Featured

ಯಡಿಯೂರಪ್ಪ ಶ್ರೇಷ್ಠ ನಾಯಕ. ನನ್ನ ಬೆಳವಣಿಗೆಯಲ್ಲಿ ಅವರ ಮಾರ್ಗದರ್ಶನವಿದೆ :ನಳಿನ್‌ ಕುಮಾರ್‌ ಕಟೀಲ್ -Vishwanews24

ಚಿಕ್ಕೋಡಿ: ಯಡಿಯೂರಪ್ಪ ಶ್ರೇಷ್ಠ ನಾಯಕ. ತಮ್ಮ ಬೆಳವಣಿಗೆಯಲ್ಲಿ ಅವರ ಮಾರ್ಗದರ್ಶನವಿದೆ. ಅವರು ಹೇಳಿದ ಮಾತುಗಳನ್ನು ನಾನು ಅಕ್ಷರಶಃ ಪಾಲಿಸುತ್ತೇನೆ’ನನ್ನ ಹಾಗೂ ಅವರ ಮಧ್ಯೆ ಯಾವುದೇ ಭಿನ್ನಮತ ಇಲ್ಲ’ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳಿನ್‌ ಕುಮಾರ್‌ ಕಟೀಲ್ ಹೇಳಿದರು.

‘ರಾಜ್ಯ ಬಿಜೆಪಿಗೆ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಅವರೇ ಸುಪ್ರೀಂ. ನಿತ್ಯವೂ ಎರಡು ಬಾರಿ ಅವರೊಂದಿಗೆ ನಾನು ಮಾತುಕತೆ ನಡೆಸುತ್ತೇನೆ. ಪದಾಧಿಕಾರಿಗಳ ನೇಮಕ ಸೇರಿ ಪ್ರತಿ ವಿಷಯದಲ್ಲೂ ಅವರ ಮಾರ್ಗದರ್ಶನ ಪಡೆಯುತ್ತೇನೆ. ಎಂದರು.

ಚಿಕ್ಕೋಡಿ ಲೋಕಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಗಾಂಧಿ ಸಂಕಲ್ಪಯಾತ್ರೆಗೆ ತಾಲ್ಲೂಕಿನ ಯೆಕ್ಸಂಬಾ ಗ್ರಾಮದ ಬೀರೇಶ್ವರ ಮಂದಿರದ ಬಳಿ ಬುಧವಾರ ಚಾಲನೆ ನೀಡಿ ಅವರು ಮಾತನಾಡಿದರು.

‘ಬಿಜೆಪಿ ಅಧ್ಯಕ್ಷರಾದ ನಂತರತಮ್ಮ ಮತ್ತು ಯಡಿಯೂರಪ್ಪ ಮಧ್ಯೆ ಜಟಾಪಟಿ ನಡೆಯುತ್ತಿದೆ ಎಂದು ಮಾಧ್ಯಮಗಳಲ್ಲಿ ಟೀಕೆ ಟಿಪ್ಪಣಿಗಳು ಬರುತ್ತಿವೆ. ನಮ್ಮ ಮಧ್ಯೆ ಜಗಳ ಹುಟ್ಟುಹಾಕುವ ಕೆಲಸ ನಡೆಯುತ್ತಿದೆ’ ಎಂದು ಆಕ್ರೋಶ ವ್ಯಕ್ತಪಡಿಸಿದರು.

‘ಯಡಿಯೂರಪ್ಪ ಶ್ರೇಷ್ಠ ನಾಯಕ. ತಮ್ಮ ಬೆಳವಣಿಗೆಯಲ್ಲಿ ಅವರ ಮಾರ್ಗದರ್ಶನವಿದೆ. ಅವರು ಹೇಳಿದ ಮಾತುಗಳನ್ನು ನಾನು ಅಕ್ಷರಶಃ ಪಾಲಿಸುತ್ತೇನೆ’ ಎಂದರು.

‘ರಾಜ್ಯದಲ್ಲಿ ನೆರೆ- ಬರದಂಥ ಸವಾಲಿನ ಕಾಲಘಟ್ಟದಲ್ಲಿ ಯಡಿಯೂರಪ್ಪ ಮುಖ್ಯಮಂತ್ರಿ ಸ್ಥಾನಕ್ಕೇರಿದ್ದಾರೆ. ಅವರಿಗೆ ಬಲ ನೀಡುವುದು ನನ್ನ ಜವಾಬ್ದಾರಿ. ಕೇಂದ್ರ ಮತ್ತು ರಾಜ್ಯದಲ್ಲಿ ಬಿಜೆಪಿ ಸರ್ಕಾರವೇ ಇದ್ದು, ಕಾರ್ಯಕರ್ತರು ಮತ್ತು ಪಕ್ಷದ ಪದಾಧಿಕಾರಿಗಳು ಎಚ್ಚರಿಕೆಯಿಂದ ಇರಬೇಕು. ಪಕ್ಷದ ವೇದಿಕೆ ಹೊರತುಪಡಿಸಿ ಬೇರೆಲ್ಲೂ ಬಹಿರಂಗ ಹೇಳಿಕೆ ನೀಡಬಾರದು’ ಎಂದು ಸೂಚಿಸಿದರು.

‘ಯಡಿಯೂರಪ್ಪ ನೇತೃತ್ವದಲ್ಲಿ ನಾನು ಹಾಗೂ ಬಿಜೆಪಿ ಸಂಸದರು ಸದ್ಯದಲ್ಲೇ ಪ್ರಧಾನಿ ಅವರನ್ನು ಭೇಟಿ ಮಾಡಿ ನೆರೆ ಪರಿಹಾರಕ್ಕೆ ಮನವಿ ಸಲ್ಲಿಸಲಿದ್ದೇವೆ’ ಎಂದು ತಿಳಿಸಿದರು.

Vishwa News 24

Recent Posts

ಉದ್ಯಾವರ : ಪಾಪನಾಶಿನಿ ಹೊಳೆಯ ಸೇತುವೆಯ ಮೇಲೆ ಸ್ಕೂಟರ್ ಪತ್ತೆ ; ವ್ಯಕ್ತಿ ಹೊಳೆಗೆ ಹಾರಿರುವ ಶಂಕೆ -vishwanews24

ಉದ್ಯಾವರ : ಪಾಪನಾಶಿನಿ ಹೊಳೆಯ ಸೇತುವೆಯ ಮೇಲೆ ಸ್ಕೂಟರ್ ಪತ್ತೆ ; ವ್ಯಕ್ತಿ ಹೊಳೆಗೆ ಹಾರಿರುವ ಶಂಕೆ ಉಡುಪಿ: ಉದ್ಯಾವರ…

12 hours ago

ಮಂಗಳೂರು: ಕಾಂಗ್ರೆಸ್ ಗಾಗಿ ಕೆಲಸ ಮಾಡದವರು ಪಕ್ಷದ ಬಗ್ಗೆ ಮಾತನಾಡುವುದು ಬೇಡ: ಸಚಿವ ಯು.ಟಿ.ಖಾದರ್ -vishwanews24

ಮಂಗಳೂರು: ಕಾಂಗ್ರೆಸ್ ಗಾಗಿ ಕೆಲಸ ಮಾಡದವರು ಪಕ್ಷದ ಬಗ್ಗೆ ಮಾತನಾಡುವುದು ಬೇಡ: ಸಚಿವ ಯು.ಟಿ.ಖಾದರ್ ಮಂಗಳೂರು: ಕಾಂಗ್ರೆಸ್ ಪಕ್ಷಕ್ಕಾಗಿ ಕೆಲಸ…

12 hours ago

ಉಡುಪಿ: ನೀಟ್ ಪರೀಕ್ಷೆಗೆ ತಡವಾಗಿ ಬಂದ ವಿದ್ಯಾರ್ಥಿನಿಗೆ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಿದ ಶಾಸಕ ಯಶ್‌ಪಾಲ್ ಸುವರ್ಣಗೆ ವ್ಯಾಪಕ ಶ್ಲಾಘನೆ -vishwanews24

ಉಡುಪಿ: ನೀಟ್ ಪರೀಕ್ಷೆಗೆ ತಡವಾಗಿ ಬಂದ ವಿದ್ಯಾರ್ಥಿನಿಗೆ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಿದ ಶಾಸಕ ಯಶ್‌ಪಾಲ್ ಸುವರ್ಣಗೆ ವ್ಯಾಪಕ ಶ್ಲಾಘನೆ…

12 hours ago

ಕಾರ್ಕಳ : ಯಕ್ಷರಂಗಾಯಣದ ಹೆಸರನ್ನು ಬದಲಾಯಿಸಿರುವುದು ಅತ್ಯಂತ ಬೇಜವಾಬ್ದಾರಿ ಹಾಗೂ ಏಕಪಕ್ಷೀಯ ನಿರ್ಧಾರ : ಸುನಿಲ್‌ ಕುಮಾರ್‌ ಆಕ್ರೋಶ -vishwanews24

ಕಾರ್ಕಳ :ಯಕ್ಷರಂಗಾಯಣ ದ ಹೆಸರು ಬದಲಾವಣೆಗೆ ಶಾಸಕ ಸುನಿಲ್‌ ಕುಮಾರ್‌ ಆಕ್ರೋಶ ಮೂಲ ಹೆಸರನ್ನೇ ಉಳಿಸಿಕೊಳ್ಳಲು ಸರಕಾರಕ್ಕೆ ಆಗ್ರಹ ಕಾರ್ಕಳ:…

16 hours ago

ಟಿಎಂಸಿ ಅಧ್ಯಕ್ಷ ಸ್ಥಾನದಿಂದ ಮಮತಾ ಬ್ಯಾನರ್ಜಿ ವಜಾ -vishwanews24

ಟಿಎಂಸಿ ಅಧ್ಯಕ್ಷ ಸ್ಥಾನದಿಂದ ಮಮತಾ ಬ್ಯಾನರ್ಜಿ ವಜಾ ಕೋಲ್ಕತ್ತಾ : ಪಶ್ಚಿಮ ಬಂಗಾಳದ ಮಾಜಿ ಸಿಎಂ ಮಮತಾ ಬ್ಯಾನರ್ಜಿ ಅವರನ್ನು…

16 hours ago

ಉಡುಪಿ : ಹೆಣ್ಣು ಮಗುವಿನ ಅಕ್ರಮ ಮಾರಾಟ ಪ್ರಕರಣ ; ವೈದ್ಯ ಸಹಿತ ನಾಲ್ವರು ಆರೋಪಿಗಳ ಬಂಧನ -vishwanews24

ಉಡುಪಿ : ಹೆಣ್ಣು ಮಗುವಿನ ಅಕ್ರಮ ಮಾರಾಟ ಪ್ರಕರಣ ; ವೈದ್ಯ ಸಹಿತ ನಾಲ್ವರು ಆರೋಪಿಗಳ ಬಂಧನ ಉಡುಪಿ :…

16 hours ago