Featured

ಯಡಿಯೂರಪ್ಪ ಶ್ರೇಷ್ಠ ನಾಯಕ. ನನ್ನ ಬೆಳವಣಿಗೆಯಲ್ಲಿ ಅವರ ಮಾರ್ಗದರ್ಶನವಿದೆ :ನಳಿನ್‌ ಕುಮಾರ್‌ ಕಟೀಲ್ -Vishwanews24

ಚಿಕ್ಕೋಡಿ: ಯಡಿಯೂರಪ್ಪ ಶ್ರೇಷ್ಠ ನಾಯಕ. ತಮ್ಮ ಬೆಳವಣಿಗೆಯಲ್ಲಿ ಅವರ ಮಾರ್ಗದರ್ಶನವಿದೆ. ಅವರು ಹೇಳಿದ ಮಾತುಗಳನ್ನು ನಾನು ಅಕ್ಷರಶಃ ಪಾಲಿಸುತ್ತೇನೆ’ನನ್ನ ಹಾಗೂ ಅವರ ಮಧ್ಯೆ ಯಾವುದೇ ಭಿನ್ನಮತ ಇಲ್ಲ’ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳಿನ್‌ ಕುಮಾರ್‌ ಕಟೀಲ್ ಹೇಳಿದರು.

‘ರಾಜ್ಯ ಬಿಜೆಪಿಗೆ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಅವರೇ ಸುಪ್ರೀಂ. ನಿತ್ಯವೂ ಎರಡು ಬಾರಿ ಅವರೊಂದಿಗೆ ನಾನು ಮಾತುಕತೆ ನಡೆಸುತ್ತೇನೆ. ಪದಾಧಿಕಾರಿಗಳ ನೇಮಕ ಸೇರಿ ಪ್ರತಿ ವಿಷಯದಲ್ಲೂ ಅವರ ಮಾರ್ಗದರ್ಶನ ಪಡೆಯುತ್ತೇನೆ. ಎಂದರು.

ಚಿಕ್ಕೋಡಿ ಲೋಕಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಗಾಂಧಿ ಸಂಕಲ್ಪಯಾತ್ರೆಗೆ ತಾಲ್ಲೂಕಿನ ಯೆಕ್ಸಂಬಾ ಗ್ರಾಮದ ಬೀರೇಶ್ವರ ಮಂದಿರದ ಬಳಿ ಬುಧವಾರ ಚಾಲನೆ ನೀಡಿ ಅವರು ಮಾತನಾಡಿದರು.

‘ಬಿಜೆಪಿ ಅಧ್ಯಕ್ಷರಾದ ನಂತರತಮ್ಮ ಮತ್ತು ಯಡಿಯೂರಪ್ಪ ಮಧ್ಯೆ ಜಟಾಪಟಿ ನಡೆಯುತ್ತಿದೆ ಎಂದು ಮಾಧ್ಯಮಗಳಲ್ಲಿ ಟೀಕೆ ಟಿಪ್ಪಣಿಗಳು ಬರುತ್ತಿವೆ. ನಮ್ಮ ಮಧ್ಯೆ ಜಗಳ ಹುಟ್ಟುಹಾಕುವ ಕೆಲಸ ನಡೆಯುತ್ತಿದೆ’ ಎಂದು ಆಕ್ರೋಶ ವ್ಯಕ್ತಪಡಿಸಿದರು.

‘ಯಡಿಯೂರಪ್ಪ ಶ್ರೇಷ್ಠ ನಾಯಕ. ತಮ್ಮ ಬೆಳವಣಿಗೆಯಲ್ಲಿ ಅವರ ಮಾರ್ಗದರ್ಶನವಿದೆ. ಅವರು ಹೇಳಿದ ಮಾತುಗಳನ್ನು ನಾನು ಅಕ್ಷರಶಃ ಪಾಲಿಸುತ್ತೇನೆ’ ಎಂದರು.

‘ರಾಜ್ಯದಲ್ಲಿ ನೆರೆ- ಬರದಂಥ ಸವಾಲಿನ ಕಾಲಘಟ್ಟದಲ್ಲಿ ಯಡಿಯೂರಪ್ಪ ಮುಖ್ಯಮಂತ್ರಿ ಸ್ಥಾನಕ್ಕೇರಿದ್ದಾರೆ. ಅವರಿಗೆ ಬಲ ನೀಡುವುದು ನನ್ನ ಜವಾಬ್ದಾರಿ. ಕೇಂದ್ರ ಮತ್ತು ರಾಜ್ಯದಲ್ಲಿ ಬಿಜೆಪಿ ಸರ್ಕಾರವೇ ಇದ್ದು, ಕಾರ್ಯಕರ್ತರು ಮತ್ತು ಪಕ್ಷದ ಪದಾಧಿಕಾರಿಗಳು ಎಚ್ಚರಿಕೆಯಿಂದ ಇರಬೇಕು. ಪಕ್ಷದ ವೇದಿಕೆ ಹೊರತುಪಡಿಸಿ ಬೇರೆಲ್ಲೂ ಬಹಿರಂಗ ಹೇಳಿಕೆ ನೀಡಬಾರದು’ ಎಂದು ಸೂಚಿಸಿದರು.

‘ಯಡಿಯೂರಪ್ಪ ನೇತೃತ್ವದಲ್ಲಿ ನಾನು ಹಾಗೂ ಬಿಜೆಪಿ ಸಂಸದರು ಸದ್ಯದಲ್ಲೇ ಪ್ರಧಾನಿ ಅವರನ್ನು ಭೇಟಿ ಮಾಡಿ ನೆರೆ ಪರಿಹಾರಕ್ಕೆ ಮನವಿ ಸಲ್ಲಿಸಲಿದ್ದೇವೆ’ ಎಂದು ತಿಳಿಸಿದರು.

Vishwa News 24

Recent Posts

ಮಹಿಳೆಯರನ್ನು ಸಬಲೀಕರಣ ಮಾಡುವ ಕೆಲಸವನ್ನ ನಮ್ಮ ಸರಕಾರ ಪ್ರಾಮಾಣಿಕವಾಗಿ ಮಾಡುತ್ತಿದೆ : ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ – vishwanews24

ಗ್ಯಾರಂಟಿ ಯೋಜನೆಗಳಿಂದ ಮಹಿಳಾ ಸಬಲೀಕರಣ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಬೆಂಗಳೂರು: ಮಹಿಳೆಯರನ್ನು ಸಬಲೀಕರಣ ಮಾಡುವ ಕೆಲಸವನ್ನು ನಮ್ಮ ಸರಕಾರ ಪ್ರಾಮಾಣಿಕವಾಗಿ…

10 hours ago

ಒಣಗಿದ ದಾಸವಾಳ ನುಂಗಿ ಆರೂವರೆ ತಿಂಗಳ ಮಗು ಉಸಿರುಗಟ್ಟಿ ಸಾವು – vishwanews24

ಒಣಗಿದ ದಾಸವಾಳ ನುಂಗಿ ಆರೂವರೆ ತಿಂಗಳ ಮಗು ಉಸಿರುಗಟ್ಟಿ ಸಾವು ಮೈಸೂರು: ಒಣಗಿದ ದಾಸವಾಳ ಹೂನುಂಗಿ ಮಗು ಉಸಿರುಗಟ್ಟಿ ಸಾವನ್ನಪ್ಪಿದ…

10 hours ago

ಏ. 2ರಂದು ಕುಂದಾಪುರ ಭಂಡಾರ್‌ಕಾರ್ಸ್ ಕಾಲೇಜಿನಲ್ಲಿ ಜಿಲ್ಲಾ ಮಟ್ಟದ ಉದ್ಯೋಗ ಮೇಳ – vishwanews24

ಏ. 2ರಂದು ಕುಂದಾಪುರ ಭಂಡಾರ್‌ಕಾರ್ಸ್ ಕಾಲೇಜಿನಲ್ಲಿ ಜಿಲ್ಲಾ ಮಟ್ಟದ ಉದ್ಯೋಗ ಮೇಳ ಉಡುಪಿ : ಜಿಲ್ಲಾಡಳಿತ, ಜಿಪಂ, ಕೌಶಲ್ಯಾಭಿವೃದ್ಧಿ, ಉದ್ಯಮ…

10 hours ago

ಅಡುಗೆ ಅನಿಲದ ಅಭಾವ – ತಾತ್ಕಾಲಿಕವಾಗಿ ಸೌದೆ ಒಲೆ ಬಳಸುವಂತೆ ಸಚಿವ ಕೆ.ಹೆಚ್. ಮುನಿಯಪ್ಪ ಮನವಿ – vishwanews24

ಅಡುಗೆ ಅನಿಲದ ಅಭಾವ - ತಾತ್ಕಾಲಿಕವಾಗಿ ಸೌದೆ ಒಲೆ ಬಳಸುವಂತೆ ಸಚಿವ ಕೆ.ಹೆಚ್. ಮುನಿಯಪ್ಪ ಮನವಿ ಬೆಂಗಳೂರು : ಗಲ್ಫ್…

11 hours ago

ತೊಕ್ಕೊಟ್ಟು : ಆರಿಫ್ ಕೊಲೆ ಪ್ರಕರಣ ; ಆರು ಆರೋಪಿಗಳು ಭಾಗಿ – ಸಿಸಿಬಿ ಎಸಿಪಿ ತಂಡದಿಂದ ಮುಂದಿನ ತನಿಖೆ : ಪೊಲೀಸ್ ಆಯುಕ್ತ – vishwanews24

ತೊಕ್ಕೊಟ್ಟು : ಆರಿಫ್ ಕೊಲೆ ಪ್ರಕರಣ ; ಆರು ಆರೋಪಿಗಳು ಭಾಗಿ - ಸಿಸಿಬಿ ಎಸಿಪಿ ತಂಡದಿಂದ ಮುಂದಿನ ತನಿಖೆ…

11 hours ago

ಕಾಪು : ಇಲಿ ಪಾಷಾಣ ಸೇವಿಸಿ ವ್ಯಕ್ತಿ ಆತ್ಮಹತ್ಯೆ – vishwanews24

ಕಾಪು : ಇಲಿ ಪಾಷಾಣ ಸೇವಿಸಿ ವ್ಯಕ್ತಿ ಆತ್ಮಹತ್ಯೆ ಕಾಪು: ಉಳಿಯಾರಗೋಳಿ ಗ್ರಾಮದ ನೀಲಾಧರ ಬಂಗೇರ (58) ಇಲಿ ಪಾಷಾಣ…

11 hours ago