್ಯಾಪ್ತಿಯ ಮಟ್ಟು ಬೀಚ್ನಲ್ಲಿ ಕಡಲ್ಕೂರೆತ ಮುಂದುವರಿದಿದೆ.…
ರಾಜ್ಯದ ಹಿತಕ್ಕಾಗಿ ಬಂದ್ ವಾಪಸ್ ಪಡೆದಿರುವ ಎಲ್ಲಾ ಸಂಘಟನೆಗಳಿಗೆ ಧನ್ಯವಾದಗಳು :ಸಿಎಂ ಬೆಂಗಳೂರು: ʻರಾಜ್ಯದ ಹಿತಕ್ಕಾಗಿ ಬಂದ್ ವಾಪಸ್ ಪಡೆದಿರುವ…
ಉಡುಪಿಯ ಪ್ರಥಮ ಮಹಿಳಾ ಕಮರ್ಷಿಯಲ್ ಪೈಲಟ್ ಆಗಿ ಕೌಡೂರಿನ ಶೈನಿ ಅಸ್ಮಾ ಸಲ್ಡಾನಾ ಕಾರ್ಕಳ: ಕೌಡೂರು ರಂಗನಪಲೆಯ ಶೈನಿ ಅಸ್ಮಾ…